ಘಾನ: ಲಾಕ್‌ಡೌನ್‌ ಸಡಿಲಿಕೆಗೆ ಮಿಶ್ರ ಅಭಿಪ್ರಾಯ


Team Udayavani, May 4, 2020, 1:31 PM IST

ಘಾನ: ಲಾಕ್‌ಡೌನ್‌ ಸಡಿಲಿಕೆಗೆ ಮಿಶ್ರ ಅಭಿಪ್ರಾಯ

ಘಾನ: ಇದೀಗ ವಿಶ್ವೆದೆಲ್ಲೆಡೆ ಲಾಕ್‌ಡೌನ್‌ ಸಡಿಲಿಕೆಯದ್ದೇ ಘೋಷಣೆ. ಕಳೆದ 2 ತಿಂಗಳುಗಳಿಂದ ಸ್ತಬ್ಧವಾಗಿದ್ದ ಹಲವಾರು ರಾಷ್ಟ್ರಗಳು ಸಹಜ ಸ್ಥಿತಿಗೆ ತೆರೆದುಕೊಳ್ಳುತ್ತಿವೆ. ಈಗ ಘಾನಾದ ಸರದಿ.

ದೇಶದ ಎರಡು ಪ್ರಮುಖ ನಗರಗಳಾದ ಅಕ್ರಾ ಮತ್ತು ಕುಮಾಸಿಗಳಲ್ಲಿ ಮೂರು ವಾರಗಳ ಲಾಕ್‌ಡೌನ್‌ ಸಂಪೂರ್ಣವಾಗಿ ತೆರವುಗೊಂಡಿದ್ದು, ಕ್ರಮೇಣ ವಾಗಿ ಜನರು ಸಹಜ ಸ್ಥಿತಿಯತ್ತ ಮರಳುತ್ತಿದ್ದಾರೆ.

ಆದಾಯವಿಲ್ಲದೇ ಕಂಗೆಟ್ಟಿದ್ದ ಜನರು
ಆದಾಯವಿಲ್ಲದೇ ಕಂಗೆಟ್ಟಿದ್ದ‌ ಬಡವರ್ಗದವರಲ್ಲಿ ಲಾಕ್‌ಡೌನ್‌ ನಿಯಮಗಳ ವಿನಾಯಿತಿಯಿಂದ ಆಶಾಕಿರಣ ಮೂಡಿದ್ದು, ಸ್ಥಗಿತಗೊಂಡಿದ್ದ ಮಾರುಕಟ್ಟೆಗಳು ಮತ್ತು ವಾಣಿಜ್ಯ ಪ್ರದೇಶಗಳು ಮತ್ತೆ ಕಾರ್ಯಾಚರಣೆ ಪ್ರಾರಂಭಿಸಿವೆ. ಕ್ರಮೇಣವಾಗಿ ಅಂಗಡಿ-ಮುಗ್ಗಟ್ಟುಗಳು, ಸಣ್ಣ ಉದ್ಯಮಗಳು, ಮಳಿಗೆಗಳು ಹಾಗೂ ಬ್ಯಾಂಕುಗಳು ಮತ್ತೆ ತೆರೆಯಲ್ಪಟ್ಟಿವೆ. ಪರಿಣಾಮ ನಗರದ ಕೆಲವು ಪ್ರದೇಶಗಳಲ್ಲಿ ವಾಹನ ದಟ್ಟಣೆಯಾಗಿದ್ದು, ಟ್ರಾಫಿಕ್‌ ಜಾಮ್‌ ಸಮಸ್ಯೆ ಎದುರಾಗಿದೆ.

ಏಕಾಏಕಿ ನಿರ್ಬಂಧಗಳನ್ನು ತೆರವುಗೊಳಿಸಿರುವ ಸರಕಾರದ ನಿರ್ಧಾರಕ್ಕೆ ಕೆಲವರು ಸಂತೋಷಪಟ್ಟರೆ, ಹಲವರು ಸೋಂಕು ಹರಡುವಿಕೆ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.

ಸರಕಾರದ ನಿರ್ಧಾರ ಸ್ವಾಗತಾರ್ಹ
ಸುಮಾರು ಶೇ.90ರಷ್ಟು ಘಾನಾದ ಜನರು ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸೋಂಕಿನ ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ಲಾಕ್‌ಡೌನ್‌ ನಿಯಮಗಳು ಅವರ ಜೀವನ ಶೈಲಿಯ ಮೇಲೆ ದುಷ್ಪರಿಣಾಮ ಬೀರಿತು. ಜೀವನ ನಿರ್ವಹಣೆಗಾಗಿ ಹಣಕಾಸು ಇಲ್ಲದೇ ಸಂಕಷ್ಟಕ್ಕೀಡಾಗಿದ್ದರು. ಆದರೆ ಸದ್ಯ ಸರಕಾರ ತೆಗೆದುಕೊಂಡಿರುವ ನಿರ್ಧಾರದಿಂದ ಅವರ ಜೀವನ ತಕ್ಕಮಟ್ಟಿಗೆ ಸರಿ ಹೋಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಘಾನ ಸರಕಾರವು ಮೂರು ತಿಂಗಳ ಕಾಲ ವಿದ್ಯುತ್‌ ವೆಚ್ಚದ ದರದಲ್ಲಿ ಅರ್ಧದಷ್ಟು ಮೊತ್ತವನ್ನು ಕಡಿತಗೊಳಿಸಿದ್ದು, ನೀರಿನ ಬಿಲ್‌ಗ‌ಳನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಜತೆಗೆ ಬಡವರ್ಗದವರಿಗೆ ಲಾಕ್‌ಡೌನ್‌ ಬಿಸಿ ತಟ್ಟ ಬರದೆಂದು ಆಹಾರ ವಿತರಣೆ ಮಾಡಿದೆ ಎನ್ನಲಾಗುತ್ತಿದೆ.

ಆದರೆ ಲಾಕ್‌ಡೌನ್‌ ಸಡಿಲಿಕೆಯಾದ ದಿನದಿಂದ ಸೋಂಕು ಪ್ರಕರಣಗಳು 2 ಸಾವಿರ ಗಡಿ ದಾಟಿದ್ದು, ಬಲಿಯಾದವರ ಸಂಕ್ಯೆ 17ಕ್ಕೆ ಹೇರಿದೆ ಎಂದು ಕೆಲವರು ಸರಕಾರದ ನಡೆಯನ್ನು ದೂಷಿಸಿದ್ದಾರೆ.

ಜತೆಗೆ ಸರಕಾರ ಘೋಷಿಸಿರುವ ಕೆಲ ಯೋಜನೆಗಳು ಹಾಗೂ ಅದರ ಸೌಲಭ್ಯಗಳು ಎಲ್ಲ ಸ್ತರದವರಿಗೂ ಸಿಗುತ್ತಿಲ್ಲ ಎಂಬ ದೂರೂ ವ್ಯಕ್ತವಾಗಿದೆ. ಪಶ್ಚಿಮ ಆಫ್ರಿಕಾದ ದೇಶದ ಕಾರ್ಪೊರೇಟ್‌ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.