ಆತಂಕ ಮೂಡಿಸಿದ ಸೋಂಕಿತನ ಹಿಸ್ಟರಿ

ಗುಜರಾತ್‌ ಮೂಲದ ಧರ್ಮಪ್ರಚಾರಕನಿಂದ ಜಿಲ್ಲೆಗೆ ಮತ್ತೆ ಬಂದ ಕೋವಿಡ್

Team Udayavani, Apr 27, 2020, 5:35 PM IST

ಆತಂಕ ಮೂಡಿಸಿದ ಸೋಂಕಿತನ ಹಿಸ್ಟರಿ

ತುಮಕೂರು: ಇಡೀ ಜಗತ್ತನ್ನೇ ಭೀತಿಗೊಳಿಸಿ ನಮ್ಮ ದೇಶದಲ್ಲಿಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ವೈರಸ್‌ ರಾಜ್ಯದಲ್ಲಿ ಕದಂಬ ಬಾಹು ಹೆಚ್ಚಿಸಿ ಕೊಳ್ಳುತ್ತಿರುವ ಈ ಮಹಾ ಮಾರಿಯಿಂದ ಕಲ್ಪತರು ನಾಡು ಮುಕ್ತಿ ಹೊಂದಿತು ಎಂದು ನಿರಾಳರಾಗಿದ್ದ ಜನರಿಗೆ ಮತ್ತೆ ಆತಂಕ ಸೃಷ್ಟಿಸುವಂತೆ ಕೋವಿಡ್‌-19ರ ಸೋಂಕಿತ ಪಿ-447 ವ್ಯಕ್ತಿ ನಗರದ ಮರಳೂರು ದಿಣ್ಣೆ ಮತ್ತು ಮಂಡಿಪೇಟೆಯಲ್ಲಿ ಹಲವು ಬಾರಿ ಸುತ್ತಾಡಿರುವುದು ನಗರದ ನಾಗರಿಕರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ದೆಹಲಿಗೆ ಹೋಗಿಬಂದಿದ್ದ ಶಿರಾ ವೃದ್ಧನಿಗೆ ಕೋವಿಡ್ ಕಾಣಿಸಿಕೊಂಡು ಆತ ಮೃತಪಟ್ಟ, ಆನಂತರ ಅವರ 13 ವರ್ಷದ ಮಗನಿಗೆ ಸೋಂಕು ಕಾಣಿಸಿ ಕೊಂಡಿತು, ಆತ ಗುಣಮುಖನಾಗಿ ಬಂದು 25 ದಿನಗಳವರೆಗೂ ಯಾವುದೇ ಸೋಂಕು ಜಿಲ್ಲೆಯಲ್ಲಿ ಕಂಡು ಬರದ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಕೋವಿಡ್  ತೊಲಗಿತು ಎಂದು ನಿರಾಳರಾಗಿದ್ದರು. ಆದರೆ ಗುಜರಾತ್‌ ಮೂಲದ ಧರ್ಮ ಪ್ರಚಾರಕ ನಗರದ ಪಿ.ಎಚ್‌.ಕಾಲೋನಿ ಮಸೀದಿಯಲ್ಲಿ ತಂಗಿದ್ದ ಆತನಿಗೆ ಸೋಂಕು ತಗಲಿರು ವುದೇ ಈಗ ನಗರದ ಜನರನ್ನು ಬೆಚ್ಚಿ ಬೀಳಿ ಸುತ್ತಿದೆ. ಈ ಧರ್ಮಪ್ರಚಾರಕ ಪಿ-447ರ ಸೋಂಕಿತ ನಗರದ ವಿವಿಧ ಕಡೆ ಪ್ರವಾಸ ಮಾಡಿದ್ದಾರೆ. ಪ್ರಮುಖವಾಗಿ ಮರಳೂರು ದಿಣ್ಣೆ ಮತ್ತು ಮಂಡಿಪೇಟೆಗೆ ಹೆಚ್ಚು ಸಂಚಾರ ಮಾಡಿರುವುದೇ ಜನರಲ್ಲಿ ಭೀತಿ ಹೆಚ್ಚಲು ಕಾರಣವಾಗಿದೆ ಎಂದರು.

ಈ ಎರಡು ಪ್ರದೇಶಗಳಿಗೆ ಆಶಾ ಮತ್ತು ಆರೋಗ್ಯ ಸಿಬ್ಬಂದಿ ಪ್ರತಿನಿತ್ಯ ಮನೆಮನೆಗೆ ತೆರಳಿ ಜ್ವರ, ಕೆಮ್ಮು ಮತ್ತು ಶೀತ ಸೇರಿದಂತೆ ರೋಗ ಲಕ್ಷಣಗಳಿರುವ ಬಗ್ಗೆ ಸಮೀಕ್ಷೆ ನಡೆಸ
ಲಿದ್ದಾರೆ. ಸಂಪೂರ್ಣ ಸೀಲ್‌ಡೌನ್‌ ಆಗಿರುವ ಪಿ.ಎಚ್‌.ಕಾಲೋನಿಯನ್ನು ಕಂಟೈನ್‌ಮೆಂಟ್‌ ಝೋನ್‌ ಆಗಿ ಪರಿವರ್ತಿಸಲಾಗಿದೆ. ಈ ಪ್ರದೇಶ ದಲ್ಲಿ 452 ಮನೆಗಳಿವೆ. 1900ಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಇನ್ನು ಈತ ಪ್ರವಾಸ ಮಾಡಿರುವ ಮಂಡಿ ಪೇಟೆ ಮತ್ತು ಮರಳೂರು ದಿಣ್ಣೆ ಹೆಚ್ಚು ಜನ ನಿಬಿಡ ಪ್ರದೇಶವಾಗಿದೆ ಇದನ್ನು ಬಫ‌ರ್‌ ಜೋನ್‌ ಎಂದು ಪರಿಗಣಿಸಲಾಗಿದ್ದು ಇಲ್ಲಿದ್ದ
ಕೆಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ ಇದು ಜನರಲ್ಲಿ ಹೆಚ್ಚು ಆತಂಕ ಮೂಡಲು ಕಾರಣವಾಗಿದೆ.

ಜಿಲ್ಲೆಯಲ್ಲಿಗ ಹೋಂ ಕ್ವಾರೆಂಟೈನ್‌ನಲ್ಲಿ 370, ಐಸೋಲೇಷನ್‌ನಲ್ಲಿ 480, ಆಸ್ಪತ್ರೆಯ ಐಸೋಲೇಷನ್‌ನಲ್ಲಿ 90 ಮಂದಿ ಇದ್ದಾರೆ. ಇದುವರೆಗೆ 1437 ಜನರ ಗಂಟಲುಸ್ರಾವ ಮಾದರಿ ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 1170 ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿದೆ. ಇನ್ನೂ 252 ತಪಾಸಣೆಯ ವರದಿ ಬಾಕಿ ಇದ್ದು ಯಾರಲ್ಲಿ ಕೋವಿಡ್ ವಕ್ಕರಿಸಿದೆ
ಎನ್ನುವ ಭೀತಿ ಜಿಲ್ಲೆಯ ಜನರನ್ನು ಕಾಡುತ್ತಿದೆ.

ಕೋವಿಡ್ ಸೋಂಕಿತ ಪಿ-447 ಇದ್ದ ಪಿ.ಎಚ್‌. ಕಾಲೋನಿಯನ್ನು ಕಂಟೈನ್‌ಮೆಂಟ್‌ ಜೋನ್‌ ಆಗಿ ಪರಿವರ್ತಿಸಿದ್ದು, ಈ ಪ್ರದೇಶದಲ್ಲಿ 452 ಮನೆಗಳಿವೆ. 1900ಕ್ಕೂ ಹೆಚ್ಚು ಜನರು ವಾಸವಿದ್ದು ಜನರು ಹೆಚ್ಚು ಸಹಕಾರ ನೀಡಬೇಕು. ನಿಮಗೆ ಅಗತ್ಯವಿರುವ ವಸ್ತುಗಳನ್ನು ಹೊರಗಡೆಯಿಂದ ಪೂರೈಸಲಾಗುತ್ತದೆ. ಈ ವಸ್ತುಗಳನ್ನು ಕಂಟೈನ್‌ಮೆಂಟ್‌ ವಲಯದಲ್ಲಿಯೇ ಇರುವ 15 ಮಂದಿ ಸ್ವಯಂ ಸೇವಕರ ಮೂಲಕ ಹಂಚಿಕೆ ಮಾಡಲಾಗುತ್ತದೆ.
●ಡಾ.ಕೆ.ರಾಕೇಶ್‌ಕುಮಾರ್‌, ಡೀಸಿ

●ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.