ಕೋವಿಡ್ 19 ಹೋರಾಟ: ಉಡುಪಿ ಮಾದರಿ

ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ; ನಿಯಂತ್ರಣದಲ್ಲೂ ಎತ್ತಿದ ಕೈ

Team Udayavani, Apr 18, 2020, 5:30 AM IST

ಕೋವಿಡ್ 19 ಹೋರಾಟ: ಉಡುಪಿ ಮಾದರಿ

ಉಡುಪಿ: ಕೋವಿಡ್ 19 ವೈರಾಣು ಪ್ರಸರಣವನ್ನು ತಡೆಯಲು ಉಡುಪಿ ಜಿಲ್ಲಾಡಳಿತವು ಅನುಸರಿಸಿದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಜಿಲ್ಲೆಯು ಕೋವಿಡ್‌-19 ಅಪಾಯದಿಂದ ಮುಕ್ತಿ ಹೊಂದುವ ದಾರಿಯಲ್ಲಿದೆ.

ಶಂಕಿತ ಕೋವಿಡ್ 19 ಲಕ್ಷಣಗಳನ್ನು ಹೊಂದಿರುವವರನ್ನು ಮುಂಚಿತ ವಾಗಿ ಗುರುತಿಸಿ, ಅವರನ್ನು ಪರೀಕ್ಷೆಗೊಳ ಪಡಿಸುವುದು, ಕ್ವಾರಂಟೈನ್‌ ಮಾಡುವುದು ಕೋವಿಡ್ 19 ಪ್ರಸರಣ ತಡೆಗೆ ಉಪಯುಕ್ತ ಕ್ರಮ. ಹೀಗೆ ಪರೀಕ್ಷೆಗಾಗಿ ಕಳುಹಿಸಿದ ಶಂಕಿತರ ಗಂಟಲುದ್ರವ ಮಾದರಿಗಳ ಸಂಖ್ಯೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಪ್ರತಿ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕಳುಹಿಸಲಾದ ಸರಾಸರಿ ಮಾದರಿಯಂತೆ ಈ ಲೆಕ್ಕಾಚಾರ ಹಾಕಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಇದನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.ದೇಶ ಮಟ್ಟದಲ್ಲಿ ಇದುವರೆಗೆ 10 ಲಕ್ಷ ಮಂದಿಗೆ ಸರಾಸರಿ 220ರಂತೆ 3 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಶೇ. 65 ಪರೀಕ್ಷೆ
ಮೂರ್‍ನಾಲ್ಕು ದಿನಗಳ ಹಿಂದೆ 403 ಮಾದರಿಗಳ ಸಂಗ್ರಹವಾಗಿದ್ದಾಗ ಜಿಲ್ಲೆ ರಾಜ್ಯದಲ್ಲಿ ಲಕ್ಷ ಜನಸಂಖ್ಯೆಗೆ ಶೇ.34ರ ಸಾಧನೆ ಮಾಡಿ ಪ್ರಥಮ ಸ್ಥಾನದಲ್ಲಿತ್ತು.

ಶುಕ್ರವಾರದ ವರೆಗೆ 839 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಜಿಲ್ಲೆಯ ಜನಸಂಖ್ಯೆ ಸುಮಾರು 13 ಲಕ್ಷ. ಅಂದರೆ ಲಕ್ಷ ಜನಸಂಖ್ಯೆಗೆ ಸುಮಾರು ಶೇ.65ರಂತೆ ಪರೀಕ್ಷೆನಡೆಸಲಾಗಿದೆ. ಇದು ದೇಶ ಮಟ್ಟ ದಲ್ಲೂ ಉತ್ತಮ ಸಾಧನೆಯೇ.

ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಎಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ ಎಂದರೆ, ಸೋಂಕು ದೃಢಪಟ್ಟ ವ್ಯಕ್ತಿಯಪ್ರಾಥಮಿಕ ಸಂಪರ್ಕ ಹೊಂದಿದ ವರು ಮಾತ್ರವಲ್ಲದೆ, ಪ್ರಾಥಮಿಕ ಸಂಪರ್ಕ ಹೊಂದಿದವರ ಸಂಪರ್ಕಿತರನ್ನೂ ಕ್ವಾರಂಟೈನ್‌ ಮಾಡಿಪರೀಕ್ಷೆಗೆ ಒಳಪಡಿಸಲಾಗಿದೆ ಸೋಂಕು ಸಮುದಾಯದತ್ತ ನುಗ್ಗದಂತೆ ಆರೋಗ್ಯ ಇಲಾಖೆ ಸಿಬಂದಿ, ಆಶಾ ಕಾರ್ಯಕರ್ತೆಯರು ಅತೀವ ಶ್ರಮ ವಹಿಸಿದ್ದಾರೆ.ಜಿಲ್ಲೆಯ ಗಡಿಗಳನ್ನು ಮುಚ್ಚಿರು ವುದೂ ಸೋಂಕು ನಿಯಂತ್ರಣದಲ್ಲಿ ಪ್ರಧಾನ ಪಾತ್ರ ವಹಿಸಿದೆ.

ತೀವ್ರ ಉಸಿರಾಟದ ಸಮಸ್ಯೆ
ಹೊಂದಿದವರ ಗಂಟಲ ದ್ರವ ಸಂಗ್ರಹಿಸಿದ ಸಾಧನೆಯಲ್ಲಿಯೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವಿದೆ. ಉಸಿರಾಟ ಸಮಸ್ಯೆ
ಯುಳ್ಳ ಸುಮಾರು 100 ಮಂದಿಯ ಮಾದರಿ ಸಂಗ್ರಹಿಸಲಾಗಿದೆ.

ಇಬ್ಬರು ಗುಣಮುಖ ಜಿಲ್ಲೆಯಲ್ಲಿ ಕೋವಿಡ್ 19 ದೃಢ
ಪಟ್ಟ ಮೂವರಲ್ಲಿ ಇಬ್ಬರು ಈಗಾಗಲೇ ಗುಣಮುಖರಾಗಿ ದ್ದಾರೆ, ಇನ್ನೊಬ್ಬರ ಮೊದಲ ವರದಿ ನೆಗೆಟಿವ್‌ ಬಂದಿದೆ. ಕೇಂದ್ರ ಆರೋಗ್ಯ ಇಲಾಖೆಯ ಮಾರ್ಗದರ್ಶಿ ಸೂತ್ರದನ್ವಯ ಜಿಲ್ಲೆಯು ಆರೆಂಜ್‌ ಮತ್ತು ನಾನ್‌ ಹಾಟ್‌ಸ್ಪಾಟ್‌ ವಲಯದಲ್ಲಿದೆ.

ಕೋವಿಡ್ 19 ಸೋಂಕುಪೀಡಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕದವರು ಹಾಗೂ ತೀವ್ರ ಉಸಿರಾಟದ ಸಮಸ್ಯೆಯುಳ್ಳವರನ್ನು ಪತ್ತೆ ಮಾಡಿ ಮಾದರಿಗಳನ್ನು ಸಂಗ್ರಹಿಸಿದ ಕಾರಣ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪ್ರಾಪ್ತಿಯಾಗಿದೆ.
– ಡಾ|ಸುಧೀರ್‌ಚಂದ್ರ ಸೂಡ,
ಜಿಲ್ಲಾ ಆರೋಗ್ಯಾಧಿಕಾರಿ, ಉಡುಪಿ ಜಿಲ್ಲೆ

ರೋಗ ಲಕ್ಷಣ ಗುರುತಿಸಲು ಪರೀಕ್ಷೆ ನಡೆಸುವುದು ಬಹಳ ಮುಖ್ಯ. ಇದಕ್ಕಾಗಿ ಆರೋಗ್ಯ ಇಲಾಖೆ ಸಿಬಂದಿ ಉತ್ತಮ ರೀತಿಯಲ್ಲಿ ಶ್ರಮಿಸಿದ್ದಾರೆ.ಆದ್ದರಿಂದ ರಾಜ್ಯದಲ್ಲಿ ಲಕ್ಷ ಜನಸಂಖ್ಯೆಗೆ ಮಾದರಿ ಪರೀಕ್ಷೆಗಳನ್ನು ಅತಿ ಹೆಚ್ಚು ನಡೆಸಿದ ಹಿರಿಮೆಗೆ ಉಡುಪಿ ಪಾತ್ರವಾಗಿದೆ.ಆರೋಗ್ಯ ಇಲಾಖೆ ಸಿಬಂದಿಗೆ ಅಭಿನಂದನೆಗಳು.ಅವರು ಮುಂದೆಯೂ ಇದೇ ಗುಣಮಟ್ಟದಲ್ಲಿ ಶ್ರಮಿಸುತ್ತಾರೆ ಎಂಬ ವಿಶ್ವಾಸವಿದೆ.
ಜಿ. ಜಗದೀಶ್‌, ಜಿಲ್ಲಾಧಿಕಾರಿಗಳು, ಉಡುಪಿ

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.