ಅಕಾಲಿಕ ಮಳೆಗೆ ಭತ್ತ ಬೆಳೆ ನಾಶ
Team Udayavani, May 3, 2020, 12:30 PM IST
ಗಂಗಾವತಿ: ಅಕಾಲಿಕ ಮಳೆಯಿಂದಾಗಿ ನೆಲಕ್ಕುರುಳಿರುವ ಭತ್ತದ ಬೆಳೆ.
ಬೆಂಗಳೂರು/ಗಂಗಾವತಿ/ಹೊಳೆನರಸೀಪುರ: ಶನಿವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಒಳನಾಡಿನ ಹೆಚ್ಚಿನ ಕಡೆ ಮತ್ತು ಕರಾವಳಿಯ ಒಂದೆರಡು ಕಡೆ ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಬಿದ್ದ 4 ಸೆಂ.ಮೀ. ಮಳೆ ರಾಜ್ಯದಲ್ಲಿಯೇ ಅತ್ಯಧಿಕವಾಗಿತ್ತು.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಸುರಿದ ಅಕಾಲಿಕ ಮಳೆಗೆ ಭತ್ತ ಬೆಳೆ ನೆಲಕ್ಕುರುಳಿದ್ದು, ಅಪಾರ ಪ್ರಮಾಣದಲ್ಲಿ
ನಷ್ಟವುಂಟಾಗಿದೆ. ಕುಂಟೋಜಿ ಬರಗೂರು, ಮುಸ್ಟೂರು, ಅಂಜೂರಿಕ್ಯಾಂಪ್ ಕೊಕ್ಲೃಕಲ್ ಸೇರಿ ಸುತ್ತಲಿನ ಗ್ರಾಮಗಳಲ್ಲಿ ಸುಮಾರು 300 ಎಕರೆ ಪ್ರದೇಶಲ್ಲಿ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಸಂಪೂರ್ಣ ನೆಲಕ್ಕುರುಳಿದೆ. ಈ ಪ್ರದೇಶಕ್ಕೆ ಕಾರಟಗಿ ತಹಶೀಲ್ದಾರ್ ಕವಿತಾ ಭೇಟಿ ನೀಡಿ, ಸರ್ವೇ ಕಾರ್ಯ ಮಾಡುವಂತೆ ಸೂಚನೆ ನೀಡಿದ್ದಾರೆ.
20ಕ್ಕೂ ಮನೆಗಳಿಗೆ ಹಾನಿ: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿಗೆ ಸೇರಿದ ಗಂಜಿಗನಹಳ್ಳಿಯಲ್ಲಿ ಶುಕ್ರವಾರ ಬಿದ್ದ ಮಳೆಯಿಂದ 20ಕ್ಕೂ ಮನೆಗಳಿಗೆ ಹಾನಿಯಾಗಿದ್ದು, ಅಡಿಕೆ ಮರ ತೆಂಗಿನ ಮರ ಹಾಗೂ ಬಾಳೆ ಸಂಪೂರ್ಣವಾಗಿ ನೆಲಕಚ್ಚಿದೆ. ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಸುರಿದ ಮಳೆ ಪ್ರಮಾಣ ಹೀಗಿದೆ. (ಸೆಂ.ಮೀ.ಗಳಲ್ಲಿ) ಹೊಸದುರ್ಗ, ಕುಕನೂರು, ಯಲಬುರ್ಗಾ, ಮುನಿರಾಬಾದ್ ತಲಾ 3, ಚಿಕ್ಕಮಗಳೂರು, ಪಿರಿಯಾಪಟ್ಟಣ, ಆಲೂರು, ಕುಷ್ಟಗಿ, ಸುಬ್ರಹ್ಮಣ್ಯ ತಲಾ 2, ನಾಯಕನಹಟ್ಟಿ, ತೊಂಡೆಭಾವಿ,
ಕೃಷ್ಣರಾಜಸಾಗರ, ಬುಕ್ಕಪಟ್ಣ, ಚಿತ್ರದುರ್ಗ, ದೇವದುರ್ಗ, ಸುಳ್ಯ, ಧರ್ಮಸ್ಥಳ, ಮಾಗಡಿ ತಲಾ 1. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 41.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕರಾವಳಿಯ ಪಣಂಬೂರಿನಲ್ಲಿ 37 ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ 35 ಡಿ.ಸೆ. ತಾಪಮಾನ ದಾಖಲಾಗಿತ್ತು. ಸೋಮವಾರ ಬೆಳಗ್ಗಿನವರೆಗಿನ ಮುನ್ಸೂಚನೆಯಂತೆ ಕರಾವಳಿಯ ಕೆಲವು ಕಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.