ಸುರಪುರ: ಕಂಟೇನ್ಮೆಂಟ್ ಝೋನ್ ರಚನೆ
ಬೈಕ್-ಅಟೋ ಸೇರಿದಂತೆ ಎಲ್ಲ ವಾಹನ ಸಂಚಾರ ಸಂಪೂರ್ಣ ನಿಷೇಧ
Team Udayavani, Apr 22, 2020, 1:27 PM IST
ಸುರಪುರ: ಲಾಕ್ಡೌನ್ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳಿಗೆ ತಡೆಯೊಡ್ಡಿ ವಾಪಸ್ಸು ಕಳುಹಿಸಿದರು.
ಸುರಪುರ: ಲಾಕ್ಡೌನ್ ಅನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ನಗರದಲ್ಲಿ ಕೆಲ ವಾರ್ಡ್ಗಳನ್ನು ಕಂಟೋನ್ಮೆಂಟ್ ಝೋನ್ಗಳನಾಗಿ ರಚನೆ ಮಾಡಿದೆ. ಮಂಗಳವಾರ ನಗರದೆಲ್ಲಡೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದು, ವಾಹನಗಳ ಸಂಚಾರ ಸಂಪೂರ್ಣನಿಷೇಧಿಸಲಾಗಿದೆ .
ಮೊದಲ ಹಂತವಾಗಿ ಸಂ. 1, 2, 14 ಮತ್ತು 29, 30, 31 ವಾರ್ಡ್ ಗಳನ್ನು ಕಂಟೇನ್ಮೆಂಟ್ ಝೋನ್ ಗಳಾಗಿ ರಚಿಸಲಾಗಿತ್ತು. ಮಂಗಳವಾರ ತಿಮಾಪುರದ ಮಹಿಬೂ ಸುಭಾನಿ, ತಿಮ್ಮಪುರ, ದೂಳಪೇಟ, ವೆಂಕಟಾಪುರ ವಾರ್ಡ್ಗಳನ್ನು ಕಂಟೋನ್ಮೆಂಟ್ ಝೂನ್ಗಳನ್ನಾಗಿ ರಚಿಸಲಾಗಿದೆ. ಕೃಷಿ ಮತ್ತು ಅಗತ್ಯ ಸೇವೆ ವಾಹನಗಳನ್ನು ಹೊರತುಪಡಿಸಿ ಬೈಕ್, ಅಟೋ ಸೇರಿದಂತೆ ಎಲ್ಲ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ಸಾಕಷ್ಟು ವಾಹನಗಳನ್ನು ಸೀಜ್ ಮಾಡಿದ್ದರೂ ಜನರ ಅನ ಗತ್ಯ ಓಡಾಟ ನಡದೇ ಇತ್ತು. ಇದುವರೆಗೂ ಜಿಲ್ಲೆ ಮತ್ತು ತಾಲೂಕಿನಲ್ಲಿ ಯಾವುದೇ ಸೋಂಕಿತ ಪ್ರಕರಣ ಕಂಡು ಬಂದಿಲ್ಲ. ಇದುವರೆಗೂ ಜಿಲ್ಲೆ ಸುರಕ್ಷಿತವಾಗಿದೆ. ಲಾಕ್ಡೌನ್ ಕೊನೆ ಹಂತದಲ್ಲಿ ಇರುವುದರಿಂದ ಯಾವುದೇ ಸೋಂಕಿತರು ಒಳ ನುಸುಳದಂತೆ ಮುಂಜಾಗ್ರತೆ ವಹಿಸಲಾಗುತ್ತಿದೆ. ಜಿಲ್ಲಾ ಧಿಕಾರಿ ನಿರ್ದೇಶನದ ಮೇರೆಗೆ ಸುರಕ್ಷತೆ ಉಳಿಸಿಕೊಳ್ಳಲು ಲಾಕ್ಡೌನ್ನ್ನು ಇನ್ನಷ್ಟು ಕಠಿಣ ಗೊಳಿಸಲು ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ನಿಂಗಣ್ಣ ಬಿರಾದಾರ ತಿಳಿಸಿದರು. ಸಾರ್ವಜನಿಕರು ನೋಡಲ್ ಅಧಿಕಾರಿಗಳ ದೂರವಾಣಿಗಳಿಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಮನಿ ತಿಳಿಸಿದರು.
ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆ: ಅನಂತ 9036541509, ಸೈಯದ್ ಮಕ್ಸೂದ್ಬುಕಾರಿ, 9448765251.
ಬಾಬೂ 9449725766, ಸ್ವಯಂ ಸೇವಕರು: ಶಂಕರ 9886176193, ಪ್ರಶಾಂತ 9972782227, ಬಲಭೀಮ 9731909670, ರಮೇಶ 9535106343
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.