ಲಾಕ್‌ಡೌನ್‌ಗೆ ಸವಾಲಾದ ಹಳೆ ಹುಬ್ಬಳ್ಳಿ ಭಾಗದ ಜನ


Team Udayavani, Apr 26, 2020, 2:56 PM IST

huballi-tdy-4

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಕೋವಿಡ್ 19 ಸೋಂಕು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ನಗರದಲ್ಲಿನ ಸೋಂಕು ಪ್ರದೇಶದಿಂದ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಕಂಟೇನ್ಮೆಂಟ್‌ ಪ್ರದೇಶವೆಂದು ಘೋಷಣೆ ಮಾಡಿದ್ದರು ಸಹ ಹಳೆ ಹುಬ್ಬಳ್ಳಿ ಭಾಗದ ಜನರು ಮಾತ್ರ ಇದಕ್ಕೂ ತಮಗೂ ಸಂಬಂಧವೇ ಇಲ್ಲವೆಂಬಂತೆ ವರ್ತಿಸತೊಡಗಿದ್ದಾರೆ.

ಅವಳಿ ನಗರದಲ್ಲಿ ಒಟ್ಟು 9 ಕೋವಿಡ್ 19  ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ಗುಣಮುಖರಾಗಿ ಹೊರಬಂದಿದ್ದಾರೆ. ಇನ್ನು ಏಳು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗ ತಡೆ ನಿಟ್ಟಿನಲ್ಲಿ ಅನಗತ್ಯ ಸುತ್ತಾಟ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಧಿಕಾರಿಗಳು, ಪೊಲೀಸ್‌, ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ 19 ವಿರುದ್ಧ ಹೋರಾಡುತ್ತಿದ್ದಾರೆ. ಆದರೆ, ಜನ ಮಾತ್ರ ನಿಯಮಗಳನ್ನು ಉಲ್ಲಂ ಸುವುದೇ ತಮ್ಮ ಧ್ಯೇಯ ಎಂಬಂತೆ ವರ್ತಿಸತೊಡಗಿದ್ದಾರೆ.

ಕೊಂಚ ಸಡಿಲಿಕೆ: ಸರಕಾರ ಲಾಕ್‌ಡೌನ್‌ ಪ್ರದೇಶದಲ್ಲಿ ಕಂಟೈನಮೆಂಟ್‌ ಹಾಗೂ ಸೋಂಕು ಪ್ರದೇಶ ಹೊರತು ಪಡಿಸಿ ಕೊಂಚು ಸಡಿಲಿಕೆ ನೀಡಿದ್ದು, ಇದನ್ನೇ ಬಳಸಿಕೊಂಡ ಜನರು ಅನೇಕ ಕಡೆಗಳಲ್ಲಿ ಗುಂಪು ಗುಂಪಾಗಿ ನಿಲ್ಲುವುದು, ಅನಗತ್ಯ ಸುತ್ತಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಲಾಕ್‌ ಡೌನ್‌ ನಡುವೆಯೂ ಹಳೇಹುಬ್ಬಳ್ಳಿ ಭಾಗದಲ್ಲಿ ಅಂಗಡಿ ಮುಂಗಟ್ಟುಗಳು ತೆರೆಯುತ್ತಿದ್ದು ಬೇಸರದ ಸಂಗತಿಯಾಗಿದೆ. ಇದರಿಂದ ಹೊಸ ಹುಬ್ಬಳ್ಳಿ ಭಾಗದ ವರ್ತಕರು ಯಾರಿಗೂ ಅವಕಾಶ ನೀಡಬಾರದು. ಇದರಿಂದ ನಮಗೂ ಕೂಡಾ ತೊಂದರೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಅಂಗಡಿ ಒಳಗೆ ಕ್ಷೌರ?: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್‌ ಇದ್ದರು, ಕೆಲವೊಂದು ಪ್ರದೇಶಗಳಲ್ಲಿ ಕ್ಷೌರ ಮಳಿಗೆಗಳು ಅಂಗಡಿ ಬಾಗಿಲು ಹಾಕಿಕೊಂಡು ಕೆಲಸ ನಡೆಸುತ್ತಿರುವುದು ಕಂಡು ಬರುತ್ತಿದೆ. ನಗರದ ಕೆಲವೊಂದು ಪ್ರದೇಶಗಳಲ್ಲಿ ಹಾಗೂ ಹೊಸ ಬಡಾವಣೆಗಳಲ್ಲಿ ಕ್ಷೌರದ ಅಂಗಡಿಯವರು ಒಳಗಡೆ ಕೆಲಸ ನಿರ್ವಹಿಸುತ್ತಿದ್ದಾರೆ. ಅಂಗಡಿಗಳಲ್ಲಿ 8-10 ಜನರನ್ನು ಇಟ್ಟುಕೊಂಡು ಬಾಗಿಲು ಹಾಕಿಕೊಂಡು ಕೆಲಸ ಮಾಡುತ್ತಿರುವುದು ಜನರಲ್ಲಿ ಆಂತಕ ಹೆಚ್ಚಾಗುವಂತೆ ಮಾಡಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕ್ಷೌರಿಕರು ಮನೆಗಳಿಗೆ ಆಗಮಿಸಿ ಕ್ಷೌರ ಮಾಡುತ್ತಿದ್ದು, ಇದರಿಂದ ಗ್ರಾಮೀಣ ಭಾಗದ ಯುವಕರು ತಲೆ ಗುಂಡು ಹೊಡೆಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಲಾಕ್‌ಡೌನ್‌ ಯಾವಾಗ ಮುಗಿಯುತ್ತದೆಯೋ ತಿಳಿಯದು, ಪದೇ-ಪದೇ ಕ್ಷೌರ ಮಾಡುವ ಬದಲಾಗಿ ಒಂದೇ ಬಾರಿ ಗುಂಡು ಹೊಡೆದು ಬಿಡಿ ಎನ್ನುತ್ತಿರುವ ಯುವಕರು ಗುಂಡು ಹೊಡೆಸಿಕೊಳ್ಳುತ್ತಿದ್ದಾರೆ.

ಹೆಚ್ಚಿದ ವಾಹನ ಸಂಚಾರ: ರಾಜ್ಯದಲ್ಲಿ ಲಾಕ್‌ಡೌನ್‌ ಕೊಂಚು ಸಡಿಲಿಕೆ ನೀಡಿರುವ ಹಾಗೂ ಕೆಲವೊಂದು ಕಚೇರಿಗಳ ತೆಗೆಯಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ವಾಹನ ಸಂಚಾರ ಹೆಚ್ಚಳ ಕಂಡು ಬಂದಿತು. ಕಂಟೈನಮೆಂಟ್‌ ಪ್ರದೇಶ ಹೊರತು ಪಡೆಸಿ, ಅಂದರೆ ವಿದ್ಯಾನಗರ, ಉಣಕಲ್ಲ, ಕಾರವಾರ ರಸ್ತೆ, ಗೋಕುಲ ರಸ್ತೆ, ಕಿತ್ತೂರ ಚನ್ನಮ್ಮ ವೃತ್ತಗಳಲ್ಲಿ ಹೆಚ್ಚಿನ ವಾಹನ ಸಂಚಾರ ಕಂಡು ಬಂದಿತು. ಪೊಲೀಸರು ಮಾತ್ರ ಎಂದಿನಂತೆ ಇಂದು ಕೂಡಾ ಅನಾವಶ್ಯಕವಾಗಿ ತಿರುಗಾಡುವವರನ್ನು ಹಿಡಿದು ದಂಡ ಹಾಕುವುದು, ವಾಹನ ಸೀಜ್‌ ಮಾಡುವ ಕಾರ್ಯವನ್ನು ಮುಂದುವರೆಸಿದ್ದಾರೆ.

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.