![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 6, 2020, 7:47 PM IST
ಬೆಂಗಳೂರು: ಕೋವಿಡ್ 19 ಮತ್ತು ಲಾಕ್ ಡೌನ್ ನಿಂದಾಗಿ ಆಗಿರುವ ಸಮಸ್ಯೆ, ಅದಕ್ಕೆ ಪರಿಹಾರ ಸಂಬಂಧ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಬುಧವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದು, ಕೋವಿಡ್ 19 ಸಂಷ್ಟ ಸ್ಥಿತಿ ಹಿನ್ನೆಲೆಯಲ್ಲಿ ಬಜೆಟ್ ಮಾರ್ಪಾಡು ಮಾಡಬೇಕು ಎಂದು ಹೇಳಿದರು.
ಲೋಕೋಪಯೋಗಿ, ನೀರಾವರಿ, ರಸ್ತೆಯಂತಹ ಅಭಿವೃದ್ಧಿ ಕಾರ್ಯಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ರೈತರು, ಲಾರಿ ಚಾಲಕರು, ಬೀದಿ ವ್ಯಾಪಾರಿಗಳು, ಗಾಣಿಗರು, ಮೀನುಗಾರರು, ಹೋಟೇಲ್ ಸಿಬ್ಬಂದಿ, ಕುಂಬಾರರು ಸೇರಿದಂತೆ ಅಂಸಂಘಟಿತ ವಲಯದಲ್ಲಿ ನಷ್ಟ ಅನುಭವಿಸಿದವರನ್ನು ಗುರುತಿಸಿ, ಕನಿಷ್ಟ 10 ಸಾವಿರ ಕೊಡಬೇಕಾದರೆ, ಬಜೆಟ್ ಗೆ ಹೊಸ ರೂಪ ನೀಡುವುದು ಅನಿವಾರ್ಯ ಎಂದು ತಿಳಿಸಿದರು.
ಕನಿಷ್ಠ ಮೂರು ದಿನವಾದರೂ ಈ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ನಡೆಸಿ ಸಲಹೆ ಪಡೆಯಬೇಕು. ಈ ಚರ್ಚೆ ವೇಳೆ ಸರ್ಕಾರಕ್ಕೆ ಯಾವುದೇ ರೀತಿಯ ಮುಜುಗರ ಮಾಡುವುದಿಲ್ಲ. ಬೇಕಾದಷ್ಟು ವಿಚಾರದಲ್ಲಿ ನಿಮ್ಮ ವೈಫಲ್ಯಗಳಿರಬಹುದು, ಅದು ಬೇರೆ ವಿಚಾರ. ಆದರೆ ನಮ್ಮ ಸಲಹೆಯನ್ನು ಪಡೆಯಬೇಕು. ಈ ಅಧಿವೇಶನದಲ್ಲಿ ಭಾಗವಹಿಸಲು ನಮ್ಮ ಪಕ್ಷದ ಶಾಸಕರು ಯಾವುದೇ ಭತ್ಯೆಗಳನ್ನು ಪಡೆಯುವುದಿಲ್ಲ. ಕಾಂಗ್ರೆಸ್ ಪಕ್ಷದ ಸಲಹೆಯಂತೆ ನಾಲ್ಕೈದು ವರ್ಗದ ಜನರಿಗೆ 5 ಸಾವಿರ ನೀಡಲು ನಿರ್ಧರಿಸಿರುವುದಕ್ಕೆ ಅಭಿನಂದನೆ. ಆದರೆ ಇದು ಸಾಲದು. ಉಳಿದ ಅಸಂಘಟಿತ ಕಾರ್ಮಿಕರಿಗೆ ಸಹಾಯ ಮಾಡಲು ಕೇವಲ 1610 ಕೋಟಿ ಅಲ್ಲ, 10 ಸಾವಿರ ಕೋಟಿ ರೂಪಾಯಿ ಕೊಟ್ಟರೂ ಸಾಲದು. ಈ ವಿಚಾರದಲ್ಲಿ ನಿಮ್ಮ ಜತೆ ನಾವಿದ್ದೇವೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಶಾಸಕರು ಇಂತಹ ಮಾನವೀಯ ವಿಚಾರದಲ್ಲಿ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ. ಈ ಅಸಂಘಟಿತ ಕಾರ್ಮಿಕರು ತಮ್ಮದೇ ಆದ ರೀತಿಯಲ್ಲಿ ದೇಶ ಕಟ್ಟುತ್ತಿರುವವರು. ಅವರನ್ನು ಅವರ ಉದ್ಯೋಗದ ಆಧಾರದ ಮೇಲೆ ಗುರುತಿಸಬಾರದು. ದೇಶದ ಅಭಿವೃದ್ಧಿಯಲ್ಲಿ ಉದ್ಯಮಿಗಳ ಪಾತ್ರ ಎಷ್ಟಿದೆಯೋ ಅದೇ ರೀತಿ ಕಾರ್ಮಿಕರ ಪಾತ್ರವೂ ಇದೆ. ಹೀಗಾಗಿ ಇವರನ್ನು ಗೌರವಯುತವಾಗಿ ನಡೆಸಿಕೊಳ್ಳುವುದು ಮುಖ್ಯ. ಮುಖ್ಯಮಂತ್ರಿಗಳು ಬಿಲ್ಡರ್ಷ್ ಗಳ ಜತೆಗಿನ ಸಭೆ ನಡೆಸಿದ್ದಾರೆ. ಹೀಗಾಗಿ ಈ ಕಾರ್ಮಿಕರನ್ನು ವಾಪಸ್ ಕರೆತರಲು ಯಾವ ರೀತಿ ಪ್ರೋತ್ಸಾಹ ನೀಡಬೇಕು ಎಂಬುದರ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವುದಿದೆ ಎಂದರು.
ಹಿಂದಿನ ಸರಕಾರದ ಬಜೆಟ್ ನಲ್ಲಿ ಘೋಷಣೆಯಾಗಿ, ಟೆಂಡರ್ ನೀಡಿದ್ದ ಯೋಜನೆಗಳನ್ನು ಕೇವಲ ಒಂದು ಪತ್ರದ ಮೂಲಕ ಈ ಸರಕಾರ ತಡೆ ಹಿಡಿದಿದೆ. ಈ ರೀತಿ ಸರ್ಕಾರದ ನಿರ್ಧಾರಗಳನ್ನು ಹೊರಗೆ ಘೋಷಿಸುವ ಬದಲು, ಅಧಿವೇಶನದಲ್ಲೇ ಘೋಷಿಸಲಿ. ಆಗ ಎಲ್ಲವೂ ದಾಖಲೆ ಸೇರುತ್ತವೆ. ಈ ವಿಚಾರದಲ್ಲಿ ನಾವು ತಕರಾರು ಮಾಡುವುದಿಲ್ಲ. ಈಗ ನಾವು ಜನರ ಜೀವ ಹಾಗೂ ಜೀವನವನ್ನು ಕಾಪಾಡಬೇಕು. ಆ ಮೇಲೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಯೋಚಿಸೋಣ. ಈ ವಿಚಾರಗಳು ಅಧಿವೇಶನದಲ್ಲಿ ಸಾರ್ವಜನಿಕರ ಮುಂದೆ ಪಾರದರ್ಷಕವಾಗಿ ಚರ್ಚೆಯಾಗಲಿ ಎಂದು ಹೇಳಿದ್ದಾರೆ.
ಇನ್ನು ಊರುಗಳಿಗೆ ತೆರಳಿರುವ ಕಾರ್ಮಿಕರನ್ನು ವಾಪಸು ಕರೆತಂದು, ಅವರಿಗೆ ಉದ್ಯೋಗ ನೀಡಿ ಜೀವನ ನಡೆಸಲು ಉತ್ತಮ ದಾರಿ ಮಾಡಿಕೊಡಬೇಕು. ಹೀಗಾಗಿ ಅವರಿಗೆ ಪ್ರೋತ್ಸಾಹಧನ ನೀಡಲು, ಬಿಲ್ಡರ್, ಕಾರ್ಖಾನೆ ಮಾಲೀಕರು, ಉದ್ಯಮಿಗಳು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಬ್ಬರಿಗೂ ಅನುಕೂಲವಾಗುವಂತೆ ಯೋಜನೆ ರೂಪಿಸಬೇಕು. ಅದಕ್ಕೆ ಸಲಹೆ ನೀಡಲು ನಾವು ಸಿದ್ಧರಿದ್ದೇವೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.