![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, May 4, 2020, 5:52 PM IST
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈಗ ಮತ್ತೆ ಒಂಬತ್ತು ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಕಳೆದ 24 ಗಂಟೆಯಲ್ಲಿ 37 ಪ್ರಕರಣಗಳು ದೃಢವಾದಂತಾಗಿದೆ.
ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ದಾವಣಗೆರೆಯ 48 ವರ್ಷದ ಮಹಿಳೆ ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಸೋಂಕಿತ ಸಂಖ್ಯೆ 533ರ ಸಂಪರ್ಕದಿಂದ ಇವರಿಗೆ ಸೋಂಕು ಹರಡಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸೋಮವಾರ ಮಧ್ಯಾಹ್ನದ ನಂತರ ದೃಢಪಟ್ಟ 9 ಪ್ರಕರಣಗಳಲ್ಲಿ ಏಳು ಪ್ರಕರಣಗಳು ಬೀದರ್ ನಲ್ಲೇ ದೃಢವಾಗಿದೆ. ಈ ಏಳೂ ಜನರಿಗೆ ಸೋಂಕಿತ ಸಂಖ್ಯೆ 590ರ ಸಂಪರ್ಕದಿಂದ ಸೋಂಕು ತಾಗಿರುವುದು ಖಚಿತವಾಗಿದೆ.
ಬೆಂಗಳೂರು ನಗರದ 40 ವರ್ಷದ ವ್ಯಕ್ತಿಗೆ ಕೋವಿಡ್-19 ಸೋಂಕು ತಾಗಿದ್ದು, ಆತಕ ಸಂಪರ್ಕ ಮೂಲ ಹುಡುಕುಲಾಗುತ್ತಿದೆ.
ರಾಜ್ಯದಲ್ಲಿ ಒಟ್ಟು 651 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಅದರಲ್ಲಿ 27 ಜನರು ಸಾವನ್ನಪ್ಪಿದ್ದು, ಒಂದು ಸಾವು ಕೋವಿಡ್ ಅಲ್ಲದ ಕಾರಣದಿಂದ ಸಂಭವಿಸಿದೆ. ರಾಜ್ಯದಲ್ಲಿ 321 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.