ರಾಜ್ಯದಲ್ಲೂ ಪ್ಲಾಸ್ಮಾ ಥೆರಪಿ ಚಿಕಿತ್ಸಾ ಪ್ರಯೋಗಕ್ಕೆ ಅನುಮತಿ
Team Udayavani, Apr 22, 2020, 5:50 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ವೈರಸ್ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸಾ ಪ್ರಯೋಗ ಆರಂಭಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಬೆಂಗಳೂರಿನ ಹೆಲ್ತ್ ಕೇರ್ ಗ್ಲೋಬಲ್ ಎಂಟ್ರಪ್ರೈಸಸ್ ಲಿ.ನವರಿಗೆ ಒಪ್ಪಿಗೆ ನೀಡಿದೆ.
ಪ್ಲಾಸ್ಮಾ ಥೆರಪಿ ಅಳವಡಿಸಿಕೊಳ್ಳಲು ಅನುಮತಿ ನೀಡಲು ಐಸಿಎಂಆರ್ಗೆ ರಾಜ್ಯ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದ ಐಸಿಎಂಆರ್ ಎಚ್ಸಿಜಿ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಾಜಿಯ ಡಾ|ವಿಶಾಲ್ ರಾವ್ ನೇತೃತ್ವದ ತಜ್ಞ ವೈದ್ಯರ ತಂಡದಿಂದ ಪ್ಲಾಸ್ಮಾ ಚಿಕಿತ್ಸೆ ಅಧ್ಯಯನ ಆರಂಭಿಸಲು ಅನುಮತಿ ನೀಡಿದೆ.
ಡಾ| ವಿಶಾಲ್ರಾವ್ ನೇತೃತ್ವದ ತಂಡವು ಕೋವಿಡ್ 19 ವೈರಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯೊಂದಿಗೆ ಒಪ್ಪಂದ ಮಾಡಿಕೊಂಡು ಕೆಲವು ಸೋಂಕಿತರ ಮೇಲೆ ತಮ್ಮ ಅಧ್ಯಯನ ಮಾಡಲಿದೆ.
ಈ ಮಧ್ಯೆ, ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿಗೆ ಅನುಮತಿ ಸಿಕ್ಕಿರುವುದರಿಂದ ರಾಜ್ಯದ ಎಲ್ಲ ವೈದ್ಯಕೀಯ ಮಹಾವಿದ್ಯಾಲಯಗಳು ಕೂಡ ಈ ಕುರಿತಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಆರೋಗ್ಯ ಇಲಾಖೆ ನಿರ್ದೇಶನ ಜಾರಿ ಮಾಡಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪ್ಲಾಸ್ಮಾ ಥೆರಪಿ ಹೇಗೆ?
ಕೋವಿಡ್ 19 ವೈರಸ್ ನಿಂದ ಚೇತರಿಸಿಕೊಂಡವರ ದೇಹದಿಂದ ರಕ್ತ ಪಡೆದು ಅದರಲ್ಲಿನ ರೋಗ ನಿರೋಧಕ ಕಣಗಳನ್ನು (ಪ್ಲಾಸ್ಮಾ) ಬೇರ್ಪಡಿಸಿ ಅದನ್ನು ಮತ್ತೂಬ್ಬ ಸೋಂಕಿತ ರೋಗಿಯ ದೇಹಕ್ಕೆ ಸೇರಿಸುತ್ತಾರೆ.
ಒಬ್ಬ ವ್ಯಕ್ತಿಯ ದೇಹದಿಂದ ರೋಗ ನಿರೋಧಕ ಕಣ ತೆಗೆದು, ಒಂದು ಡೋಸ್ನಂತೆ ಇಬ್ಬರು ರೋಗಿಗಳಿಗೆ ನೀಡಬಹುದಾಗಿದೆ. ಕೋವಿಡ್ 19 ವೈರಸ್ ನಿಂದ ಚೇತರಿಸಿಕೊಂಡವರ ದೇಹದಲ್ಲಿ ವೈರಾಣು ವಿರುದ್ಧ ಹೋರಾಡಿದ್ದ ಕಣಗಳು, ಇನ್ನೊಬ್ಬರ ದೇಹ ಸೇರಿದಾಗ ಹೋರಾಟ ಮುಂದುವರಿಸುತ್ತವೆ.
ಜತೆಗೆ ಆ ರೋಗಿಯ ದೇಹದಲ್ಲೂ ರೋಗ ನಿರೋಧಕ ಕಣಗಳನ್ನು ಸಕ್ರಿಯವಾಗಿಸುತ್ತವೆ. ಇದರಿಂದ ಆ ರೋಗಿ ಕೂಡ ಸೋಂಕಿನಿಂದ ಚೇತರಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.