ಯಾಂತ್ರೀಕೃತ ಮೀನುಗಾರಿಕೆಗೆ ಅವಕಾಶ ನೀಡಿ: ಸಂಘ ಆಗ್ರಹ
Team Udayavani, May 2, 2020, 9:06 AM IST
ಸಾಂದರ್ಭಿಕ ಚಿತ್ರ
ಮಲ್ಪೆ: ಕೋವಿಡ್ ಹಿನ್ನೆಲೆಯಲ್ಲಿ ಇರುವ ಸಾಮಾಜಿಕ ಅಂತರ ಸಹಿತ ಎಲ್ಲ ನಿಯಮಗಳನ್ನು ಪಾಲಿಸಲು ನಾವು ಬದ್ಧರಿದ್ದು, ಯಾಂತ್ರೀಕೃತ ಮೀನುಗಾರಿಕೆಗೂ ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ಭೇಟಿಯಾಗಿ ಮನವಿ ಮಾಡಿರುವುದಾಗಿ ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ ತಿಳಿಸಿದ್ದಾರೆ. ಸರಕಾರದ ಸೂಚನೆಯನ್ನು ಆಧರಿಸಿಯೇ ಬೋಟುಗಳು ನೀರಿಗಿಳಿಯಲಿವೆ. ಕಡಲಿನಿಂದ ಮರಳಿದ ಬಳಿಕ ಮೀನನ್ನು ಇಳಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಬಂದರಿನೊಳಗೆ ಸಾರ್ವಜನಿಕವಾಗಿ ಮೀನು ಹರಾಜು ಮತ್ತು ಚಿಲ್ಲರೆ ಮಾರಾಟ ಮಾಡದಂತೆ ನೋಡಿಕೊಳ್ಳುವುದು, ಹೊರರಾಜ್ಯದ ಮೀನಿನ ಲಾರಿಗಳಿಗೆ ಬಂದರು ಪ್ರವೇಶಕ್ಕೆ ನಿರ್ಬಂಧ, ಮೀನುಗಾರಿಕೆ ಚಟುವಟಿಕೆ ನಿಯಮ ಬದ್ಧವಾಗಿ ನಡೆಯುವಂತೆ ನಿಗಾ ಇಡುವ ಜವಾಬ್ದಾರಿಯನ್ನು ಮೀನುಗಾರ ಸಂಘವೇ ವಹಿಸಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ದೋಣಿಗಳು ಅಪಾಯದಲ್ಲಿ
ಲಾಕ್ಡೌನ್ ಹಿನ್ನೆಲೆಯಲ್ಲಿ ಮಾ. 24ರಿಂದ ಇಲ್ಲಿನ ದೋಣಿಗಳಲ್ಲದೆ ಗಂಗೊಳ್ಳಿ, ಹಂಗಾರಕಟ್ಟೆ ಕೋಡಿ, ಭಟ್ಕಳ, ಹೊರರಾಜ್ಯದ ಕೆಲವು ಬೋಟುಗಳು ಮಲ್ಪೆಯಲ್ಲಿ ತಂಗಿವೆ. ಬಂದರಿನಲ್ಲಿ ಜಾಗದ ಸಮಸ್ಯೆಯಿಂದಾಗಿ ಹಲವು ದೋಣಿಗಳು ಹೊಳೆಯಲ್ಲಿಯೇ ನಿಂತಿದ್ದು, ಮಳೆಗಾಲ ಆರಂಭಗೊಂಡರೆ ಹೊಳೆಯ ನೀರಿನ ರಭಸಕ್ಕೆ ನಿಯಂತ್ರಣ ತಪ್ಪಿ ಸಮುದ್ರ ಸೇರುವ ಸಾಧ್ಯತೆ ಇದೆ. ಒಂದು ಸಲ ಮೀನುಗಾರಿಕೆಗೆ ಅವಕಾಶ ಕೊಟ್ಟಲ್ಲಿ ಬೋಟುಗಳು ತೆರವುಗೊಂಡು ತಮ್ಮ ತಮ್ಮ ಬಂದರು ಸೇರಿಕೊಳ್ಳಲು ಅನುಕೂಲವಾಗುತ್ತದೆ ಎನ್ನುತ್ತಾರೆ ಮೀನುಗಾರ ಸಂಘದ ಉಪಾಧ್ಯಕ್ಷ ರಮೇಶ್ ಕೋಟ್ಯಾನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಮಣ್ಣಪಳ್ಳ ಕೆರೆಯೊಡಲಿಗೆ ತ್ಯಾಜ್ಯ;ಡಸ್ಟ್ಬಿನ್ ಅಳವಡಿಕೆ ಮಾಡಿದ್ದರೂ ಉಪಯೋಗ ಶೂನ್ಯ
MGM, ಕುಂಜಿಬೆಟ್ಟು: ಇಂಟರ್ಲಾಕ್ ಅಳವಡಿಕೆ
Malpe: ಬಾಳೆಗಿಡಕ್ಕೆ ಬಾಣ ಪ್ರಯೋಗ!; ಕ್ಷತ್ರಿಯ ಶಿವಾಜಿ ಮರಾಠ ವಂಶಸ್ಥರ 45 ಕುಟುಂಬಗಳ ಆಚರಣೆ
Udupi: ಕಾರು ಢಿಕ್ಕಿಯಾಗಿ ಬೈಕ್ ಸವಾರ ವಿದ್ಯಾರ್ಥಿ ಮೃತ್ಯು
Geethanjali Silks: ಅ.9ರಂದು ಪುರುಷರ ಬಟ್ಟೆಗಳ ವಿಶಾಲ ವಿಭಾಗ ಗ್ರಾಹಕರಿಂದಲೇ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maski; ಚಿರತೆಗೆ ಹೊಲುವ ಕಾಡು ಬೆಕ್ಕು ಪ್ರತ್ಯಕ್ಷ; ಗ್ರಾಮಸ್ಥರ ಆತಂಕ
Election Result: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ…: ಡಿಕೆ ಶಿವಕುಮಾರ್
Dharwad: ಕಪ್ಪತ್ತಗುಡ್ಡದ ರಕ್ಷಣೆಗೆ ಹೋರಾಟ ನಿರಂತರ: ನಂದಿವೇರಿ ಸ್ವಾಮೀಜಿ
Jammu Kashmir Poll:ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಜನರು ಒಪ್ಪಿಲ್ಲ: ಫಾರೂಖ್ ಅಬ್ದುಲ್ಲಾ
Koppa; ಸಾಲಬಾಧೆ, ಒತ್ತುವರಿ ತೆರವಿನ ಆತಂಕ; ಆತ್ಮಹತ್ಯೆಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.