![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 29, 2020, 11:52 AM IST
ಕನ್ನಡ ಚಿತ್ರರಂಗದ ಮೇರು ನಟ ದಿವಂಗತ ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧವಾಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ದ್ವಿತೀಯ ಪುತ್ರ ಯುವರಾಜ್ ಕುಮಾರ್ ಯುವ-01 ಚಿತ್ರದ ಮೂಲ ಚಂದನವನಕ್ಕೆ ಬಲಗಾಲಿಟ್ಟು ಬರುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ.
ನಟ ಯುವರಾಜ್ ಕುಮಾರ್ ಖಡಕ್ ಲುಕ್ಗೆ ಸಖತ್ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವರಾಜ್ ಕುಮಾರ್ ಲುಕ್ಗೆ ಫಿದಾ ಆಗಿದ್ದಾರೆ. ಇನ್ನು ಹೆಸರಿಡದ ಚಿತ್ರಕ್ಕೆ ಯುವ-01 ಪ್ರೊಡಕ್ಷನ್ ಹೆಸರಿಟ್ಟಿದ್ದು, ಇತ್ತೀಚೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಕೋವಿಡ್ 19 ಭೀತಿ ಹಿನ್ನೆಲೆ ಚಿತ್ರೀಕರಣ ಆರಂಭವಾಗಿಲ್ಲ. ಕೇವಲ ಪೋಸ್ಟರ್ ಮಾತ್ರ ರಿಲೀಸ್ ಮಾಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಯುವರಾಜ್ ಪೋಸ್ಟರ್ ಭಾರೀ ವೈರಲ್ ಆಗಿದೆ. ಮೊದಲ ಬಾರಿಗೆ ಯುವರಾಜ್ ಕುಮಾರ್ ಚೊಚ್ಚಲ ಚಿತ್ರಕ್ಕೆ ನಿರ್ದೇಶಕ ಪುನೀತ್ ರುದ್ರಾಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಯುವರಾಜ್ ಕುಮಾರ್ ಲುಕ್ ಮತ್ತು ಕಥೆಗಾಗಿ ಸಾಥ್ ನೀಡಿದ್ದಾರೆ. ಅನೇಕರು ಯುವರಾಜ್ ಅವರು ಕೆಲವು ಆಂಗಲ್ಗಳಲ್ಲಿ ಅಣ್ಣಾವ್ರ ರೀತಿಯೇ ಕಾಣುತ್ತೀರಿ ಎಂದಿದ್ದಾರೆ. ಜೊತೆಗೆ ಚಿತ್ರರಂಗದಿಂದಲೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.
ಸುದೀಪ್ ಸೇರಿದಂತೆ ಅನೇಕರು ಮೆಚ್ಚುಗೆಯ ಮಾತುಗಳನ್ನಾಡಿ ಶುಭಕೋರಿದ್ದಾರೆ. ಇನ್ನು ತಮ್ಮ ಮೊದಲ ಚಿತ್ರದ ಫಸ್ಟ್ ಲುಕ್ಗೆ ಅಭಿಮಾನಿಗಳು ತೋರುತ್ತಿರುವ ಪ್ರೀತಿ ಕಂಡು ಯುವರಾಜ್ ಕುಮಾರ್ ಭಾವುಕರಾಗಿದ್ದಾರೆ. ಜೊತೆಗೆ ತಮ್ಮ ಧನ್ಯವಾದ ಕೂಡಾ ಹೇಳಿದ್ದಾರೆ.
ನೀವು ನನ್ನ ಮೇಲೆ ಸುರಿಸಿದ ಪ್ರೀತಿ ಆಶೀರ್ವಾದಗಳ ಸುರಿಮಳೆಗೆ, ಧನ್ಯವಾದಗಳು ಸಾಕಾಗುವುದಿಲ್ಲ, ಜೀವನದುದ್ದಕ್ಕೂ ನುಡಿಯ ಸೇವಕನಾಗಿ ನಿಮ್ಮ ಹೃದಯದಲ್ಲಿ ಬದುಕಲು ಶ್ರಮಿಸುತ್ತೇನೆ ಎಂದಿದ್ದಾರೆ. ಮಗನ ಮೊದಲ ಚಿತ್ರದ ಪೋಸ್ಟರ್ಗೆ ಸಿಗುತ್ತಿರುವ ಪ್ರತಿಕ್ರಿಯೆ ರಾಘವೇಂದ್ರ ರಾಜ್ಕುಮಾರ್ ಅವರಿಗೂ ಖುಷಿ ನೀಡಿದೆ. ಅವರು ಕೂಡ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಚಿಕ್ಕ ಮಗನ ಫಸ್ಟ್ ಲುಕ್ ಪೋಸ್ಟರ್ ನಿಮ್ಮ ಮಡಿಲಿಗೆ ಹಾಕಿದ್ದೆವು. ಅದಕ್ಕೆ ನೀವೆಲ್ಲ ಪ್ರತಿಕ್ರಿಯೆ ಕಳಿಸಿ ಅನಿಸಿಕೆ ಹಂಚಿಕೊಂಡಿರಿ. ರಿವ್ಯೂಸ್ ಹಂಚಿಕೊಂಡಿರಿ. ನಾವು ಎಲ್ಲವನ್ನೂ ಓದಿದ್ದೇವೆ. ಖುಷಿಯಾಯ್ತು ಎಂದಿದ್ದಾರೆ. ಕೋವಿಡ್ 19 ಮುಗಿದ ಬಳಿಕ ಚಿತ್ರೀಕರಣ ಆರಂಭವಾಗಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.