ಗಾಲಿ ಮೇಲಿನ ಜ್ವರ ತಪಾಸಣಾ ಕ್ಲಿನಿಕ್‌ಗೆ ಹೆಚ್ಚಿದ ಬೇಡಿಕೆ


Team Udayavani, Apr 28, 2020, 2:52 PM IST

ಗಾಲಿ ಮೇಲಿನ ಜ್ವರ ತಪಾಸಣಾ ಕ್ಲಿನಿಕ್‌ಗೆ ಹೆಚ್ಚಿದ ಬೇಡಿಕೆ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ಕಾರ್ಯಾಗಾರ ಸಿಬ್ಬಂದಿ ಮೊದಲ ಹಂತದಲ್ಲಿ ಸಂಸ್ಥೆಯ ಎರಡು ಮಿನಿ ಬಸ್‌ಗಳನ್ನು ಪೈಲೆಟ್‌ ಯೋಜನೆಯಡಿ “ಸಂಚಾರಿ ಫೀವರ್‌ ಕ್ಲಿನಿಕ್‌’ ಆಗಿ ಅಭಿವೃದ್ಧಿಪಡಿಸಿದ್ದು, ಯಶಸ್ಸಿನ ಹಿನ್ನೆಲೆಯಲ್ಲಿ ಇದೀಗ ಇತರೆ ಜಿಲ್ಲಾಡಳಿತಗಳಿಂದಲೂ ಬೇಡಿಕೆ ಬಂದಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ಫೀವರ್‌ ಕ್ಲಿನಿಕ್‌ಗಳಿಗೆ ಬಂದು ತಪಾಸಣೆ ಮಾಡಿಕೊಳ್ಳುವುದು ಕಷ್ಟ. ಇನ್ನೂ ಕಂಟೈನ್ಮೆಂಟ್‌ ಪ್ರದೇಶದ ಜನರು ಹೊರಗೆ ಬರುವುದು ಅಸಾಧ್ಯದ ಮಾತು. ಹೀಗಾಗಿ ಧಾರವಾಡ ಜಿಲ್ಲಾಡಳಿತಕ್ಕೆ ನೀಡಿದ್ದ ಸಂಚಾರಿ ಕ್ಲಿನಿಕ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬೇಕಾದ ಸ್ಥಳಗಳಿಗೆ ಹೋಗಿ ಅಲ್ಲಿನ ಜನರ ತಪಾಸಣೆಗೆ ನೆರವಾಗುತ್ತಿರುವ ಕಾರಣಕ್ಕೆ ಸಂಸ್ಥೆ ವ್ಯಾಪ್ತಿಯ ಇತರೆ ಜಿಲ್ಲೆಗಳಿಂದಲೂ ಬೇಡಿಕೆ ಬಂದಿವೆ.

ವಿವಿಧ ಜಿಲ್ಲೆಗಳಿಂದ ಬೇಡಿಕೆ: ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಸೋಂಕಿತರ ಪ್ರದೇಶ ಸೇರಿದಂತೆ ಅಕ್ಕಪಕ್ಕದ ಪ್ರದೇಶಗಳ ಜನರ ಆರೋಗ್ಯ ತಪಾಸಣೆ ಮುಖ್ಯವಾಗಿದೆ. ತಾಲೂಕು ಕೇಂದ್ರಗಳಲ್ಲೂ ಸೋಂಕು ಕಾಣಿಸಿಕೊಂಡಿರುವುದರಿಂದ ಮೊಬೈಲ್‌ ಕ್ಲಿನಿಕ್‌ನ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಮೂರು ಸಂಚಾರಿ ಫೀವರ್‌ ಕ್ಲಿನಿಕ್‌ಗಳಿಗೆ ಬೇಡಿಕೆ ಸಲ್ಲಿಸಿದೆ. ಬಾಗಲಕೋಟೆ ಜಿಲ್ಲಾಡಳಿತ ಸದ್ಯ ಒಂದು ಕ್ಲಿನಿಕ್‌ಗೆ ಬೇಡಿಕೆ ಸಲ್ಲಿಸಿದ್ದು, ಅವಶ್ಯಕತೆ ಪರಿಶೀಲಿಸಿ ಇನ್ನಷ್ಟು ಬೇಡಿಕೆ ಸಲ್ಲಿಸುವ ಸಾಧ್ಯತೆಯಿದೆ.

ಸಂಚಾರಿ ದ್ರವ ಸಂಗ್ರಹ ಕೇಂದ್ರ: “ಸಂಚಾರಿ ಗಂಟಲು ದ್ರವ ಸಂಗ್ರಹ ಕೇಂದ್ರ’ ತಯಾರಿಕೆಗೂ ಕಾರ್ಯಾಗಾರ ಸಿಬ್ಬಂದಿ ಮುಂದಾಗಿದ್ದು, ಈಗಾಗಲೇ ಧಾರವಾಡ ಜಿಲ್ಲಾಡಳಿತಕ್ಕೆ ಒಂದು ಕೇಂದ್ರ ಸಿದ್ಧಪಡಿಸಿ ನೀಡಿದ್ದಾರೆ. ಫೀವರ್‌ ಕ್ಲಿನಿಕ್‌ನಲ್ಲಿರುವಂತಹ ಸೌಲಭ್ಯಗಳು ಇದರಲ್ಲಿದ್ದು, ಬಸ್ಸಿನ ಮುಂದಿನ ಬಾಗಿಲನ್ನು ಗಂಟಲು ದ್ರವ ತೆಗೆಯಲು ಪೆಟ್ಟಿಗೆಯಾಗಿ ಮಾರ್ಪಡಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ ಹೊರತುಪಡಿಸಿ ಇತರೆ ಯಾರೂ ಬಸ್ಸಿನೊಳಗೆ ಸಂಚರಿಸಲು ಅವಕಾಶವಿಲ್ಲ. ಆರಂಭದಲ್ಲಿ ಬೆಳಗಾವಿ ಜಿಲ್ಲಾಡಳಿತ ಮೂರು ದ್ರವ ಸಂಗ್ರಹ ಕೇಂದ್ರ ಸಿದ್ಧಪಡಿಸಲು ಮನವಿ ಮಾಡಿದೆ.

ಆಯಾ ವಿಭಾಗದ ಬಸ್‌ಗಳೇ ಬಳಕೆ: ಬೇಡಿಕೆ ಸಲ್ಲಿಸಿರುವ ಜಿಲ್ಲಾ ವ್ಯಾಪ್ತಿಯ ವಿಭಾಗದ ಬಸ್‌ ಗಳನ್ನೇ ಇದಕ್ಕೆ ಬಳಕೆ ಮಾಡಲಾಗುತ್ತಿದೆ. ಹತ್ತಿರದ ಡಿಪೋಗಳ ಬಸ್‌ಗಳಲ್ಲಿನ ಸೀಟು ತೆಗೆದು ಖಾಲಿ ವಾಹನವನ್ನು ಇಲ್ಲಿನ ಪ್ರಾದೇಶಿಕ ಕಾರ್ಯಾಗಾರಕ್ಕೆ ಕಳುಹಿಸಲಾಗುತ್ತಿದೆ. ಆರಂಭದಲ್ಲಿ ಸಿದ್ಧಪಡಿಸಿದ ಎರಡು ಬಸ್‌ಗಳ ಮಾದರಿಯನ್ನು ಇತರೆ ನಿಗಮದ ಅಧಿಕಾರಿಗಳು ಪಡೆದಿದ್ದು, ಅಲ್ಲಿಯೂ ಇಂತಹ ಸಂಚಾರಿ ಕ್ಲಿನಿಕ್‌, ದ್ರವ ಸಂಗ್ರಹ ಘಟಕಗಳನ್ನಾಗಿ ಸಿದ್ಧಪಡಿಸುವ ಕೆಲಸ ನಡೆಯುತ್ತಿದೆ. ಪ್ರಾದೇಶಿಕ ಕಾರ್ಯಾಗಾರದ ಕಾರ್ಯ ವ್ಯವಸ್ಥಾಪಕ ಶ್ರೀನಾಥ ಸೇರಿದಂತೆ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 18-20 ತಾಂತ್ರಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡು ದಿನದಲ್ಲಿ ಒಂದು ಕೇಂದ್ರ ಸಿದ್ಧಪಡಿಸಲಾಗುತ್ತಿದೆ. ಸಂಸ್ಥೆ ವ್ಯಾಪ್ತಿಯ ಮೂರು ಜಿಲ್ಲೆಗಳಲ್ಲಿ ಮಾತ್ರ ಕೊವಿಡ್‌-19 ತಾಂಡವವಾಡುತ್ತಿದ್ದು, ಅಂತಹ ಜಿಲ್ಲೆಗಳಿಂದ ಬೇಡಿಕೆ ಬಂದಿದೆ.

ಸಂಚಾರಿ ಫೀವರ್‌ ಕ್ಲಿನಿಕ್‌ ಸದ್ಬಳಕೆಯಾಗುತ್ತಿರುವ ಕಾರಣ ರಾಜ್ಯದ ವಿವಿಧ ಜಿಲ್ಲೆಗೆ ಮಾದರಿ ನೀಡಲಾಗಿದೆ. ಸಂಸ್ಥೆ ವ್ಯಾಪ್ತಿಯ ಜಿಲ್ಲೆಗಳಿಂದ ಬಂದಿರುವ ಬೇಡಿಕೆ ಆಧರಿಸಿ ಸಿದ್ಧಪಡಿಸಲಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆಯಿಂದ ಸಂಚಾರಿ ಶೌಚಾಲಯದ ಬೇಡಿಕೆ ಬಂದಿದೆ. ಜಿಲ್ಲಾಡಳಿತಗಳಿಂದ ಬರುವ ಬೇಡಿಕೆ ಆಧರಿಸಿ ಸಿದ್ಧಪಡಿಸಲು ಸಿದ್ಧರಿದ್ದೇವೆ. ಕೊವಿಡ್‌-19 ವಿರುದ್ಧದ ಹೋರಾಟಕ್ಕೆ ಸಂಸ್ಥೆಯಿಂದ ಬೇಕಾಗುವ ಎಲ್ಲಾ ಸೇವೆ ನೀಡಲು ತಯಾರಿದ್ದೇವೆ.-ರಾಜೇಂದ್ರ ಚೋಳನ್‌,ವ್ಯವಸ್ಥಾಪಕ ನಿರ್ದೇಶಕ, ವಾಕರಸಾಸಂ

 

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.