ತಪ್ಪು ಫಲಿತಾಂಶ! 2 ದಿನ ರಾಪಿಡ್ ಟೆಸ್ಟ್ ಕಿಟ್ಸ್ ಬಳಸಬೇಡಿ: ಎಲ್ಲಾ ರಾಜ್ಯಗಳಿಗೆ ICMR ಮನವಿ

ಕೋವಿಡ್ 19 ಸೋಂಕು ದೃಢಪಟ್ಟಿದ್ದ ನೂರು ರೋಗಿಗಳನ್ನು ಪರೀಕ್ಷೆಗೊಳಪಡಿಸಿದ್ದರು. ಆದರೆ ವೈದ್ಯರಿಗೆ ಫಲಿತಾಂಶ ನೋಡಿ ಆಘಾತ ಆಗಿತ್ತು.

Team Udayavani, Apr 21, 2020, 6:00 PM IST

ತಪ್ಪು ಫಲಿತಾಂಶ! 2 ದಿನ ರಾಪಿಡ್ ಟೆಸ್ಟ್ ಕಿಟ್ಸ್ ಬಳಸಬೇಡಿ: ಎಲ್ಲಾ ರಾಜ್ಯಗಳಿಗೆ ICMR ಮನವಿ

Representative Image T

ನವದೆಹಲಿ: ದೇಶದಲ್ಲಿ ಮಾರಣಾಂತಿಕ ಕೋವಿಡ್ 19 ಸೋಂಕು ಹರಡುವಿಕೆ ಕೆಲವೆಡೆ ಹೆಚ್ಚಳವಾಗಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮುಂದುವರಿಸಲಾಗಿದೆ. ಏತನ್ಮಧ್ಯೆ 2 ದಿನಗಳ ಕಾಲ ಎಲ್ಲಾ ರಾಜ್ಯಗಳು ರಾಪಿಡ್ ಆ್ಯಂಟಿಬಾಡಿ ಟೆಸ್ಟ್ ಕಿಟ್ (RTK)ಅನ್ನು ಬಳಸದಿರುವಂತೆ ಸೂಚನೆ ರವಾನಿಸಲಾಗಿದೆ. ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿರುವ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಈ ಆದೇಶವನ್ನು ಹೊರಡಿಸಿದೆ ಎಂದು ವರದಿ ತಿಳಿಸಿದೆ.

ಐಸಿಎಂಆರ್ (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಇರುವ ಪ್ರತಿಯೊಬ್ಬ ನಿವಾಸಿಯನ್ನು ಪರೀಕ್ಷೆಗೊಳಪಡಿಸುವ ನಿಟ್ಟಿನಲ್ಲಿ ದೇಶಾದ್ಯಂತ ಐದು ಲಕ್ಷ ರಾಪಿಡ್ ಟೆಸ್ಟ್ ಕಿಟ್ಸ್ ಗಳನ್ನು ವಿತರಿಸಿತ್ತು. ಹೆಚ್ಚಿನ ರಾಜ್ಯಗಳಲ್ಲಿ ಸಮಪರ್ಕವಾದ ಪರೀಕ್ಷಾ ಸೌಲಭ್ಯ ಇಲ್ಲದ ಹಿನ್ನೆಲೆಯಲ್ಲಿ ರಾಪಿಡ್ ಟೆಸ್ಟ್ ಕಿಟ್ಸ್ ಹಂಚಲಾಗಿತ್ತು.

ನಿಖರ ಫಲಿತಾಂಶ ನೀಡದ ರಾಪಿಡ್ ಟೆಸ್ಟ್ ಕಿಟ್ಟ್!
ರಾಜಸ್ಥಾನ ಸರ್ಕಾರ ರಾಪಿಡ್ ಟೆಸ್ಟ್ ಕಿಸ್ಟ್ ಬಳಕೆ ನಿಲ್ಲಿಸಿದೆ. ಕಾರಣ ರಾಪಿಡ್ ಟೆಸ್ಟ್ ಕಿಟ್ಸ್ ಫಲಿತಾಂಶದ ನಿಖರತೆ ಕೇವಲ ಶೇ.5ರಷ್ಟು ಎಂದು ತಿಳಿಸಿದೆ. ರಾಪಿಡ್ ಟೆಸ್ಟ್ ಕಿಟ್ಸ್ ಬಳಸಿ ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ(ಎಸ್ ಎಂಎಸ್) ವೈದ್ಯರು ಕೋವಿಡ್ 19 ರೋಗಿಗಳನ್ನು ಪರೀಕ್ಷಿಸಿದಾಗ ಶೇ.95ರಷ್ಟು ಪ್ರಕರಣಗಳಲ್ಲಿ ನೆಗೆಟಿವ್ ವರದಿ ನೀಡಿತ್ತು!

ಜೈಪುರದ ಎಸ್ ಎಂಎಸ್ ಆಸ್ಪತ್ರೆಯ ಮೈಕ್ರೊ ಬಯೋಲಜಿ ಮತ್ತು ಮೆಡಿಸಿನ್ ವಿಭಾಗ ಈ ಕಿಟ್ಸ್ ಬಳಸಿ ಕೋವಿಡ್ 19 ಸೋಂಕು ದೃಢಪಟ್ಟಿದ್ದ ನೂರು ರೋಗಿಗಳನ್ನು ಪರೀಕ್ಷೆಗೊಳಪಡಿಸಿದ್ದರು. ಆದರೆ ವೈದ್ಯರಿಗೆ ಫಲಿತಾಂಶ ನೋಡಿ ಆಘಾತ ಆಗಿತ್ತು. ಅದಕ್ಕೆ ಕಾರಣ ಕೇವಲ ಐದು ಮಂದಿಗೆ ಮಾತ್ರ ಕೋವಿಡ್ 19 ಸೋಂಕು ಪಾಸಿಟಿವ್ ಎಂದು ಫಲಿತಾಂಶ ನೀಡಿ, ಉಳಿದ 95 ಜನರಿಗೆ ನೆಗೆಟಿವ್ ಎಂದು ಫಲಿತಾಂಶ ನೀಡಿತ್ತು!

ಹೀಗಾಗಿ ರಾಪಿಡ್ ಟೆಸ್ಟ್ ಕಿಟ್ಸ್ ನೀಡುವ ಫಲಿತಾಂಶ ನೈಜತೆಯಿಂದ ಕೂಡಿಲ್ಲ, ಅದರ ನಿಖರತೆಯೂ ಸಮರ್ಪಕವಾಗಿಲ್ಲ ಎಂದು ರಾಜ್ಯದ ಆರೋಗ್ಯ ಸಚಿವ ರಘು ಶರ್ಮಾ ತಿಳಿಸಿದ್ದಾರೆ. ನಾವು ಈ ಫಲಿತಾಂಶದ ವರದಿಯನ್ನು ಐಸಿಎಂಆರ್ ಗೆ ಕಳುಹಿಸಿಕೊಟ್ಟಿದ್ದೇವೆ. ಆದರೆ ಐಸಿಎಂಆರ್ ಯಾವುದೇ ಸಮಾಧಾನಕರ ಉತ್ತರ ನೀಡಿಲ್ಲ. ಹೀಗಾಗಿ ನಾವು ಎಲ್ಲಾ ಕಿಟ್ಸ್ ಗಳನ್ನು ವಾಪಸ್ ಕಳುಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಎಲ್ಲಾ ರಾಜ್ಯಗಳು ರಾಪಿಡ್ ಟೆಸ್ಟ್ ಕಿಟ್ಸ್ ಗಳನ್ನು ಬಳಸಬೇಡಿ. ಈ ಬಗ್ಗೆ ನಾವು ವಿಸ್ತೃತವಾದ ವರದಿ ನೀಡುತ್ತೇವೆ. ಒಂದು ವೇಳೆ ರಾಪಿಡ್ ಟೆಸ್ಟ್ ಕಿಟ್ಸ್ ಗಳಲ್ಲಿ ದೋಷ ಇದೆ ಎಂದು ಪತ್ತೆಯಾದರೆ, ನಾವು ಕಂಪನಿ ಬಳಿ ಎಲ್ಲಾ ಕಿಟ್ಸ್ ಗಳನ್ನು ಬದಲಿಸಿ ನೀಡಲು ಕೇಳಿಕೊಳ್ಳುತ್ತೇವೆ ಎಂದು ಐಸಿಎಂಆರ್ ಎಪಿಡೋಮಿಯೋಲಜಿ ಮುಖ್ಯಸ್ಥ ಡಾ.ಗಂಗಾಖೆಡ್ಕರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.