ಕನಿಷ್ಠ ಸಿಬಂದಿಯಿಂದ ಮಳೆಗಾಲದ ಸಿದ್ಧತೆಗೆ ಮುಂದಾದ ಮೆಸ್ಕಾಂ

ಮನೆ ಬಳಕೆಯ ವಿದ್ಯುತ್‌ಗೆ ಏರಿದ ಬೇಡಿಕೆ

Team Udayavani, Apr 18, 2020, 5:50 AM IST

ಕನಿಷ್ಠ ಸಿಬಂದಿಯಿಂದ ಮಳೆಗಾಲದ ಸಿದ್ಧತೆಗೆ ಮುಂದಾದ ಮೆಸ್ಕಾಂ

 ವಿಶೇಷ ವರದಿ-ಮಂಗಳೂರು: ಲಾಕ್‌ಡೌನ್‌ ನಡುವೆ ಮೆಸ್ಕಾಂ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿರಂತರ ನಿಗಾ ವಹಿಸುತ್ತಿದೆ. ಜತೆಗೆ ಮಳೆಗಾಲ ಪೂರ್ವದ ಸಿದ್ಧತಾ ಕಾರ್ಯಗಳನ್ನು ಕನಿಷ್ಠ ಸಂಖ್ಯೆಯ ಸಿಬಂದಿಯಿಂದಲೇ ನಡೆಸಲು ಮುಂದಾಗಿದೆ.

ಲಾಕ್‌ಡೌನ್‌ ಅನಂತರ ವಾಣಿಜ್ಯ ಮತ್ತು ಕೈಗಾರಿಕೆಗಳ ವಿದ್ಯುತ್‌ ಬಳಕೆ ಶೇ. 50ರಿಂದ 60ರಷ್ಟು ಕುಸಿದಿದೆ.

ಆದರೆ ಗೃಹ ಮತ್ತು ಕೃಷಿ ಉದ್ದೇಶದ ಬಳಕೆ ಹೆಚ್ಚಾಗಿದೆ. ಪ್ರಸ್ತುತ ಮೆಸ್ಕಾಂನ ಕೆಲವು ಕಚೇರಿಗಳಲ್ಲಿ ಶೇ.50ರಷ್ಟು ಸಿಬಂದಿಯ ಸೇವೆಯನ್ನಷ್ಟೇ ಪಡೆಯಲಾಗುತ್ತಿದೆ. ಅದೂ ಪಾಳಿಯ ಆಧಾರದಲ್ಲಿ. ಆದರೆ ಲೈನ್‌ಮನ್‌ಗಳು ಶೇ. 90ರಷ್ಟು ಕರ್ತವ್ಯದಲ್ಲಿದ್ದಾರೆ. ಸರಬರಾಜಿನಲ್ಲಿ ವ್ಯತ್ಯಯ ಉಂಟಾದರೆ ಮನೆಗಳಲ್ಲಿ, ಮುಖ್ಯವಾಗಿ ಆಸ್ಪತ್ರೆಗಳಿಗೆ ತೀವ್ರ ತೊಂದರೆಯಾಗುವುದರಿಂದ ನಿರಂತರ ವಿದ್ಯುತ್‌ ಪೂರೈಕೆಗೆ ಆದ್ಯತೆ ನೀಡಲಾಗುತ್ತಿದೆ.

ಗ್ಯಾಂಗ್‌ಮನ್‌ ನಿಯೋಜನೆ
ಈ ಬಾರಿಯೂ ಮಳೆಗಾಲದ ಸಿದ್ಧತೆ ಗಾಗಿ ಹೊರಗುತ್ತಿಗೆಯಲ್ಲಿ ಗ್ಯಾಂಗ್‌ಮನ್‌ ನಿಯೋಜನೆ ನಡೆಯುತ್ತಿದೆ. ಮರಗಳ ಕೊಂಬೆ ತುಂಡರಿಸುವುದು, ಅಪಾಯ ಕಾರಿಯಾಗಿರುವ ತಂತಿಗಳ ಬದಲಾವಣೆ ಇತ್ಯಾದಿ ಕೆಲಸಗಳಿಗೆ ಮುಂದಿನ ವಾರ ಚಾಲನೆ ದೊರೆಯಲಿದೆ. ಕಡಿಮೆ ಸಿಬಂದಿ ಬಳಸಿ ತೀರಾ ಅಗತ್ಯದ ಕೆಲಸ ಮಾತ್ರ ನಡೆಸಲು ನಿರ್ಧರಿಸಲಾಗಿದೆ.

ಸಲಕರಣೆ ಕೊರತೆ ಇಲ್ಲ

ಮೆಸ್ಕಾಂಗೆ ಅಗತ್ಯ ಸಲಕರಣೆಗಳ ಕೊರತೆ ಸದ್ಯಕ್ಕಿಲ್ಲ. ಕಳೆದ ವಾರ ಟ್ರಾನ್ಸ್‌ಫಾರ್ಮರ್‌ಗಳ ಅಗತ್ಯವಿದ್ದ ಸಂದರ್ಭದಲ್ಲಿ ಮೆಸ್ಕಾಂ ತನ್ನ ಲಾರಿಗಳನ್ನೇ ಬಳಸಿ 300 ಟ್ರಾನ್ಸ್‌ ಫಾರ್ಮರ್‌ಗಳನ್ನು ಬೆಂಗಳೂರಿನಿಂದ ತರಿಸಿದೆ.

ಬಿಲ್‌ ಪಾವತಿಗೆ ವಿನಾಯಿತಿ ಇಲ್ಲ
ಲಾಕ್‌ಡೌನ್‌ನಿಂದ ಗ್ರಾಹಕರು ತೊಂದರೆಗೊಳಗಾಗಿದ್ದು, ಈಗ ಬಿಲ್ಲಿಂಗ್‌ ಮಾಡುತ್ತಿಲ್ಲ. ಈ ಹಿಂದಿನ ಮೂರು ತಿಂಗಳುಗಳ ಸರಾಸರಿಯನ್ನು ಆಧರಿಸಿ ಈ ತಿಂಗಳ ಬಿಲ್‌ ಪಾವತಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಗ್ರಾಹಕರು ಹೀಗೆ ಪಾವತಿ ಮಾಡುತ್ತಿದ್ದಾರೆ. ಆದರೆ ವಿದ್ಯುತ್‌ ಬಿಲ್‌ ಪಾವತಿಗೆ ಸರಕಾರ ವಿನಾಯಿತಿ ನೀಡಿಲ್ಲ ಎಂದು ಮೆಸ್ಕಾಂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತುರ್ತು ಅಗತ್ಯ ಕಾಮಗಾರಿ ಮಾತ್ರ
ಮೆಸ್ಕಾಂ ಮಿತ ಸಿಬಂದಿಯ ಮೂಲಕ ಗರಿಷ್ಠ ಸೇವೆ ನೀಡುತ್ತಿದೆ. ಹೆಚ್ಚಿನ ಗ್ರಾಹಕರು ಮನೆಯಲ್ಲಿ ಇರುವುದರಿಂದ ಅಡೆತಡೆ ಇಲ್ಲದೆ ವಿದ್ಯುತ್‌ ಪೂರೈಕೆ ಅವಶ್ಯವಾಗಿದೆ. ಪ್ರಸ್ತುತ ಹೊಸ, ದೀರ್ಘ‌ಕಾಲೀನ ಕಾಮಗಾರಿ ಕೈಗೆತ್ತಿಕೊಳ್ಳದೆ ತುರ್ತು ಕೆಲಸಗಳನ್ನು ಮಾತ್ರ ನಡೆಸಲಾಗುತ್ತಿದೆ. ಮಳೆಗಾಲದ ಸಿದ್ಧತಾ ಕಾರ್ಯಗಳು ಮುಂದಿನ ವಾರದಿಂದ ಆರಂಭವಾಗಲಿವೆ.
 - ಸ್ನೇಹಲ್‌, ವ್ಯವಸ್ಥಾಪಕ ನಿರ್ದೇಶಕರು, ಮೆಸ್ಕಾಂ

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.