![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 29, 2020, 9:26 AM IST
ನವದೆಹಲಿ: ದೇಶದಲ್ಲಿ ಕೋವಿಡ್-19 ಭೀತಿ ಹೆಚ್ಚಾಗುತ್ತಲೇ ಇದ್ದು ಕಳೆದ 24 ಗಂಟೆಗಳ ಅವಧಿಯಲ್ಲ್ಲಿ 73 ಜನರು ಮೃತಪಟ್ಟಿದ್ದು , ಇದು ವೈರಸ್ ಕಾಣಿಸಿಕೊಂಡಾಗಿನಿಂದ ದಾಖಲಾದ ಅತೀ ದೊಡ್ಡ ಮೊತ್ತವಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಒಟ್ಟಾರೆಯಾಗಿ 1,007 ಜನರು ಈ ಮಾರಕ ವೈರಸ್ ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 31 ಸಾವಿರದ ಗಡಿ ದಾಟಿದೆ. ದೇಶಾದ್ಯಂತ ಸೋಂಕಿಗೆ ತುತ್ತಾದವರಲ್ಲಿ ಸುಮಾರು 7, 696 ಮಂದಿ ಗುಣಮುಖರಾಗಿದ್ದು, ವೈರಸ್ ಕುರಿತ ಆತಂಕವನ್ನು ಕೋಂಚ ಕಡಿಮೆ ಮಾಡಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ 19 ಸೋಂಕಿತರಿದ್ದು ಮಂಗಳವಾರ ಒಂದೇ ದಿನ 729 ಪ್ರಕರಣಗಳು ದಾಖಲಾಗಿದ್ದು, 31 ಜನರು ಮೃತಪಟ್ಟಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಪ್ರಮಾಣ 9,318ಕ್ಕೆ ತಲುಪಿದ್ದು ಒಟ್ಟಾರೆ ಮೃತರ ಪ್ರಮಾಣ 400ಕ್ಕೆ ಏರಿಕೆಯಾಗಿದೆ. ಇಲ್ಲಿ ಸುಮಾರು 1.55 ಲಕ್ಷ ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಮುಂಬೈನಲ್ಲಿ 6000 ಪ್ರಕರಣಗಳು ದಾಖಲಾಗಿವೆ.
ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಗರ್ವಾಲ್, ದೇಶದಲ್ಲಿ ಕೋವಿಡ್ 19 ವೈರಸ್ ಆರ್ಭಟ ಗಣನೀಯವಾಗಿ ಇಳಿಕೆಯಾಗುತ್ತಿದೆ. ಕಳೆದ 28 ದಿನಗಳಿಂದ ದೇಶದ 17 ಜಿಲ್ಲೆಗಳಲ್ಲಿ ಒಂದೇ ಒಂದು ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಇದರರ್ಥ ನಾವು ಇದೇ ರೀತಿಯ ನಿರ್ವಹಣೆಯನ್ನು ಮುಂದುವರೆಸಿದರೆ ದೇಶ ಶೀಘ್ರದಲ್ಲೇ ಕೋವಿಡ್ ಮುಕ್ತವಾಗಲಿದೆ ಎಂದು ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.