ಲಸಿಕೆ ಸಂಶೋಧನೆ ಲಾಭಕ್ಕೋ, ಪ್ರತಿಷ್ಠೆಗೋ?


Team Udayavani, May 6, 2020, 1:30 PM IST

ಲಸಿಕೆ ಸಂಶೋಧನೆ ಲಾಭಕ್ಕೋ, ಪ್ರತಿಷ್ಠೆಗೋ?

ನ್ಯೂಯಾರ್ಕ್‌: ಸುಮಾರು 2 ತಿಂಗಳಿಂದ ಪ್ರಪಂಚ ನಿಂತ ನೀರಾಗಿದ್ದು, ನಾಲ್ಕು ತಿಂಗಳ ಹಿಂದೆ ಚೀನದಲ್ಲಿ ಕಾಣಿಸಿಕೊಂಡ ಕೋವಿಡ್‌-19 ಎಂಬ ಸೋಂಕಿನಿಂದಾಗಿ ಲೆಕ್ಕವಿಲ್ಲದಷ್ಟು ತೊಂದರೆ-ತಾಪತ್ರಯಗಳು ಎದುರಾಗಿವೆ.

ಈ ವೈರಸ್‌ನ ವಿರುದ್ಧ ಹೋರಾಡಲು ಸಂಶೋಧಕರ ತಂಡಗಳು ನಾ ಮುಂದು ತಾ ಮುಂದು ಎಂದು ಅಸ್ತ್ರವಾದ ಲಸಿಕೆ ಆನ್ವೇಷಣೆಯಲ್ಲಿ ನಿರತರಾಗಿದ್ದಾರೆ. ಆದರೆ ಹೀಗೆ ಸಂಶೋಧನೆ ನಡೆಸುತ್ತಿರುವ ಪ್ರತಿ ದೇಶಗಳೂ ಪ್ರಾಮಾಣಿಕವಾಗಿ ಸಮಸ್ಯೆಗೆ ಪರಿಹಾರ ಹುಡುಕುತ್ತಿವೆಯೇ ಅಥವಾ ತಮ್ಮ ಪರಿಣಿತರ ಸಾಮರ್ಥ್ಯ ಪ್ರದರ್ಶನಕ್ಕೆ, ಪ್ರತಿಷ್ಟೆಗೆ ಹಾಗೂ ವಾಣಿಜ್ಯ ಉದ್ದೇಶಕ್ಕೆ ಕಾರ್ಯೋನ್ಮುಖವಾಗಿವೆಯೋ ಎಂಬುದೀಗ ಚರ್ಚೆಗೀಡಾಗಿದೆ. ಈ ಕುರಿತು ವಾಷಿಂಗ್ಟನ್‌ ಪೋಸ್ಟ್‌ ಸಹ ವರದಿ ಮಾಡಿದೆ.

ಲಸಿಕೆ ಆನ್ವೇಷಣೆಗೆ ಮುನ್ನವೇ ಹತ್ತಾರು ಕಂಪೆನಿಗಳು ಭರವಸೆಗಳು ನೀಡುತ್ತಿವೆ. ಆದರೆ ಇದರ ಹಿಂದೆ ವ್ಯಾವಹಾರಿಕ ಲಾಭ ಪಡೆಯುವ ಉದ್ದೇಶ ಇದೆ ಎನ್ನಲಾಗುತ್ತಿದೆ.

ಉದ್ಯಮವಾಗಿ ಪರಿಗಣನೆ
ಸರಕಾರಗಳು, ಔಷಧೀಯ ತಯಾರಿಕಾ ಘಟಕಗಳು, ಬಯೋಟೆಕ್‌ ಉದ್ಯಮದಾರರು ಸೇರಿದಂತೆ ಶೈಕ್ಷಣಿಕ ಪ್ರಯೋಗಾಲಯಗಳು ಲಸಿಕೆ ಸಂಶೋಧನೆಯಲ್ಲಿ ನಿರತವಾಗಿವೆ. ಇಂತಹ ಸುಮಾರು 90 ಯೋಜನೆಗಳು ಕಾರ್ಯಾಚರಿಸುತ್ತಿದ್ದು, ಇದುವರೆಗೆ ಕೇವಲ ಏಳು ಯೋಜನೆಗಳು ಮಾತ್ರ ಕ್ಲಿನಿಕಲ್‌ ಪ್ರಾಯೋಗಿಕ ಹಂತವನ್ನು ತಲುಪಿವೆ.

ಪ್ರತಿಷ್ಟತೆಯ ಗೀಳು
ಇದಕ್ಕೆ ಪೂರಕವೆಂಬಂತೆ ಪ್ರತಿಷ್ಠಿತೆಯ ಗೀಳಿಗೆ ಬಿದ್ದಿರುವ ಔಷಧ ತಯಾರಕರು ಮತ್ತು ಸಂಶೋಧಕರು ಲಕ್ಷಾಂತರ ಜನರ ಪ್ರಾಣ ಹಿಂಡುತ್ತಿರುವ ಸೋಂಕಿಗೆ ಅತ್ಯಲ್ಪ ಅವಧಿಯಲ್ಲಿ ಲಸಿಕೆ ಕಂಡು ಹಿಡಿಯಲು ಯೋಚಿಸುತ್ತಿಲ್ಲ ಎನ್ನುವ ಟೀಕೆಯೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಪ್ರಯೋಗದ ನಂತರದ ಸುರಕ್ಷತೆಯ ಬಗೆಗೆ ಕಡಿಮೆ ಗಮನ ಕೊಡುತ್ತಿದ್ದಾರೆಂಬ ಆರೋಪವೂ ವ್ಯಕ್ತವಾಗಿದೆ. ಹಾಗಾಗಿ ಲಾಭದ ದೃಷ್ಟಿಯೇ ಹೆಚ್ಚಿದೆ ಎನ್ನಲಾಗುತ್ತಿದೆ.

ವಿಶ್ವದ ಸಮಸ್ಯೆ ಎಂದು ಪರಿಗಣಿಸಿಲ್ಲ
ಸದ್ಯದ ಪರಿಸ್ಥಿತಿಯಲ್ಲಿ ಕೆಲ ವಿಜ್ಞಾನಿಗಳು ಮತ್ತು ವೈದ್ಯರು ಜಾಗತಿಕವಾಗಿ ಎದುರಾಗಿರುವ ಸಮಸ್ಯೆಗೆ ಲಸಿಕೆಯನ್ನು ಕಂಡುಹಿಡಿಯಲು ಶ್ರಮಿಸುತ್ತಿದ್ದಾರೆ.

ಆದರೆ ರಾಜಕೀಯ ನಾಯಕರು ಇದು ಕೇವಲ ತಮ್ಮ ರಾಷ್ಟ್ರದ ಸಮಸ್ಯೆ ಎಂದು ಪರಿಗಣಿಸಿದ್ದು, ಮೊದಲು ತಮ್ಮ ಪ್ರಜೆಗಳನ್ನು ಸಂರಕ್ಷಿಸಿಕೊಳ್ಳಲು ಮಾತ್ರ ಕಾಳಜಿ ಪ್ರದರ್ಶಿಸುತ್ತಿದ್ದಾರೆ. ಈ ಪೈಪೋಟಿಯಲ್ಲಿ ಅಮೆರಿಕ ಮಾತ್ರವಲ್ಲ; ಚೀನ ಸಹಿತ ಹಲವರು ರಾಷ್ಟ್ರಗಳಿವೆ.

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.