ಮೃಗಾಲಯ, ಅಭಯಾರಣ್ಯಗಳಲ್ಲೂ ತೀವ್ರ ಕಟ್ಟೆಚ್ಚರ
Team Udayavani, Apr 27, 2020, 6:34 AM IST
ಮೈಸೂರು: ವಿದೇಶಗಳಲ್ಲಿ ಪ್ರಾಣಿಗಳಲ್ಲೂ ಕೋವಿಡ್- 19 ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಮೃಗಾಲಯ ಮತ್ತು ಅಭಯಾರಣ್ಯಗಳಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿ, ಈ ಸಂಬಂಧ ಈಗಾಗಲೇ ರಾಜ್ಯದಲ್ಲಿನ ಮೃಗಾಲಯಗಳನ್ನು ಬಂದ್ ಮಾಡಿದ್ದು, ಪ್ರಾಣಿ-ಪಕ್ಷಿಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದರು. ಲಾಕ್ಡೌನ್ ಹಿನ್ನೆಲೆ ಅರಣ್ಯದಲ್ಲಿ ಕಳ್ಳತನ ಮತ್ತು ಬೇಟೆಯಾಡುತ್ತಿರುವ ವಿಚಾರ ಗಮನಕ್ಕೆ ಬಂದಿದೆ.
ಬೇಟೆಯಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯದ ಎರಡು, ಮೂರು ಕಡೆ ಬೇಟೆಯಾಡಿದ ಪ್ರಕರಣಗಳು ನಡೆದಿವೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದರು.
ಎಚ್.ಡಿ. ಕೋಟೆಯಲ್ಲಿ ಇಬ್ಬರು ಅರಣ್ಯ ಸಿಬಂದಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಹಿರಿಯ ಅಧಿಕಾರಿಗಳೇ ಮೃತ ಸಿಬಂದಿಯನ್ನು ಮೀನು ಹಿಡಿಯಲು ಕಳುಹಿಸಿದ್ದರೆಂಬ ಆರೋಪವಿದೆ. ಮತ್ತೂಂದೆಡೆ ಮೀನುಗಾರರ ಹಾವಳಿ ಕೂಡ ಇದೆ ಎಂಬ ಮಾತುಗಳಿವೆ. ಈ ಸಂಬಂಧ ಪ್ರತ್ಯಕ್ಷದರ್ಶಿಗಳು ಮತ್ತು ಬದುಕುಳಿದ ಇಬ್ಬರು ಸಿಬಂದಿಯ ವಿಚಾರಣೆ ನಡೆಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.