ಮಂಗನ ಕಾಯಿಲೆ ಮುನ್ನೆಚ್ಚರಿಕೆ ಅಗತ್ಯ


Team Udayavani, May 3, 2020, 4:49 PM IST

ಮಂಗನ ಕಾಯಿಲೆ ಮುನ್ನೆಚ್ಚರಿಕೆ ಅಗತ್ಯ

ಸಿದ್ದಾಪುರ: ಕೋವಿಡ್ 19 ಮತ್ತು ಕೆಎಫ್‌ಡಿ ಕಾಯಿಲೆ ಹರಡುವಿಕೆ ಕುರಿತು ಮುನ್ನೆಚ್ಚರಿಕೆ, ಕುಡಿಯುವ ನೀರು, ಮಳೆಗಾಲದ ಪೂರ್ವಸಿದ್ಧತೆ ಕಾರ್ಯಗಳ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ ಆ ಕುರಿತು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಅವರು ತಾಪಂ ಸಭಾಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲೂಕಿನಲ್ಲಿ ಈವರೆಗೆ 49 ಕೆಎಫ್‌ಡಿ ಪ್ರಕರಣಗಳು ಕಂಡುಬಂದಿದ್ದು ತಲಾ ಎರಡು ರೋಗಿಗಳು ಮಣಿಪಾಲ ಮತ್ತು ಸಿದ್ದಾಪುರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಯಿಲೆ ಉಲ್ಬಣಗೊಳ್ಳುವ ಸ್ಥಿತಿ ಕಂಡುಬರುತ್ತಿಲ್ಲ. ಈಗಾಗಲೇ 3 ಸಾವಿರಕ್ಕೂ ಹೆಚ್ಚು ಜಾನುವಾರುಗಳಿಗೆ ಉಣುಗು ನಿಯಂತ್ರಿಸುವ ಚುಚ್ಚುಮದ್ದು ನೀಡಲಾಗಿದೆ. ಎಲ್ಲ ಗ್ರಾಪಂಗಳಲ್ಲೂ ರೋಗ ನಿರೋಧಕ ದ್ರಾವಣ ಸಿಂಪಡಿಸಲಾಗಿದೆ. ಹಿಂದಿನ ವರ್ಷ ಮೃತಪಟ್ಟ 6 ಜನರಿಗೆ ಪರಿಹಾರ ಬಂದಿದ್ದು ಅವರ ವಾರಸುದಾರರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದರು.

ಕೋವಿಡ್ 19  ಕುರಿತಂತೆ ರಾಜ್ಯ, ಕೇಂದ್ರ ಸರಕಾರಗಳು ಕೆಲವು ಅವಶ್ಯಕತೆಗಳಿಗೆ ವಿನಾಯತಿ ನೀಡಲು ಮುಂದಾಗಿದೆ. ಏನೇ ಇದ್ದರೂ ರೋಗದ ಬಗ್ಗೆ ಎಚ್ಚರ ಅಗತ್ಯ. ಲಾಕ್‌ಡೌನ್‌ ಪಾಲನೆ ಅತಿ ಅವಶ್ಯಕ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಅಗತ್ಯ ವಿನಾಯಿತಿಗಳ ಬಗ್ಗೆ ವಿವರ ನೀಡಲಿದ್ದು ಅವುಗಳನ್ನು ಪಾಲಿಸುವುದರ ಜೊತೆಗೆ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಕುಡಿಯುವ ನೀರಿನ ಕುರಿತಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದ್ದು ಎಲ್ಲೇ ನೀರಿನ ತೊಂದರೆಯಾದರೂ ಟ್ಯಾಂಕರ್‌ನಲ್ಲಿ ಒದಗಿಸಲು ಸೂಚಿಸಲಾಗಿದೆ.

ಮಳೆಗಾಲದ ಪೂರ್ವ ಸಿದ್ಧತೆಯಾಗಿ ಎಲ್ಲ ಇಲಾಖೆಗಳಲ್ಲೂ ಆಗಬೇಕಾದ ಕಾರ್ಯಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಹೆಸ್ಕಾಂನವರು ವಿದ್ಯುತ್‌ ಸಂಪರ್ಕ ಸಮರ್ಪಕವಾಗಿರಿಸಿಕೊಳ್ಳಲು ಮತ್ತೂಂದು ತಂಡವನ್ನು ಒದಗಿಸಲಾಗಿದೆ. ಆರೋಗ್ಯ ಇಲಾಖೆಗೆ ಕೂಡ ಮುನ್ನೆಚ್ಚರಿಕೆ ವಹಿಸಲು ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಶಾಲೆ, ಅಂಗನವಾಡಿ ಮುಂತಾದವುಗಳ ಕಟ್ಟಡ, ಸಾಮಗ್ರಿಗಳನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳಲು ನಿರ್ದೇಶನ ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೃಷಿಕರಿಗೆ ಅಗತ್ಯ ಸಾಮಗ್ರಿ, ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ. ಈ ಎಲ್ಲವುಗಳ ಮಧ್ಯೆ ಕೋವಿಡ್ 19  ರೋಗದ ಗಂಭೀರತೆ ನೆನಪಿಟ್ಟುಕೊಂಡು ಅಷ್ಟೇ ಗಂಭೀರತೆಯಿಂದ ಎಚ್ಚರ ವಹಿಸಬೇಕಿದೆ ಎಂದರು.

ತಹಶೀಲ್ದಾರ್‌ ಮಂಜುಳಾ ಭಜಂತ್ರಿ, ತಾಪಂ ಇಒ ಪ್ರಶಾಂತ ರಾವ್‌, ಇನ್ನಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl-1

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

1-ankol

Ankola; ಮನೆ ಮಂದಿ ಮಲಗಿರುವಾಗಲೇ ಕನ್ನ: ದೇವರ ಮೂರ್ತಿಗಳನ್ನೇ ಕದ್ದೊಯ್ದರು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

8

Udupi: ಅಂಬಲಪಾಡಿ ಓವರ್‌ಪಾಸ್‌ ಕಾಮಗಾರಿ ಆರಂಭ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

7(1

Kota: ಬ್ಲಾಕ್‌ ಲಿಸ್ಟ್‌ನಿಂದ ಅಪಾಯಕಾರಿ ಸ್ಥಳಗಳೇ ಔಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.