ಮದ್ಯದಂಗಡಿಗಳ ಆರಂಭಕ್ಕೆ ಸಿದ್ದತೆ: ಹಳೆ ಸ್ಟಾಕ್ ಪರಿಶೀಲನೆ ನಂತರ ಪರವಾನಿಗೆ ನೀಡುವಂತೆ ಆಗ್ರಹ
Team Udayavani, May 3, 2020, 1:57 PM IST
ಗಂಗಾವತಿ: ಕೊವಿಡ್-19 ಕರ್ಪ್ಯೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಮದ್ಯದಂಗಡಿಗಳನ್ನು ಆರಂಭಿಸಲು ಜಿಲ್ಲಾಡಳಿತ ಸಿದ್ದತೆ ನಡೆಸಿದೆ.
ಗಂಗಾವತಿ ತಾಲೂಕಿನಲ್ಲಿ ಒಟ್ಡು 18 ಸಿಎಲ್-02 ಸರಕಾರಿ ಮದ್ಯದಂಗಡಿ-೦4 ಇದ್ದು ಜನದಟ್ಟಣೆ ತಪ್ಪಿಸಲು ಬಾರ್ ಮಾಲೀಕರು ಸಾಲಾಗಿ ಮದ್ಯ ಖರೀದಿಸಲು ಕಟ್ಟಿಗೆಗಳಿಂದ ಕ್ಯೂ ನಿಲ್ಲುವಂತೆ ಕಟ್ಟಿಗೆಯಿಂದ ವೇ ನಿರ್ಮಿಸಲಾಗಿದೆ. ಮೇಲೆ ಬಿದಿರಿನ ತಟ್ಟಿ ಹಾಕಲಾಗಿದೆ. ಮದ್ಯದಂಗಡಿ ಹತ್ತಿರ ಮದ್ಯ ಸೇವನೆಗೆ ಅವಕಾಶ ನೀಡದೇ ಪರ್ಸಲ್ ತೆಗೆದುಕೊಂಡು ಹೋಗಲು ಸರಕಾರ ಪರವಾನಿಗೆ ನೀಡಿದೆ. ಈ ನಿಯಮ ಪಾಲನೆ ಮಾಡದ ಮದ್ಯದಂಗಡಿಗಳ ಲೈಸೆನ್ಸ್ ರದ್ದು ಪಡಿಸಲಾಗುತ್ತದೆ ಎಂದು ಅಬಕಾರಿ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಹಳೆಸ್ಟಾಕ್ ಪರಿಶೀಲಿಸಿ ಪರವಾನಿಗೆ ನೀಡಲು ಆಗ್ರಹ
ಕೋವಿಡ್-19 ಕರ್ಪ್ಯೂ ಹೇರುವ ಮುಂಚೆ ಇದ್ದ ಮದ್ಯದ ಸ್ಟಾಕ್ ಪರಿಶೀಲನೆ ನಂತರವೇ ಮದ್ಯಮಾರಾಟಕ್ಕೆ ಅವಕಾಶ ಕಲ್ಪಿಸಬೇಕು. ಅಧಿಕಾರಿಗಳು ಮದ್ಯದದಂಗಡಿಯವರು ಸೇರಿ ಲಾಕ್ ಡೌನ್ ಸಂದರ್ಭದಲ್ಲಿ ಮದ್ಯದ ಅಕ್ರಮ ಮಾರಾಟ ಮಾಡಿದ್ದಾರೆ. ಗ್ರಾಮೀಣ ಮತ್ತು ನಗರದ ಸ್ಲಂಗಳಲ್ಲಿ ಸುಮಾರು 60ಕ್ಕೂ ಹೆಚ್ಚು ಮದ್ಯದ ಅಕ್ರಮ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದ್ದು ಪುನಃ ಇವುಗಳ ಮೂಲಕ ಮದ್ಯ ಮಾರಾಟಕ್ಕೆ ಲಿಕ್ಕರ್ ಲಾಭಿ ನಡೆಯುತ್ತಿದ್ದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯದ ಅಕ್ರಮ ಮಾರಾಟ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಚಾಲಕ ತಿಪ್ಪಣ್ಣ ಆರತಿ ಹುಲುಗೇಶ ದೇವರಮನಿ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.