ಆಸ್ಟ್ರೇಲಿಯಾದಲ್ಲಿ “ದಂಡ’ವೇ ಅಸ್ತ್ರ !


Team Udayavani, Apr 21, 2020, 5:30 AM IST

ಆಸ್ಟ್ರೇಲಿಯಾದಲ್ಲಿ “ದಂಡ’ವೇ ಅಸ್ತ್ರ !

ಮಂಗಳೂರು: ಕೋವಿಡ್-19 ನಿಗ್ರಹಕ್ಕೆ ಸಾಮಾಜಿಕ ಅಂತರವೇ ಬಹುಮುಖ್ಯ ಔಷಧ. ಆಸ್ಟ್ರೇಲಿಯಾದಲ್ಲಿ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದರೆ ನಾವು ವೈಯಕ್ತಿಕವಾಗಿ 1,652 ಡಾಲರ್‌ ದಂಡ ಪಾವತಿಸಬೇಕು. ಯಾವುದೇ ಸಂಸ್ಥೆ, ಅಂಗಡಿ ನಿಯಮ ಉಲ್ಲಂಘಿಸಿದರೆ 9,900 ಡಾಲರ್‌ ದಂಡ ಪಾವತಿಸಬೇಕು. ಆದ್ದರಿಂದ ಇಲ್ಲಿ ಸಾಮಾಜಿಕ ಅಂತರ ಸರಿಯಾಗಿ ಪಾಲನೆಯಾಗುತ್ತಿದೆ.

ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ 10 ವರ್ಷಗಳಿಂದ ನೆಲೆಸಿರುವ ಮಂಗಳೂರು ಮೂಲದ ರೋಹನ್‌ ಸಲ್ಡಾನ್ಹ ಅವರು ದೂರವಾಣಿ ಮೂಲಕ “ಉದಯವಾಣಿ’ ಜತೆಗೆ ಮಾತನಾಡಿದರು.

ಸರಕಾರದಿಂದ ವೇತನ
ರೋಹನ್‌ ಪ್ರಕಾರ ಆಸ್ಟ್ರೇಲಿಯಾ ಸರಕಾರ ಜನರ ಆರೋಗ್ಯದ ಬಗ್ಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಕೋವಿಡ್-19 ವಿರುದ್ಧ ಸೂಕ್ತ ರೀತಿ ಕಾರ್ಯಾಚರಿಸುತ್ತಿದೆ. ಅದಕ್ಕಾಗಿ “ಜಾಬ್‌ ಕೀಪರ್‌ ಪೇಮೆಂಟ್‌’ ಎಂಬ ಸ್ಕೀಂ ಆರಂಭಿಸಿದೆ. ನೋಂದಾಯಿತ ಕಂಪೆನಿಗಳು ಬಂದ್‌ ಆಗಿರುವ ಕಾರಣ ಕೆಲಸ ಇಲ್ಲದವರ ಖಾತೆಗೆ ಎರಡು ವಾರಕ್ಕೊಮ್ಮೆ 1,500 ಡಾಲರ್‌ ಜಮೆ ಮಾಡಲಾಗುತ್ತಿದೆ. ಈ ಮೂಲಕ ಜನರು ಮನೆಯಲ್ಲಿ ಇರುವಂತೆ ಸರಕಾರ ವಿಶೇಷ ಪ್ರೋತ್ಸಾಹ ನೀಡಿದೆ’.

ರೈಲು, ಬಸ್‌ ಸಂಚಾರ
ಅನ್ಯ ದೇಶಗಳಲ್ಲಿ ಲಾಕ್‌ಡೌನ್‌ ಎಂದು ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತವಾಗಿದ್ದರೆ ಇಲ್ಲಿ ಮಾತ್ರ ಸಂಚಾರ ಮಾಮೂಲಾಗಿದೆ. ಆದರೆ ಕಂಪೆನಿ, ಕೈಗಾರಿಕೆಗಳು ಬಂದ್‌ ಆಗಿರುವ ಕಾರಣ ಪ್ರಯಾಣಿಕರ ಸಂಖ್ಯೆ ವಿರಳವಾ ಗಿದೆ. ದಿನಸಿ ಅಂಗಡಿಗಳು, ಶಾಪಿಂಗ್‌ ಸೆಂಟರ್‌ಗಳು ತೆರೆದಿವೆ.

ಆನ್‌ಲೈನ್‌ನಲ್ಲೇ ಶಿಕ್ಷಣ
ಫೆಬ್ರವರಿಯಿಂದ ನವೆಂಬರ್‌ ವರೆಗೆ 4 ಹಂತಗಳಲ್ಲಿ ಶಾಲಾ ಕಾಲೇಜು ಇರುತ್ತದೆ. ಪ್ರತಿ ಹಂತದ ನಡುವೆ 2 ವಾರ ರಜೆ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಹೆತ್ತವರಿಬ್ಬರೂ ಉದ್ಯೋಗಿಗಳಾಗಿರುವ ಕಾರಣ ಆರಂಭದಲ್ಲಿ ಮಕ್ಕಳಿಗೆ ರಜೆ ನೀಡಿರಲಿಲ್ಲ. ಆದರೆ ಇತ್ತೀಚೆಗೆ ರಜೆ ನೀಡಿದ್ದು, ಆನ್‌ಲೈನ್‌ ಮೂಲಕ ಶಿಕ್ಷಣ ಮುಂದುವರಿದಿದೆ.

ಮನೆ ಬದಲು ಹೊಟೇಲ್‌ನಲ್ಲೇ ಕ್ವಾರಂಟೈನ್‌!
“ಹೋಂ ಕ್ವಾರಂಟೈನ್‌ ನಿಯಮ ಆಸ್ಟ್ರೇಲಿಯಾದಲ್ಲಿ ಜಾರಿಯಲ್ಲಿತ್ತು. ಆದರೆ ಬಹುತೇಕರು ಪಾಲನೆ ಮಾಡುತ್ತಿಲ್ಲ ಎಂಬ ಕಾರಣಕ್ಕೆ ವಿದೇಶದಿಂದ ಬಂದವರಿಗೆ ಹೊಟೇಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗುತ್ತಿದೆ. ಸದ್ಯ ಹೊಟೇಲ್‌ಗ‌ಳು ಬಂದ್‌ ಆಗಿರುವ ಕಾರಣ ಹೊಟೇಲ್‌ಗ‌ಳನ್ನೇ ಕ್ವಾರಂಟೈನ್‌ ಕೇಂದ್ರಗಳಾಗಿ ಸರಕಾರ ಬಳಕೆ ಮಾಡುತ್ತಿದೆ. ಸರಕಾರವೇ ಇದರ ಉಸ್ತುವಾರಿ ನೋಡಿಕೊಳ್ಳುತ್ತಿದೆ’ ಎನ್ನುತ್ತಾರೆ ರೋಹನ್‌.

ಸರಕಾರ ಸ್ಪಂದನೆ
ಕರ್ನಾಟಕ ಕರಾವಳಿಯ ಹಲವರು ಆಸ್ಟ್ರೇಲಿಯಾದಲ್ಲಿದ್ದಾರೆ. ಎಲ್ಲರಿಗೂ ಇಲ್ಲಿನ ಸರಕಾರ ಸೂಕ್ತವಾಗಿ ಸ್ಪಂದಿಸಿದೆ. ಸರಕಾರದ ಸೂಚನೆಗಳನ್ನು ನಾಗರಿಕರು ಚಾಚೂ ತಪ್ಪದೆ ಪಾಲಿಸುತ್ತಾರೆ.
– ರೋಹನ್‌ ಸಲ್ಡಾನ್ಹ , ಮಂಗಳೂರು

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.