![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 19, 2020, 12:22 PM IST
ಬೆಂಗಳೂರು: ಕೋವಿಡ್ -19 ಸೋಂಕಿತರ ಪಟ್ಟಿಯಲ್ಲಿ ಹಲವು ದಿನಗಳಿಂದ ವಿಪರೀತ ಏರಿಕೆ ಕಂಡಿದ್ದ ರಾಜ್ಯದಲ್ಲಿ ಇಂದು ಸಮಾಧಾನ ತರುವ ವರದಿ ಹೊರಬಿದ್ದಿದೆ. ರಾಜ್ಯದಲ್ಲಿ ಶನಿವಾರ ಸಂಜೆ 5 ಗಂಟೆಯಿಂದ ರವಿವಾರ 12 ಗಂಟೆಯವರೆಗೆ ಕೇವಲ ನಾಲ್ಕು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ವಿಶೇಷವೆಂದರೆ ಹೊಸ ನಾಲ್ಕೂ ಪ್ರಕರಣಗಳು ಮೈಸೂರಿನಿಂದಲೇ ವರದಿಯಾಗಿದೆ. ಇಬ್ಬರು ನಂಜನಗೂಡಿನ ಸೋಂಕಿತರ ದ್ವಿತೀಯ ಸಂಪರ್ಕದಿಂದ ಸೋಂಕಿತರಾಗಿದ್ದರೆ, ಮತ್ತಿಬ್ಬರು ದೆಹಲಿ ಪ್ರಯಾಣ ಮಾಡಿದ ಹಿನ್ನಲೆ ಉಳ್ಳವರು.
46 ವರ್ಷದ ಮತ್ತು 20 ವರ್ಷ ಪ್ರಾಯದ ಇಬ್ಬರು ಪುರುಷರು ದೆಹಲಿಗೆ ಪ್ರಯಾಣ ಮಾಡಿದ್ದರು. ಇವರಿಗೆ ಇಂದು ಸೋಂಕು ತಾಗಿದ್ದು, ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಂಕಿತ ಸಂಖ್ಯೆ 52ರ ದ್ವಿತೀಯ ಸಂಪರ್ಕದಿಂದ ನಂಜನಗೂಡಿನ 39 ವರ್ಷದ ಪುರುಷ ಸೋಂಕಿಗೀಡಾಗಿದ್ದರೆ, 23 ವರ್ಷದ ಮಹಿಳೆಗೆ ಸೋಂಕಿತ ಸಂಖ್ಯೆ 319ರ ಸಂಪರ್ಕದಿಂದ ಕೋವಿಡ್-19 ಸೋಂಕು ತಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತ ಸಂಖ್ಯೆ 388ಕ್ಕೆ ಏರಿದೆ. ಇವುಗಳಲ್ಲಿ 14 ಪ್ರಕರಣಗಳು ಮೃತಪಟ್ಟಿದ್ದು, 105 ಸೋಂಕಿತರು ಗುಣಮುಖರಾಗಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.