ಅನಗತ್ಯ ವಾಹನಗಳ ಓಡಾಟಕ್ಕೆ ತಡೆ; ದಿಢೀರ್ ಕಾರ್ಯಾಚರಣೆ
Team Udayavani, Apr 18, 2020, 5:41 AM IST
ಉಡುಪಿ: ನಗರದಲ್ಲಿ ಅನಗತ್ಯವಾಗಿ ವಾಹನದಲ್ಲಿ ಓಡಾಡುತ್ತಿರುವವರಿಗೆ ಶುಕ್ರವಾರ ಸಂಜೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ನೇತೃತ್ವದಲ್ಲಿ ಉಡುಪಿ ಭಾಗದ ಕಲ್ಸಂಕ, ಕಲ್ಮಾಡಿ, ಮಲ್ಪೆ ಭಾಗದಲ್ಲಿ ಶುಕ್ರವಾರ ಸಂಜೆ ದಿಢೀರ್ ಕಾರ್ಯಚರಣೆ ನಡೆಸಲಾಯಿತು.
ಲಾಕ್ಡೌನ್ನನ್ನು ಮೇ 3ರ ವರೆಗೂ ವಿಸ್ತರಣೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ 11 ಗಂಟೆ ವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯುವ ಅವಕಾಶ ನೀಡಿ ಈ ಅವಧಿಯ ಮಾತ್ರ ಜನರ ಓಡಾಟಕ್ಕೆ ಅವಕಾಶ ನೀಡಿಲಾಗಿದೆ.
ಇದಾಗಿಯೂ ನಗರದಲ್ಲಿ ಗೊತ್ತುಪಡಿಸಿದ ಅವಧಿಯ ಬಳಿಕವೂ ವಾಹನಗಳು ಓಡಾಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ಪಿ ಎನ್. ವಿಷ್ಣುವರ್ಧನ್ ಅವರು ಖುದ್ದಾಗಿ ಕಲ್ಸಂಕ, ಕಲ್ಮಾಡಿ, ಮಲ್ಪೆ ಭಾಗದಲ್ಲಿ ಹಾದುಬರುವ ಮಾರ್ಗಗಳಲ್ಲಿ ತಪಾಸಣೆ ಮಾಡಿದರು. ಪಾಸ್ ಇಲ್ಲದೆ ಸುಮ್ಮನೆ ಓಡಾಡುತ್ತಿದ್ದ ವಾಹನಗಳನ್ನು ಸೀಜ್ ಮಾಡಿ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಪ ಪ್ರಚಾರ ಮಾಡಿ ಜನರನ್ನು ದಾರಿತಪ್ಪಿಸುವ ಮನೋಭಾವ ಬೇಡ.ಜಿಲ್ಲೆ ಆರೇಂಜ್ ಪಟ್ಟಿಯಲ್ಲಿದೆ. ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕೋವಿಡ್ 19 ಕೇಸ್ಗಳು ದಾಖಲಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಹೆಚ್ಚು ಜಾಗರೂಕತೆ ಮಾಡಬೇಕಾಗಿದೆ ಎಂದರು.
ಬೆಳಗಾಂ, ಬಿಜಾಪುರದಲ್ಲಿ ಆರಂಭದ ಹಂತದಲ್ಲಿ ಯಾವುದೇ ಕೋವಿಡ್ 19 ಪ್ರಕರಣಗಳಿರಲಿಲ್ಲ. ಅನಂತರ ಅನೇಕ ಪ್ರಕರಣಗಳು ದಾಖಲಾಗಿದೆ. ಹಾಗಾಗಿ ನಮ್ಮ ಜಿಲ್ಲೆಯಲ್ಲೂ ಇಷ್ಟು ಬೇಗ ಸುರಕ್ಷಿತ ಎಂದು ಘೋಷಣೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಜನ ಮನೆಯಲ್ಲೆ ಇದ್ದು ಸಹಕರಿಸಬೇಕು ಎಂದರು.
550 ವಾಹನಗಳ ವಶ
ಲಾಕ್ಡೌನ್ ಆದಂದಿನಿಂದ ಇಲ್ಲಿಯ ವರೆಗೆ 550ಕ್ಕೂ ಹೆಚ್ಚಿನ ವಾಹನಗಳನ್ನು ವಶಪಡಿಸಲಾಗಿದೆ. ಕೆಲವರು ಸ್ಥಳೀಯವಾಗಿ ಔಷಧಗಳು ಲಭ್ಯವಿದ್ದರೂ ಕಿಲೋಮೀಟರ್ ದೂರ ಬಂದು ಔಷಧ ಖರೀದಿಸಿ ಸುತ್ತಾಡುತ್ತಿದ್ದಾರೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸೂಚಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ 1 ಮತ್ತು ಕಾರುಗಳಲ್ಲಿ ಚಾಲಕ ಹಾಗೂ ಹಿಂಬದಿಯಲ್ಲಿ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದನ್ನು ಹೊರತು ಪಡಿಸಿ ಜನ ಸಂಚಾರಿಸಿದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ವಿಷ್ಣುವರ್ಧನ್ ತಿಳಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ, ಡಿವೈಎಸ್ಪಿ ಜಯಶಂಕರ್, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್, ತಹಶೀಲ್ದಾರ್ ಪ್ರದೀಪ್ ಕುಡೇìಕರ್, ನಗರ ಸಂಚಾರ ಠಾಣೆಯ ಉಪನಿರೀಕ್ಷಕ ಅಬ್ದುಲ್ ಖಾದರ್, ಪೊಲೀಸ್ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.