ಉಡುಪಿ ಹಸುರು ಜಿಲ್ಲೆಯಾಗಿ ಘೋಷಣೆಗೆ ಕ್ಷಣಗಣನೆ


Team Udayavani, Apr 28, 2020, 5:15 AM IST

ಉಡುಪಿ ಹಸುರು ಜಿಲ್ಲೆಯಾಗಿ ಘೋಷಣೆಗೆ ಕ್ಷಣಗಣನೆ

ಉಡುಪಿ: ಕೋವಿಡ್ 19 ಪಾಸಿಟಿವ್‌ ಪ್ರಕರಣಗಳಿಲ್ಲದೆ 28 ದಿನಗಳಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆ ಹಸುರು ವಲಯದ ಪಟ್ಟಿಗೆ ಸೇರ್ಪಡೆಯಾಗಿದೆ. ಆದರೆ ಅಧಿಕೃತ ಘೋಷಣೆಯನ್ನು ರಾಜ್ಯ ಸರಕಾರ ಇನ್ನಷ್ಟೇ ಮಾಡಬೇಕಾಗಿದೆ. ಪ್ರಾಯಃ ಮಂಗಳವಾರ ಅಧಿಕೃತ ಘೋಷಣೆ ಸಾಧ್ಯತೆಗಳಿವೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯದ ನಕಾಶೆ ಹರಿದಾಡುತ್ತಿದ್ದು ಇದರಲ್ಲಿ ಉಡುಪಿ ಜಿಲ್ಲೆ ಹಸುರು ವಲಯದಲ್ಲಿರುವುದು ಕಂಡುಬಂದಿದೆ.

ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಹಸುರು ಜಿಲ್ಲೆಯಾಗಿ ಸೇರಿಸಲು ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದರು.

ಹಸುರು ಜಿಲ್ಲೆಯಾಗಿ ಘೋಷಣೆ ಮಾಡಲು ನಮಗೆ ಎಲ್ಲ ರೀತಿಯ ಅರ್ಹತೆಗಳೂ ಇವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ. ಅಧಿಕೃತ ಆದೇಶವನ್ನು ಜಿಲ್ಲಾಡಳಿತ ಮಂಗಳವಾರ ಹೊರಡಿಸಲಿದೆ.

ನಿರ್ಬಂಧ ಮುಂದುವರಿಕೆ
– ಅಂಗಡಿ ಮುಂಗಟ್ಟುಗಳು ಇದುವರೆಗೆ ಇರುವಂತೆ ಬೆಳಗ್ಗೆ 7ರಿಂದ ಬೆಳಗ್ಗೆ 11 ಗಂಟೆವರೆಗೆ ಮಾತ್ರ ತೆರೆದುಕೊಳ್ಳಲು ಅವಕಾಶ.
– ಹೊಟೇಲ್‌ಗ‌ಳು ತೆರೆದುಕೊಳ್ಳ ಬಹುದಾದರೂ ಪಾರ್ಸೆಲ್‌ ಕೊಂಡೊಯ್ಯಲು ಮಾತ್ರ ಅವಕಾಶ.
– ಲಾಡ್ಜ್, ದೇವಸ್ಥಾನ, ಮಾಲ್‌, ಸಿನೆಮಾಗೃಹ, ಶಾಪಿಂಗ್‌ ಕಾಂಪ್ಲೆಕ್ಸ್‌, ಹವಾನಿಯಂತ್ರಿತ ಮಳಿಗೆಗಳು, ಚಿನ್ನಾಭರಣಗಳ ಅಂಗಡಿಗಳು, ಮಲ್ಟಿ ಬ್ರ್ಯಾಂಡೆಡ್‌ ಶಾಪ್‌, ಸೆಲೂನ್‌ ಅಂಗಡಿಗಳು ತೆರೆಯುವಂತಿಲ್ಲ.
– ಯಾವುದೇ ಸಮಾರಂಭಗಳನ್ನು ನಡೆಸುವಂತಿಲ್ಲ.
– ಯಾಂತ್ರೀಕೃತ ಮೀನುಗಾರಿಕೆ ಇಲ್ಲ.

ವಿಶೇಷ ವಿನಾಯಿತಿಗಳು
– ಶಾಪ್ಸ್‌ ಆ್ಯಂಡ್‌ ಎಸ್ಟಾಬ್ಲಿಷ್ಮೆಂಟ್‌ ಆ್ಯಕ್ಟ್ ಪ್ರಕಾರ ಯಾರ್ಯಾರು ಪರವಾನಿಗೆ ಪಡೆದಿರುತ್ತಾರೋ ಅವರಿಗೆ ಅಂಗಡಿ ತೆರೆಯಲು ಅವಕಾಶಗಳಿವೆ. ಆದರೆ ಕೆಲವೊಂದಕ್ಕೆ ನಿರ್ಬಂಧವಿದೆ.
– ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ.
– ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶವಿದ್ದರೂ ಕಾರ್ಮಿಕರ ಸಂಚಾರ ನಿರ್ಬಂಧ.
– ಕೈಗಾರಿಕೆಗಳು ಕಾರ್ಯಾಚರಿಸಲು ಅವಕಾಶವಿದೆ.
– ಮೊಬೈಲ್‌ ರೀಚಾರ್ಜ್‌ ಅಂಗಡಿ ತೆರೆಯಬಹುದು ಮತ್ತು
ಪರವಾನಿಗೆ ಇರುವ ಮೊಬೈಲ್‌ ಶಾಪ್‌ಗ್ಳೂ ತೆರೆಯಬಹುದು.
– ಮರಳುಗಾರಿಕೆ, ಕ್ರಷರ್‌ ಉತ್ಪಾದನೆಗೆ ಅವಕಾಶವಿದೆ.

ನಿರ್ಮಾಣ ಚಟುವಟಿಕೆ ಆರಂಭ
ಉಡುಪಿ ಜಿಲ್ಲೆ ಹಸುರು ವಲಯಕ್ಕೆ ಸಮೀಪಿಸುತ್ತಿರು ವುದರಿಂದ ಮುಂದಿನ ಯೋಜನೆ ಮತ್ತು ಕೆಲವೊಂದು ನಿರ್ಬಂಧಿತ ಚಟುವಟಿಕೆಗಳ ಸಡಿಲಿಕೆ ಕುರಿತು ಶಾಸಕ ಕೆ. ರಘುಪತಿ ಭಟ್‌ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ.
ಜಗದೀಶ್‌ ಅವರಲ್ಲಿ ಚರ್ಚಿಸಿದರು.

ಪ್ರಮುಖವಾಗಿ ಕಟ್ಟಡ ಕಾರ್ಮಿಕರು ಹಾಗೂ ದಿನಗೂಲಿಗಳ ದೈನಂದಿನ ಸಮಸ್ಯೆಯ ಬಗ್ಗೆ ಹಾಗೂ ಅವರ ಆರ್ಥಿಕ ಸಮಸ್ಯೆಯ ಬಗ್ಗೆ ಚರ್ಚಿಸಲಾಯಿತು. ಕಟ್ಟಡ ನಿರ್ಮಾಣವನ್ನು ರಾಜ್ಯ ಮಾರ್ಗಸೂಚಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾಮಗಾರಿ ಗಳನ್ನು ನಿರ್ವಹಿಸುವಂತೆ ರಾಜ್ಯ ಸರಕಾರದ ಆದೇಶ ವಿದ್ದು ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ ಬೆಳಗ್ಗೆ 11ರ ವರೆಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಸಾಮಗ್ರಿಗಳ ಅಂಗಡಿಯಾದ ಹಾರ್ಡ್‌ವೇರ್‌ ಹಾಗೂ ಇತರ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಪೂರಕ ಸಾಮಗ್ರಿಗಳ ಅಂಗಡಿಯನ್ನು ತೆರೆಯುವ ಬಗ್ಗೆ ತೀರ್ಮಾನಿಸಲಾಯಿತು.

ಉಡುಪಿ ಜಿಲ್ಲೆ : 15 ಮಾದರಿಗಳ ಸಂಗ್ರಹ
ಉಡುಪಿ: ಕೋವಿಡ್ 19 ತಪಾಸಣೆ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಸೋಮವಾರ 15 ಜನರ ಮಾದರಿಗಳನ್ನು ಸಂಗ್ರಹಿಸ ಲಾಗಿದೆ. ಅವರಲ್ಲಿ ತೀವ್ರ ಉಸಿರಾಟದ ಐವರು, ಕೋವಿಡ್ 19 ಶಂಕಿತರು ಇಬ್ಬರು, ಫ‌ೂÉ é ಜ್ವರ ಲಕ್ಷಣದ 8 ಮಂದಿ ಇದ್ದಾರೆ.

16 ವರದಿಗಳು ಬಂದಿದ್ದು ಎಲ್ಲವೂ ನೆಗೆಟಿವ್‌ ಆಗಿವೆ. 40 ಜನರ ವರದಿಗಳು ಇನ್ನಷ್ಟೇ ಬರಬೇಕು. 8 ಮಂದಿ ಐಸೊಲೇಶನ್‌ ವಾರ್ಡ್‌ಗೆ ಸೇರ್ಪಡೆಯಾಗಿದ್ದು ಅವರಲ್ಲಿ 7 ಮಂದಿ ತೀವ್ರ ಉಸಿರಾಟದ ಸಮಸ್ಯೆಯವರು, ಮತ್ತೂಬ್ಬರು ಫ‌ೂÉ é ಜ್ವರ ಲಕ್ಷಣದವರು. 17 ಮಂದಿ ವಾರ್ಡ್‌ನಿಂದ ಬಿಡುಗಡೆಗೊಂಡಿದ್ದು ಪ್ರಸ್ತುತ 47 ಮಂದಿ ವಾರ್ಡ್‌ನಲ್ಲಿದ್ದಾರೆ.

11 ಮಂದಿ ಹೆಸರು ನೋಂದಣಿ ಮಾಡಿದ್ದಾರೆ. 36 ಮಂದಿ 28 ದಿನಗಳ, 64 ಮಂದಿ 14 ದಿನಗಳ ಕ್ವಾರಂಟೈನ್‌ ಮುಗಿಸಿದ್ದಾರೆ. 521 ಮಂದಿ ಗೃಹ ನಿಗಾದಲ್ಲಿದ್ದಾರೆ. ಆಸ್ಪತ್ರೆ ಕ್ವಾರಂಟೈನ್‌ಗೆ ಆರು ಮಂದಿ ಸೇರಿದ್ದು ಮೂವರು ಬಿಡುಗಡೆಗೊಂಡಿದ್ದಾರೆ. 27 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.