ಕೋವಿಡ್ ಮುಕ್ತ ಜಿಲ್ಲೆಯಾಗಿ ಉಡುಪಿ :ಸೋಂಕು ಪೀಡಿತ ಮೂರನೇ ವ್ಯಕ್ತಿಯೂ ಬಿಡುಗಡೆ


Team Udayavani, Apr 19, 2020, 11:07 AM IST

ಕೊರೊನಾ ಮುಕ್ತ ಜಿಲ್ಲೆಯಾಗಿ ಉಡುಪಿ :ಸೋಂಕು ಪೀಡಿತ ಮೂರನೇ ವ್ಯಕ್ತಿಯೂ ಬಿಡುಗಡೆ

ಉಡುಪಿ: ಕೋವಿಡ್ ಸೋಂಕು ತಗಲಿದ ಉಡುಪಿ ಜಿಲ್ಲೆಯ ಮೂರನೆಯ ವ್ಯಕ್ತಿಯೂ ಗುಣಮುಖರಾಗಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸೋಂಕಿನ ಹಾವಳಿ ಬಳಿಕ ಇದೇ ಮೊದಲ ಬಾರಿಗೆ ಉಡುಪಿ ಜಿಲ್ಲೆ ಯಾರೊಬ್ಬರೂ ಕೊರೊನಾ ಸೋಂಕಿತರಿಲ್ಲದ ಜಿಲ್ಲೆಯಾಗಿ ಮೂಡಿಬಂದಿದೆ.

ಉಡುಪಿ ಬಡಗಬೆಟ್ಟಿನವರಾದ ಸೋಂಕಿತರು ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್‌. ಇವರು 31 ಜನರೊಂದಿಗೆ ಕೇರಳದ ತಿರುವನಂತಪುರಕ್ಕೆ ಎಲೆಕ್ಟ್ರಿಕಲ್‌ ಕೆಲಸಕ್ಕೆ ಹೋಗಿ ವಾಪಸಾಗುವಾಗ ಕೇರಳದಲ್ಲಿ ಕೋವಿಡ್ ಹಾವಳಿ ಜಾಸ್ತಿ ಇತ್ತು. ಹೀಗಾಗಿ ಇವರಿಗೆ ದ.ಕ. ಜಿಲ್ಲೆಯ ತಲಪಾಡಿಯಲ್ಲಿ ಬರಲು ಬಿಡಲಿಲ್ಲ. ಕೊನೆಗೆ ಉಡುಪಿಯಿಂದ ಆ್ಯಂಬುಲೆನ್ಸ್‌ ಕಳುಹಿಸಿ ತಂಡದಲ್ಲಿದ್ದ ಎಲ್ಲರನ್ನೂ ನೇರವಾಗಿ ಜಿಲ್ಲಾಸ್ಪತ್ರೆಗೆ ಮಾ. 27ರಂದು ಕ್ವಾರಂಟೈನ್‌ನಲ್ಲಿ ದಾಖಲಿಸಲಾಗಿತ್ತು. ಮಾ. 29ರಂದು ಇವರ ಗಂಟಲ ದ್ರವದ ವರದಿ ಪಾಸಿಟಿವ್‌ ಆಗಿ ಬಂದಿತ್ತು. ಬಳಿಕ ಇವರನ್ನು ಮಣಿಪಾಲ ಆಸ್ಪತ್ರೆಗೂ, ಎ. 1ರಿಂದ ಉಡುಪಿ ಡಾ| ಟಿಎಂಎ ಪೈ ಆಸ್ಪತ್ರೆಗೂ ದಾಖಲಿಸಲಾಯಿತು. ಇತ್ತೀಚೆಗೆ ಇವರ ಗಂಟಲ ದ್ರವ ಮತ್ತೂಮ್ಮೆ ಪಾಸಿಟಿವ್‌ ಆಗಿ ವರದಿ ಬಂದಿತ್ತು. ಶನಿವಾರ ಎರಡೂ ಗಂಟಲ ದ್ರವ ಪರೀಕ್ಷೆ ನೆಗೆಟಿವ್‌ ಆಗಿ ಬಂದ ಕಾರಣ ಜಿಲ್ಲಾಡಳಿತ ಅಪರಾಹ್ನ 2.55ಕ್ಕೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮತ್ತೆ 14 ದಿನಗಳ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಿತು.

ಇವರೊಡನೆ ಇದ್ದ ಇತರರೆಲ್ಲರ ಗಂಟಲ ದ್ರವದ ಮಾದರಿ ನೆಗೆಟಿವ್‌ ವರದಿ ಬಂದಿತ್ತು. ಈಗಾಗಲೇ ಇಬ್ಬರು ಸೋಂಕಿತರು ಸೋಂಕುಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಭಟ್ಕಳದ ಗರ್ಭಿಣಿಯೊಬ್ಬರು ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

8 ಮಂದಿ ದಾಖಲು
ಶನಿವಾರ ಒಟ್ಟು ಎಂಟು ಮಂದಿಯನ್ನು ಆಸ್ಪತ್ರೆ ಐಸೊಲೇಶನ್‌ ವಾರ್ಡ್‌ಗೆ ಸೇರಿಸಲಾಗಿದೆ. ಇವರಲ್ಲಿ ತೀವ್ರ ಉಸಿರಾಟ ಸಮಸ್ಯೆಯ ನಾಲ್ವರು ಪುರುಷರು, ಕೊರೊನಾ ಶಂಕಿತ ಒಬ್ಬ ಪುರುಷ, ಫ‌ೂÉ  é ಜ್ವರದ ಇಬ್ಬರು ಪುರುಷರು, ಓರ್ವ ಮಹಿಳೆ ಇದ್ದಾರೆ. ಪ್ರಸ್ತುತ 56 ಮಂದಿ ಐಸೊಲೇಶನ್‌ ವಾರ್ಡ್‌ನಲ್ಲಿದ್ದಾರೆ. ಶನಿವಾರ ಒಂಬತ್ತು ಮಂದಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದು ಇದುವರೆಗೆ 213 ಮಂದಿ ಬಿಡುಗಡೆಗೊಂಡಿದ್ದಾರೆ.

ಶನಿವಾರ 29 ಮಂದಿಯ ಗಂಟಲ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇವರಲ್ಲಿ ಏಳು ಮಂದಿ ತೀವ್ರ ಉಸಿರಾಟದ ಸಮಸ್ಯೆಯವರು, ಫ‌ೂÉ  é ಜ್ವರದ ನಾಲ್ವರು, ಹಾಟ್‌ಸ್ಪಾಟ್‌ ಸಂಪರ್ಕದ 18 ಮಂದಿ ಇದ್ದಾರೆ. ಇದು ವರೆಗೆ 868 ಜನರ ಮಾದರಿಗಳನ್ನು ಸಂಗ್ರ ಹಿಸಲಾಗಿದೆ. ಶನಿವಾರ ಬಂದ ಎಲ್ಲ 44 ವರದಿಗಳು ನೆಗೆಟಿವ್‌ ಆಗಿವೆ. 187 ಜನರ ವರದಿ ಬರಬೇಕಾಗಿದೆ.
ಶನಿವಾರ 231 ಜನರು ನೋಂದಣಿ ಮಾಡಿ ಕೊಂಡಿದ್ದು 116 ಮಂದಿ 28 ದಿನ ಗಳ, 76 ಜನರು 14 ದಿನಗಳ ನಿಗಾ ಪೂರೈಸಿದ್ದಾರೆ. 488 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಶನಿವಾರ ನಾಲ್ವರು ಆಸ್ಪತ್ರೆ ಕ್ವಾರಂಟೈನ್‌ಗೆ ಸೇರಿದ್ದು ಪ್ರಸ್ತುತ 36 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.