ಹಸಿವು ನೀಗಿಸಲು ಒಗ್ಗೂಡಿ ಕೆಲಸ ಮಾಡುವುದು ಅಗತ್ಯ: ಕೋಟ
ಕಡಿಯಾಳಿ: 26ನೇ ದಿನಕ್ಕೆ ತಲುಪಿದ ಮಧ್ಯಾಹ್ನದ ಊಟ ವಿತರಣೆ ಯೋಜನೆ
Team Udayavani, Apr 19, 2020, 5:39 AM IST
ಉಡುಪಿ: ಕೋವಿಡ್-19 ವೈರಸ್ಗೆ ಜಗತ್ತು ತಲ್ಲಣಗೊಂಡಿದೆ. ಸೋಂಕು ತಡೆಗೆ ಲಾಕ್ಡೌನ್ ವಿಧಿಸಲಾಗಿದೆ. ಲಾಕ್ಡೌನ್ನಿಂದ ಸಮಸ್ಯೆಗೆ ಒಳಗಾದವರ ನೆರವಿಗೆ ಸರಕಾರ ಮುಂದಾಗಿದೆ. ಎಲ್ಲವನ್ನು ಸರಕಾರಕ್ಕೆ ಮಾಡುವುದು ಕಷ್ಟ. ಹಸಿವಿನಿಂದ ಯಾರು ಬಳಲುತ್ತಿದ್ದಾರೋ ಅವರಿಗೆ ಊಟ ಮುಟ್ಟಿಸುವಲ್ಲಿ ಸಮಾಜದ ಒಗ್ಗೂಡುವಿಕೆ ಈ ಹಂತದಲ್ಲಿ ಅಗತ್ಯ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಡಿಯಾಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಆಸರೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಲಾಕ್ಡೌನ್ ಸಮಸ್ಯೆಗೊಳಗಾದ ನಗರದೊಳಗಿನ ಕಾರ್ಮಿಕರಿಗೆ ಪಾರ್ಸೆಲ್ ಊಟ ವಿತರಿಸುವ 26ನೇ ದಿನದ ಕಾರ್ಯಕ್ರಮಕ್ಕೆ ಕಡಿಯಾಳಿ ಶ್ರೀ ಶಾರದಾ ಕಲ್ಯಾಣ ಮಂಟಪದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಸರಕಾರ ನ್ಯಾಯಬೆಲೆ ಅಂಗಡಿಗಳ ಮೂಲಕ ಅಕ್ಕಿ ವಿತರಿಸುತ್ತಿದೆ. ಬಡತನ ರೇಖೆಗಿಂತ ಕೆಳಗೆ ಯಾವ ದಾಖಲೆ ಹೊಂದಿರದ ಬಡ ಕಾರ್ಮಿಕರು ನಮ್ಮ ಸುತ್ತಮುತ್ತಲು ಇದ್ದಾರೆ. ಅವರಿಗೆ ಅನ್ನ ನೀಡುವುದು ಬಹುಮುಖ್ಯ ಕಾರ್ಯ. ಅಂತಹ ಕಾರ್ಯವನ್ನು ಶ್ರೀ ಗಣೇಶೋತ್ಸವ ಸಮಿತಿ ಮತ್ತು ಆಸರೆ ಚಾರಿಟೆಬಲ್ ಟ್ರಸ್ಟ್ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಶಾಸಕ ರಘುಪತಿ ಭಟ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪಾಂಗಳ ವಸಂತ ಭಟ್, ವ್ಯವಸ್ಥಾಪಕ ಮಂಜುನಾಥ ಹೆಬ್ಟಾರ್, ಕೋಶಾಧಿಕಾರಿ ಸತೀಶ್ ಕುಲಾಲ್, 26ನೇ ದಿನದ ಊಟದ ದಾನಿ ಗಳಾದ ಎಚ್. ರೋಹಿದಾಸ ಶೆಣೈ ಬುಡ್ನಾರು ಮತ್ತು ಸಹೋದರರು, ಗೀತಾ ಸದಾಶಿವ ನಾಯಕ್, ವರುಣ್ ಕಾಮತ್ ಶಿರಿಬೀಡು, ಶ್ರೀ ಗಣೇಶೋತ್ಸವ ಸಮಿತಿ, ಆಸರೆ ಚಾರಿಟೆಬಲ್ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು. ಶ್ರೀ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.