ಗ್ರಾಮೀಣ ಜನರ ವಿಶ್ವಾಸ ಗಳಿಸಿ ಕೆಲಸ ಮಾಡಿ


Team Udayavani, Apr 25, 2020, 1:05 PM IST

25-April-11

ಚಳ್ಳಕೆರೆ: ನಗರದ ತಾಲೂಕು ಪಂಚಾಯತ್‌ ಕಾರ್ಯಾಲಯದಲ್ಲಿ ಶಾಸಕ ಟಿ. ರಘುಮೂರ್ತಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು

ಚಳ್ಳಕೆರೆ: ಮಹಾತ್ಮ ಗಾಂಧೀಜಿಯವರ ಕನಸು ನನಸಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಕರೆ ನೀಡಿದರು.

ತಾಲೂಕು ಪಂಚಾಯತ್‌ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಕೋವಿಡ್ ವೈರಾಣು ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ವೈರಾಣು ನಿಯಂತ್ರಣದಲ್ಲಿ ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಮೂಡಿಸುವ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಎಂದರು. ಪ್ರತಿ ಗ್ರಾಮ ಪಂಚಾಯತ್‌ ಹಂತದಲ್ಲಿ ಜಾಲಿ ತೆಗೆಸುವ, ತಿಪ್ಪೆಗುಂಡಿ ತೆರವುಗೊಳಿಸುವ, ಚರಂಡಿಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ಸಮಸ್ಯೆಯ ಬಗ್ಗೆ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಶಾಸಕರು ಚರ್ಚೆ ನಡೆಸಿದರು. ಗ್ರಾಮೀಣ ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಅರಿತು ಗ್ರಾಮೀಣ ಭಾಗದ ಜನರ ವಿಶ್ವಾಸ ಗಳಿಸಿ ಕಾರ್ಯ ನಿರ್ವಹಿಸಬೇಕು. ಆಗ ಯಾವುದೇ ಸಮಸ್ಯೆ ಉದ್ಭವಿಸದು ಎಂದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಸರ್ಕಾರ ವಿವಿಧ ವೇತನಗಳು ಸಕಾಲದಲ್ಲಿ ದೊರೆಯುತ್ತಿಲ್ಲ. ಈ ಬಗ್ಗೆ ಬ್ಯಾಂಕ್‌ ಅಧಿಕಾರಿಗಳು ಹಾಗೂ ಅಂಚೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ 20 ಗ್ರಾಮ ಪಂಚಾಯತ್‌ಗಳ ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕುಡಿಯುವ ನೀರು ಸರಬರಾಜು ಇಲಾಖೆ, ತೋಟಗಾರಿಕೆ, ಬೆಸ್ಕಾಂ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ವರದಿ ನೀಡಿದರು.

ತಾಪಂ ಇಒ ಡಾ| ಶ್ರೀಧರ್‌ ಐ. ಬಾರಕೇರ್‌, ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ, ಪೋಸ್ಟ್‌ ಮಾಸ್ಟರ್‌ ರಾಧಾಕೃಷ್ಣ, ಬಿಇಒ ವೆಂಕಟೇಶ್‌, ಎಎಸ್‌ಒ ಸತೀಶ್‌ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.