ಕೋವಿಡ್ ತೊಲಗಿಸಲು ಕೈಜೋಡಿಸಿ
Team Udayavani, Apr 22, 2020, 3:47 PM IST
ಸಿಂದಗಿ: ಮೋರಟಗಿ ಗ್ರಾಮದ ಗ್ರಾಪಂ ಕಾರ್ಯಾಲಯ ಆವರಣದಲ್ಲಿ ಸ್ಯಾನಿಟೈಸರ್ ಸಿಂಪಡನೆ ಕಾರ್ಯಕ್ಕೆ ಗ್ರಾಪಂ ಅಧ್ಯಕ್ಷ ಅರುಣಕುಮಾರ ಸಿಂಗೆ ಚಾಲನೆ ನೀಡಿದರು.
ಸಿಂದಗಿ: ಕೋವಿಡ್ ಸೋಂಕು ನಿವಾರಣೆಗೆ ನಾವೆಲ್ಲರೂ ಜಾಗೃತರಾಗೋಣ ಎಂದು ಗ್ರಾಪಂ ಅಧ್ಯಕ್ಷ ಅರುಣಕುಮಾರ ಸಿಂಗೆ ಹೇಳಿದರು. ತಾಲೂಕಿನ ಮೋರಟಗಿ ಗ್ರಾಮದಲ್ಲಿ ಗ್ರಾಪಂ ವತಿಯಿಂದ ಹಮ್ಮಿಕೊಂಡ ಸ್ಯಾನಿಟೈಸರ್ ಸಿಂಪಡನೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೋಂಕು ತಗುಲಿದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಪೂರ್ವದಲ್ಲಿಯೇ ತಗುಲದಂತೆ ಮುನ್ನೆಚ್ಚರಿಕೆಯನ್ನು ವಹಿಸಬೇಕು ಎಂದರು. ಕೋವಿಡ್ ಲಕ್ಷಣಗಳು ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಇನ್ನೊಬ್ಬ ವ್ಯಕ್ತಿಯಿಂದ ಅಂತರ ಕಾಯ್ದುಕೊಳ್ಳಬೇಕು. ಯಾವ ಕಾಲಕ್ಕೂ ಜನರು ಗುಂಪು ಗುಂಪಾಗಿ ಸೇರಬಾರದು. ಪ್ರತಿಯೊಬ್ಬರೂ ತಮ್ಮಷ್ಟಕ್ಕೆ ತಾವೇ ನಿಯಂತ್ರಣ ಮಾಡಿಕೊಳ್ಳಬೇಕು. ಈಗಾಗಲೇ ಈ ಮಾರಣಾಂತಿಕ ರೋಗವು ಭಾರತದಲ್ಲಿ ಪ್ರವೇಶ ಪಡೆದಿದ್ದು, ಅದು ಹೆಚ್ಚಿಗೆ ಹರಡದಂತೆ ನೋಡಿಕೊಳ್ಳುವ ಮೂಲಕ ಕೊರೊನಾ ಮುಕ್ತ ರಾಷ್ಟ್ರಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಸರಕಾರದ ಆದೇಶಗಳು ಎಷ್ಟೇ ಕಷ್ಟವಾದರೂ ನಾವೆಲ್ಲರೂ ಪಾಲಿಸಬೇಕು. ಜನರು ಪ್ರಜ್ಞೆಯುಳ್ಳವರಾಗಬೇಕು. ಮಾರಣಾಂತಿಕ ಕೋವಿಡ್ ಹರಡದಂತೆ ಸಂಕಷ್ಟದ ಈ ಸಂದರ್ಭದಲ್ಲಿ ಶಕ್ತಿ ಮೀರಿ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಗ್ರಾಪಂ ಮೂಲಕ ಹಳ್ಳಿಗಳಲ್ಲಿ ಸ್ಯಾನಿಟೈಸರ್ ಸಿಂಪಡನೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಾವ್ಯಾರು ಮನೆಯಿಂದ ಹೊರ ಬರಬಾರದು ಮನೆಯಲ್ಲಿಯೆ ಕುಳಿತು ಕೋವಿಡ್ ನಿಂದ ಮುಕ್ತರಾಗೋಣ ಎಂದು ಮನವಿ ಮಾಡಿಕೊಂಡರು.
ಪಿಡಿಒ ಜಯಕುಮಾರ ದೇವರನಾವದಗಿ, ಗ್ರಾಮ ಲೆಕ್ಕಾ ಧಿಕಾರಿ ವೈ.ಸಿ. ಜಂಗಶೆಟ್ಟಿ, ಬಂದೇನವಾಜ್ ಕಣ್ಣಿ, ಬಸಲಿಂಗಪ್ಪ ಬೋನಾಳ, ಅಲ್ಲಾಭಕ್ಷ ಬಾಗವಾನ, ಹಸನಸಾಬ ಶಿರಶ್ಯಾಡ, ಮಲ್ಲು ದುದ್ದಗಿ, ರಾಮು ಗೊಲ್ಲರ, ಎಂ.ಕೆ. ಮುಲ್ಲಾ, ಭೀಮಣ್ಣ ಹೋಳಿ, ಹಾವಣ್ಣ ಕಕ್ಕಳಮೇಲಿ, ರಫೀಕ್ ದೇವರನಾದಗಿ, ಪಿಂಟು ಭಾರತಿ ಸಾವಳಿಗೆಪ್ಪ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.