ಹಸಿವಿನಿಂದ ಬಳಲುತ್ತಿರುವ ಅಲೆಮಾರಿ ಕುಟುಂಬಗಳಿಗೆ ಬೇಕಿದೆ ಆಹಾರ ಪಡಿತರದ ಭದ್ರತೆ
Team Udayavani, Apr 17, 2020, 11:24 AM IST
ಗಂಗಾವತಿ: ಕೋವಿಡ್-19 ರೋಗವನ್ನು ತಡೆಯಲು ದೇಶದಾದ್ಯಂತ ವಿಧಿಸಿರುವ ಕರ್ಪ್ಯೂ ಹಿನ್ನೆಲೆಯಲ್ಲಿ ಕೂಲಿಕಾರ್ಮಿಕರರು ಬಡವರು ಹಾಗೂ ಅಲೆಮಾರಿ ಜನಾಂಗದ ಕುಟುಂಬಗಳು ಆಹಾರದ ಕೊರತೆಯಿಂದ ಬಳಲುತ್ತಿವೆ. ನಗರದ ಹಿರೇಜಂತಗಲ್ ಗೆ ಹೋಗುವ ರಸ್ತೆಯ ಖಾಲಿ ಜಾಗದಲ್ಲಿರುವ ಅಲೆಮಾರಿ ಬುಡ್ಗಜಂಗಮ, ಚಿಂದೊಳ್ಳಿ ಹಾಗು ಚನ್ನದಾಸರ ಅಲೆಮಾರಿ ಜನಾಂಗದ 101 ಕುಟುಂಬದಲ್ಲಿ ಸುಮಾರು 320ಕ್ಕೂ ಹೆಚ್ಚು ಜನರಿದ್ದು ಇವರಿಗೆ ಊಟ ಮಾಡಲು ಅಕ್ಕಿ ದವಸಧಾನ್ಯಗಳ ಕೊರತೆಯುಂಟಾಗಿದೆ.
ಕಳೆದ 22ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯಿಂದ ಒಂದು ಕುಟುಂಬಕ್ಕೆ 5ಕೆಜಿ ಅಕ್ಕಿ 2ಕೆಜಿ ಗೋಧಿ ವಿತರಿಸಲಾಗಿತ್ತು. ಪುನಃ ಲಾಕ್ ಡೌನ್ ಮೇ.03 ರ ವರೆಗೆ ಮುಂದುವರಿಸಲಾಗಿದ್ದು ಅಲೆಮಾರಿಗಳಿಗೆ ಆಹಾರದ ಕೊರತೆಯಾಗಿದೆ.
ಇತ್ತೀಚೆಗೆ ಅಲೆಮಾರಿ ಕುಟುಂಬದವರು ಭಿಕ್ಷೆ ಬೇಡುವುದನ್ನು ನಿಲ್ಲಿಸಿ ಕೊಡ, ಕನ್ನಡಕ, ಹೆಲ್ಮೆಟ್, ಪಾತ್ರೆ ಸಾಮಾನು ಪ್ಲಾಸ್ಟಿಕ್ ಸಾಮಾನುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಾರೆ. ಕರ್ಪ್ಯೂ ಇರುವುದರಿಂದ ವ್ಯಾಪಾರ ಮಾಡಲು ಆಗದೇ ಮನೆಯಲ್ಲಿರುವುದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಪ್ರತಿ ಕುಟುಂಬಕ್ಕೆ ಅಕ್ಕಿ ದವಸಧಾನ್ಯ ಕೊಡುವಂತೆ ಅಲೆಮಾರಿಗಳು ಮನವಿ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.