ಹೊಲದಲ್ಲೇ ಕೊಳೆಯುತ್ತಿದೆ ಬೆಳೆ


Team Udayavani, Apr 25, 2020, 2:08 PM IST

bg-tdy-1

ಬೈಲಹೊಂಗಲ:  ಕೋವಿಡ್ 19 ಸೋಂಕು ತಡೆಗೆ ಸರಕಾರ ಲಾಕ್‌ಡೌನ್‌ ಜಾರಿ ಮಾಡಿರುವುದರಿಂದ ರೈತರು ಬೆಳೆದ ತರಕಾರಿ ಮತ್ತು ಇನ್ನಿತರ ಬೆಳೆ ಮಾರಾಟ ಮಾಡಲು ಸಾಧ್ಯವಾಗದೆ ಸಂಕಷ್ಟ ಪಡುತ್ತಿದ್ದಾರೆ. ಮುಂದೇನು ಎಂದು ದಿಕ್ಕು ತೋಚದೆ ಸರಕಾರದ ಸಹಾಯ ಹಸ್ತಕ್ಕಾಗಿ ಕಾಯುತ್ತಿದ್ದಾರೆ.

ತಾಲೂಕಿನ ಮಲ್ಲಮ್ಮನ ಬೆಳವಡಿ, ಬೂದಿಹಾಳ, ದೊಡವಾಡ,ಉಡಿಕೇರಿ,ಸುತಗಟ್ಟಿ, ಕರಿಕಟ್ಟಿ, ಹಾಗೂ ಇನ್ನು ಅನೇಕ ಗ್ರಾಮಗಳ ರೈತರು ತಮ್ಮ ಜಮೀನುಗಳಲ್ಲಿ ಕಷ್ಟಪಟ್ಟು ಬೆವರು ಸುರಿಸಿ ಬೆಳೆದ ಫಸಲು ಆದಾಯ ತರದೆ ಹಾಳಾಗುತ್ತಿರುವುದರಿಂದ ಕಂಗಾಲಾಗಿದ್ದಾರೆ.

ರೂಟರ್‌ ಹೊಡೆಸಿ ನಾಶ: ಮಲ್ಲಮ್ಮನ ಬೆಳವಡಿ ಗ್ರಾಮದ ರೈತರಾದ ಈರಪ್ಪ ಶಿವಬಸಪ್ಪ ಹಳ್ಳದಕೇರಿಯವರು ತಮ್ಮ 2.5 ಎಕರೆ ಹೊಲದಲ್ಲಿ ಹೂಕೋಸು (ಪ್ಲವರ್‌ ಬೆಳೆದಿದ್ದರು) 4 ಸಾವಿರ ತೆರವು ಸಸಿ ನಾಟಿ ಮಾಡಿ ರಸಗೊಬ್ಬರ ಮತ್ತು ಇತರೆ ಖರ್ಚು ಸೇರಿ ಸುಮಾರು 1 ಲಕ್ಷ 10 ಸಾವಿರ ರೂಪಾಯಿ ಖರ್ಚಾಗಿದೆ. ಲಾಕ್‌ಡೌನ್‌ ಜಾರಿಯಾಗಿರುವುದರಿಂದ ಮಾರುಕಟ್ಟೆಗಳು ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಟಾವಿಗೆ ಬಂದ ಹೂಕೋಸನ್ನು ಯಾರೊಬ್ಬರೂ ತೆಗೆದುಕೊಳ್ಳಲು ಬಾರದಿರುವುದರಿಂದ ಬೆಳೆದ ಹೊಲದಲ್ಲೇ ರೂಟರ್‌ ಹೊಡೆಸಿ ನಾಶ ಮಾಡಲು ತೀರ್ಮಾನಿಸಿದ್ದೇನೆ. ಹೋಕೋಸು ಮಾರಾಟವಾಗಿದ್ದರೆ ಸುಮಾರು 2.5 ಲಕ್ಷ ರೂಪಾಯಿ ಆದಾಯ ಬರುತ್ತಿತ್ತು ಎಂದು ರೈತ ಈರಪ್ಪ ನೋವಿನಿಂದ ಹೇಳಿಕೊಳ್ಳುತ್ತಾರೆ.

ಹೊಲದಲ್ಲೇ ಉಳಿದ ಬೆಳೆ: ಲಾಕ್‌ಡೌನ್‌ ಮತ್ತು ಬೆಲೆ ಕುಸಿತದ ಕಾರಣ 2 ಎಕರೆ ಹೊಲದಲ್ಲಿ ಬೆಳೆದ ಟೊಮೆಟೋ ಮತ್ತು ಮೆಣಸಿನಕಾಯಿಯನ್ನು ಬೂದಿಹಾಳ ಗ್ರಾಮದ ರೈತ ವೀರೇಶ ಕುಲಕರ್ಣಿ ಹೊಲದಲ್ಲೇ ಬಿಟ್ಟಿದ್ದಾರೆ. ಇದನ್ನು ಬೆಳೆಯಲು ಹಾಕಿದ 3 ತಿಂಗಳ ಶ್ರಮ ಸಂಪೂರ್ಣ ವ್ಯರ್ಥವಾಗಿದೆ. ಬಾಡಿಗೆ ವಾಹನ ಮುಖಾಂತರ ಸಮೀಪದ ಹಳ್ಳಿಗಳಲ್ಲಿ ಮಾರಲು ಹೋದರೆ ಅದರ ಬಾಡಿಗೆ ನೀಡುವಷ್ಟು ಲಾಭವಾಗುತ್ತಿಲ್ಲ. 25 ಕೆಜಿ ತೂಕದ ಟ್ರೇಯನ್ನು ಕೇವಲ 50-60 ರೂಪಾಯಿಗೂ ಕೇಳುತ್ತಿಲ್ಲ. ಸಗಟು ವ್ಯಾಪಾರವಂತೂ ನಿಂತೇ ಹೋಗಿದೆ. ಹೀಗಾಗಿ ದುಡಿದ ಆಳುಗಳ ಪಗಾರ ಕೊಡಲು ಆಗುತ್ತಿಲ್ಲ. ಸರಕಾರ ಕೇವಲ ಭರವಸೆ ನೀಡುತ್ತಿದೆ ಹೊರತು ತುರ್ತು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಅವರು ನೋವು ವ್ಯಕ್ತ ಪಡಿಸುತ್ತಾರೆ.

ಲಾಕ್‌ಡೌನ್‌ ಹೀಗೆ ಮುಂದುವರಿಯುತ್ತದೆಯೋ ಅಥವಾ ಕೊನೆಗೊಳ್ಳುತ್ತದೆಯೋ ಎಂಬುದು ಈಗಿನ ಸನ್ನಿವೇಶದಲ್ಲಿ ಹೇಳಲಾಗುತ್ತಿಲ್ಲ. ಆದ್ದರಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.

 

-ಸಿ.ವೈ.ಮೆಣಸಿನಕಾಯಿ

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.