42 ಚೆಕ್‌ಪೋಸ್ಟ್‌ ದಾಟಿ ಬಂದ ಆ್ಯಂಬುಲೆನ್ಸ್‌!

ಕೋವಿಡ್‌ 19 ಹರಡಿದ್ದು ಸತ್ತ ವ್ಯಕ್ತಿಯಿಂದಲೋ, ಆತನ ಪುತ್ರನಿಂದಲೋ?

Team Udayavani, May 2, 2020, 3:11 PM IST

42 ಚೆಕ್‌ಪೋಸ್ಟ್‌ ದಾಟಿ ಬಂದ ಆ್ಯಂಬುಲೆನ್ಸ್‌!

ಮಂಡ್ಯ: ಮೃತ ವ್ಯಕ್ತಿಯ ಶವವನ್ನು ಹೊತ್ತ ಸರ್ಕಾರಿ ಆ್ಯಂಬುಲೆನ್ಸ್‌ ಮುಂಬೈನಿಂದ 42 ಚೆಕ್‌ಪೋಸ್ಟ್‌ಗಳನ್ನು ದಾಟಿ ಪಾಂಡವಪುರ ತಾಲೂಕಿನ ಬಿ.ಕೊಡಗಹಳ್ಳಿಯನ್ನು ತಲುಪಿದೆ. ಸರ್ಕಾರಿ ಆ್ಯಂಬುಲೆನ್ಸ್‌ ಎಂಬ ಕಾರಣಕ್ಕೆ ಎಲ್ಲಾ ಚೆಕ್‌ಪೋಸ್ಟ್‌ಗಳನ್ನು ಸುಲಭವಾಗಿ ದಾಟಿ ಬಂದಿದ್ದು, ಇದರಲ್ಲಿ ಜಿಲ್ಲಾಡಳಿತ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.

ಮೃತ ವ್ಯಕ್ತಿಯ ಶವಪರೀಕ್ಷಾ ವರದಿಯಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಆತನಲ್ಲಿ ಕೊರೊನಾ ವೈರಸ್‌ ಇತ್ತೇ, ಇಲ್ಲವೇ
ಎನ್ನುವುದು ಖಚಿತಪಟ್ಟಿಲ್ಲ. ಹಾಗಾಗಿ ಮೃತ ವ್ಯಕ್ತಿಯ ಪುತ್ರ ಮುಂಬೈನಲ್ಲಿ ಐಸಿಐಸಿಐ ಬ್ಯಾಂಕ್‌ ಉದ್ಯೋಗಿ ಯಾಗಿದ್ದು, ಆತನಿಂದ ಸೋಂಕು ಕಾಣಿಸಿಕೊಂಡಿರಬಹುದೆಂದು ಜಿಲ್ಲಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಂಬೈನ ದೇಸಾಯಿ ಆಸ್ಪತ್ರೆ ಸಂಪರ್ಕಿಸಿ ಮೃತ ವ್ಯಕ್ತಿಯಲ್ಲಿ ಕೊರೊನಾ ಇತ್ತೆ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಮೃತ ವ್ಯಕ್ತಿಯ ಒಬ್ಬ ಪುತ್ರಿ ಮಂಡ್ಯ ಜಿಲ್ಲೆಯ ಕೆ. ಆರ್‌.ಪೇಟೆಯಲ್ಲಿ ವಾಸವಾಗಿದ್ದಾರೆ. ತಂದೆಯ ಅಂತಿಮ ದರ್ಶನ ಪಡೆಯಲು ಆಸೆ ವ್ಯಕ್ತ         ಪಡಿಸಿದ್ದರಿಂದ
ಶವವನ್ನು ಮುಂಬೈನಿಂದ ತವರೂರಾದ ಬಿ.ಕೊಡಗಹಳ್ಳಿಗೆ ಕರೆತಂದಿದ್ದಾಗಿ ಹೇಳಲಾಗಿದೆ. ಮುಂಬೈನಿಂದ ಬಂದವರೆಂಬ ಕಾರಣದಿಂದ ಇವರೂ ಸೇರಿದಂತೆ
ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 7 ಮಂದಿಯನ್ನು ಏ.24ರಂದೇ ಮೊರಾರ್ಜಿ ದೇಸಾಯಿ ಶಾಲೆಯ ಹಾಸ್ಟೆಲ್‌ನಲ್ಲಿ ಕ್ವಾರಂ ಟೈನ್‌ ಮಾಡಲಾಗಿತ್ತು. ಏ.28ರಂದು 7 ಜನರ ರಕ್ತ, ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ನಾಲ್ವರಲ್ಲಿ ಪಾಸಿಟೀವ್‌ ಬಂದಿದೆ. ಹೆಂಡತಿಯ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ. ಸೋಂಕಿತರನ್ನು ಮಂಡ್ಯ ಮಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಾಲ್ವರಲ್ಲೂ ರೋಗ ಲಕ್ಷಣಗಳಿಲ್ಲದಿರುವುದು ಕಂಡುಬಂದಿದ್ದು, ಇವರ ಪ್ರಾಥಮಿಕ ಹಾಗೂ ಎರಡನೇ ಸಂಪರ್ಕಿತರನ್ನು ಗುರುತಿಸಿ ಕ್ವಾರಂಟೈನ್‌ ಮಾಡಲಾಗಿದೆ. ಆ್ಯಂಬುಲೆನ್ಸ್‌ ಚಾಲಕನನ್ನು ಕ್ವಾರಂಟೈನ್‌ ಮಾಡುವಂತೆ ಮುಂಬೈನ ದೇಸಾಯಿ ಆಸ್ಪತ್ರೆಯವರಿಗೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.