ಇರ್ಫಾನ್‌ಖಾನ್‌ ಮೈಸೂರಿನ ನಂಟು

2015 ಏ.19ರಂದು ಬದನವಾಳು ಗ್ರಾಮದಲ್ಲಿ ಪ್ರಸನ್ನ ಜೊತೆಗೆ ತಂಗಿದ್ದರು

Team Udayavani, Apr 30, 2020, 3:06 PM IST

ಇರ್ಫಾನ್‌ಖಾನ್‌ ಮೈಸೂರಿನ ನಂಟು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ನಿಧನರಾದ ಖ್ಯಾತ ಬಾಲಿವುಡ್‌ ನಟ ಇರ್ಫಾನ್‌ ಖಾನ್‌ಗೆ ಮೈಸೂರಿನ ಜೊತೆ ಉತ್ತಮ ನಂಟು ಇತ್ತು. ಇದಕ್ಕೆ ಸಾಕ್ಷಿಯಂತೆ ಮೈಸೂರಿಗೆ ಹಲವು ಬಾರಿ ಬಂದಿದ್ದರು. ಚಿತ್ರನಟ, ರಂಗ ಕಲಾವಿದರಾಗಿ ಗುರುತಿಸಿಕೊಂಡಿದ್ದ ಇರ್ಫಾನ್‌ ಖಾನ್‌ 2015ರಲ್ಲಿ ರಾಷ್ಟ್ರಾದ್ಯಂತ ಚರ್ಚೆಗೆ ಕಾರಣವಾಗಿದ್ದ ಬದನವಾಳು ಸುಸ್ಥಿರ ಬದುಕಿನ ರಾಷ್ಟ್ರೀಯ ಸಮಾವೇಶಕ್ಕೆ ಹಿರಿಯ ರಂಗಕರ್ಮಿ ಪ್ರಸನ್ನ ಜೊತೆಗೆ ಆಗಮಿಸಿ, ಒಂದು ರಾತ್ರಿ ತಂಗಿದ್ದರು.

2015 ಏ.19ರಂದು ನಂಜನಗೂಡಿನ ಬದನವಾಳು ಗ್ರಾಮದಲ್ಲಿ ನಡೆದಿದ್ದ ಸುಸ್ಥಿರ ಬದುಕಿನ ರಾಷ್ಟ್ರೀಯ ಸಮಾವೇಶಕ್ಕೆ ಹೋರಾಟಗಾರರು, ಕಲಾವಿದರು, ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಮೈಸೂರಿಂದ ಸಾಮಾಜಿಕ ಹೋರಾಟಗಾರರು, ಕಲಾವಿದರು, ಗಾಂಧಿ ವಾದಿಗಳು ಬದನವಾಳು ಗ್ರಾಮಕ್ಕೆ ಕಾಲ್ನಡಿಗೆಯ ಮೂಲಕ ತೆರಳಿ ಸಮಾವೇಶಕ್ಕೆ ಮತ್ತಷ್ಟು ಹುರುಪು ತಂದಿದ್ದರು. ಈ ಸಮಾವೆಶಕ್ಕೆ ನಟ ಇರ್ಫಾನ್‌ ಖಾನ್‌ ತನ್ನ ಪತ್ನಿಯೊಂದಿಗೆ, ಗುರುಗಳಾದ ಪ್ರಸನ್ನ ಜೊತೆಗೆ ಆಗಮಿಸಿ ಹೋರಾಟಕ್ಕೆ ಮತ್ತಷ್ಟು ಪುಷ್ಠಿ ನೀಡಿದ್ದರು. ಬಳಿಕ ಮಾರ ನೇಯ ದಿನ ಮೈಸೂರು ರಂಗಾಯಣದಲ್ಲಿ ನಡೆಯುತ್ತಿದ್ದ ಬೇಸಿಗೆ ಚಿನ್ನರ ಶಿಬಿರಕ್ಕೆ ಭೇಟಿ ನೀಡಿ ಒಂದಷ್ಟು ಸಮಯ ಮಕ್ಕಳೊಂದಿಗೆ ಕಳೆದಿದ್ದು, ಈಗ ನೆನಪುಮಾತ್ರ. ಬದನವಾಳು ಗ್ರಾಮದಲ್ಲಿ ತಂಗಿದ್ದ ಅವರು, ತಮ್ಮ ಗುರುಗಳಾದ ಪ್ರಸನ್ನ ಜೊತೆಗೆ ಖಾದಿ ಗ್ರಾಮೋದ್ಯೋಗ ಕೈಮಗ್ಗ ಮತ್ತು ಕರಕುಶಲ ವಸ್ತುಗಳ ತಯಾರಿಸುವ ಗುಡಿಕೈಗಾರಿಕೆಗಳನ್ನು ದೇಶಾದ್ಯಂತ ಕಟ್ಟುವ ಕನಸನ್ನು ಹರಿಬಿಟ್ಟಿದ್ದರು.

ಬಹುರೂಪಿಗೂ ಬಂದಿದ್ದರು: 2016ರ ಆರಂಭದಲ್ಲಿ ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪದಲ್ಲಿ ಭಾಗವಹಿಸಿದ್ದ ಅವರು, ಸಂವಾದ  ಕಾರ್ಯಕ್ರಮ ನಡೆಸಿಕೊಟ್ಟು ಹಲವು ವಿಚಾರಧಾರೆಗಳನ್ನು ಹರಿಬಿಟ್ಟಿದ್ದರು. ರಂಗಾಯಣದ ಆಗಿನ ನಿರ್ದೇಶಕರಾಗಿದ್ದ ಜನಾರ್ದನ (ಜನ್ನಿ)ಅವರ ಒಡನಾಟ ಹೊಂದಿದ್ದ ಇರ್ಫಾನ್‌ ಮೈಸೂರಿಗೆ ಮತ್ತೂಮ್ಮೆ ಬರಲು ಕಾರಣವಾಗಿತ್ತು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.