![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 20, 2020, 2:41 PM IST
ಬಳ್ಳಾರಿ: ಕನಕದುರ್ಗಮ್ಮ ಬಡಾವಣೆಯ ಬಡ ಕುಟುಂಬಗಳಿಗೆ ರೇಷನ್ ಕಿಟ್ಗಳನ್ನು ಶಾಸಕ ಜಿ. ಸೋಮಶೇಖರರೆಡ್ಡಿ ವಿತರಿಸಿದರು.
ಬಳ್ಳಾರಿ: ಲಾಕ್ಡೌನ್ ಹಿನ್ನೆಲೆಯಲ್ಲಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ 2 ಸಾವಿರ ರೇಷನ್ ಕಿಟ್ ಗಳನ್ನು ಸಿದ್ಧಪಡಿಸಲಾಗಿದ್ದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ರೇಷನ್ಕಿಟ್ ಗಳನ್ನು ಹೊತ್ತೂಯ್ಯಲು ಸಿದ್ಧಗೊಂಡಿರುವ ಲಾರಿಗೆ ಶಾಸಕ ಜಿ. ಸೋಮಶೇಖರೆಡ್ಡಿ ಭಾನುವಾರ ಚಾಲನೆ ನೀಡಿದರು.
ಕೋವಿಡ್ 19ನಿಂದ ಸಂಕಷ್ಟ ದಿನಗಳಗಳನ್ನು ಎದುರಿಸುತ್ತಿರುವ ಬಡಜನರಿಗೆ ನೆರವಾಗುವ ಸಲುವಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ಬಂದಿದ್ದು, ಒಂದು ಕುಟುಂಬಕ್ಕೆ 15 ದಿನಕ್ಕಾಗುವಷ್ಟು ಅಕ್ಕಿ, ಬೇಳೆ, ಎಣ್ಣೆ ಸೇರಿ ಇನ್ನಿತರೆ ಆಹಾರ ಪದಾರ್ಥಗಳುಳ್ಳ ಒಟ್ಟು 2 ಸಾವಿರ ರೇಷನ್ ಕಿಟ್ಗಳನ್ನು ಸಿದ್ಧಪಡಿಸಲಾಗಿದೆ. ಈ ಕಿಟ್ಗಳನ್ನು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗುರುತಿಸಲಾಗಿರುವ ಬಡ ಕುಟುಂಬಗಳಿಗೆ ವಿತರಿಸಲಾಗುತ್ತದೆ ಎಂದು ಬ್ಯಾಂಕ್ನ ನಿರ್ದೇಶಕ ಶ್ರೀನಾಥ್ ಜೋಷಿ, ಶಾಸಕ ಜಿ. ಸೋಮಶೇಖರರೆಡ್ಡಿ ತಿಳಿಸಿದರು.
ದುರ್ಗಮ್ಮ ದೇವಸ್ಥಾನ ಬಳಿಯ ಕನಕ ದುರ್ಗಮ್ಮ ಬಡಾವಣೆಯಲ್ಲಿ ವಾಸಿಸುತ್ತಿರುವ ನೂರಾರು ಬಡ ಕುಟುಂಬಗಳಿಗೆ ದಿನಸಿ ಕಿಟ್ಗಳನ್ನು ಶಾಸಕ ಜಿ.ಸೋಮಶೇಖರರೆಡ್ಡಿ ವಿತರಿಸಿದರು. ಬ್ಯಾಂಕ್ನ ಸಿಬ್ಬಂದಿ ತಮ್ಮ ಒಂದು ದಿನದ ವೇತನವನ್ನು ದೇಣಿಗೆ ನೀಡಿದ್ದು, ಒಟ್ಟು 85 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವುದನ್ನು ಸ್ಮರಿಸಿದರು. ಐನಾತರೆಡ್ಡಿ, ಶ್ರೀನಿವಾಸ ಮೋತ್ಕರ್, ಕೆಎಂಎಫ್ ನಿರ್ದೇಶಕ ವೀರಶೇಖರರೆಡ್ಡಿ ಇತರರಿದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.