ಸಂಕಷ್ಟದ ಮಧ್ಯೆ ಮೆಸ್ಕಾಂ ಶಾಕ್‌

2 ತಿಂಗಳ ಬಿಲ್‌ನಲ್ಲಿ ದುಪ್ಪಟ್ಟು ಶುಲ್ಕ; ಗ್ರಾಹಕರ ಅಳಲು

Team Udayavani, May 7, 2020, 6:41 AM IST

ಸಂಕಷ್ಟದ ಮಧ್ಯೆ ಮೆಸ್ಕಾಂ ಶಾಕ್‌

ಸಾಂದರ್ಭಿಕ ಚಿತ್ರ.

ವಿಶೇಷ ವರದಿ- ಉಡುಪಿ: ಲಾಕ್‌ಡೌನ್‌ನಿಂದಾಗಿ ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಇದೀಗ ಮೆಸ್ಕಾಂ ಶಾಕ್‌ ನೀಡಿದ್ದು, ಎರಡು ತಿಂಗಳ ಬಿಲ್‌ ಅನ್ನು ಒಟ್ಟಿಗೆ ಕಳುಹಿಸುವ ಮೂಲಕ ಕಳೆದ ತಿಂಗಳ ಬಿಲ್‌ ಪಾವತಿಸಿದವರಿಗೂ ದುಪ್ಪಟ್ಟು ಶುಲ್ಕ ವಿಧಿಸಿದೆ.

ಎಪ್ರಿಲ್‌ನಲ್ಲಿ ಮಾಪಕ ಓದುವ ಸಿಬಂದಿ ಬಂದಿರಲಿಲ್ಲ. ಆದ್ದರಿಂದ ಎಪ್ರಿಲ್‌ನ ಬಿಲ್‌ ಅನ್ನು ಆನ್‌ಲೈನ್‌ ಮುಖಾಂತರ ಪಾವತಿಸಲು ಅವಕಾಶ ಗ್ರಾಹಕರಿಗೆ ಕಲ್ಪಿಸಲಾಗಿತ್ತು. ಆನ್‌ಲೈನ್‌ ಪಾವತಿ ಸಾಧ್ಯವಾಗದ ಗ್ರಾಹಕರು ಮೊತ್ತವನ್ನು ಬಾಕಿ ಇರಿಸಿಕೊಂಡಿದ್ದರು. ಇದೀಗ ಮೇಯಲ್ಲಿ ಮಾಪಕದ ರೀಡಿಂಗ್‌ ಆಧರಿಸಿ ಎಪ್ರಿಲ್‌ ಮತ್ತು ಮೇ ತಿಂಗಳ ಬಿಲ್ಲನ್ನು ಒಟ್ಟಿಗೆ ಮಾಡಲಾಗಿದೆ. ದುಪ್ಪಟ್ಟು ಬಿಲ್‌ ನೋಡಿ ಗ್ರಾಹಕರು ಕಂಗಾಲಾಗಿದ್ದಾರೆ. ಎರಡು ತಿಂಗಳ ಬಿಲ್‌ ನೀಡಿದ್ದರೂ ಅದರಲ್ಲಿ ಎರಡು ತಿಂಗಳಿಗೆ ಸರಾಸರಿ ಬಳಕೆಗಿಂತ ಹೆಚ್ಚುವರಿ ಶುಲ್ಕ ನಮೂದಾಗಿದೆ ಎಂದು ಕೆಲವು ಗ್ರಾಹಕರು “ಉದಯವಾಣಿ’ಯೊಂದಿಗೆ ಅಳಲು ತೋಡಿಕೊಂಡಿದ್ದಾರೆ.

ಮೆಸ್ಕಾಂ ಅಧಿಕಾರಿಗಳ ಪ್ರಕಾರ, ಗೃಹ ಬಳಕೆಯ ಜಕಾತಿಯಲ್ಲಿ ಸಾಮಾನ್ಯವಾಗಿ ಪ್ರತಿ ತಿಂಗಳಿನ ಮೊದಲ 30 ಯೂನಿಟ್‌ಗಳಿಗೆ 1 ಸ್ಲ್ಯಾಬ್ ದರ ಅನ್ವಯವಾದರೆ, ಮೇ ತಿಂಗಳಿನಲ್ಲಿ ನೀಡಲ್ಪಡುವ ಎರಡು ತಿಂಗಳ ಬಿಲ್‌ನಲ್ಲಿ 30 ಯೂನಿಟ್‌ಗಳ ಬದಲಾಗಿ ಒಟ್ಟು 2×30=60 ಯುನಿಟ್‌ಗಳಿಗೆ ಮೊದಲ ಸ್ಲ್ಯಾಬ್ ದರ ಅನ್ವಯವಾಗುತ್ತದೆ. ಅದರಂತೆಯೇ ಉಳಿದ ರೇಟ್‌ ಸ್ಲ್ಯಾಬ್ ಗಳೂ (2ನೇ ಸ್ಲ್ಯಾಬ್ 70 ಯೂನಿಟ್‌ ಬದಲಾಗಿ 140, 3ನೇ ಸ್ಲ್ಯಾಬ್ 100 ಯೂನಿಟ್‌ ಬದಲಾಗಿ 200) ಎರಡು ತಿಂಗಳಿನ ಲೆಕ್ಕದಲ್ಲಿಯೇ ಅನ್ವಯವಾಗುವುದರಿಂದ ಗ್ರಾಹಕರಿಗೆ ಯಾವುದೇ ತರಹದ ನಷ್ಟವಾಗುವುದಿಲ್ಲ. ಇದೇ ರೀತಿ ಇತರ ಜಕಾತಿಗಳಿಗೂ ಬಿಲ್ಲಿಂಗ್‌ ಮಾಡಲಾಗುತ್ತದೆ.

ಶುಲ್ಕ ಪಾವತಿಸಿದವರಿಗೂ ಹೆಚ್ಚು ಬಿಲ್‌
ಎಪ್ರಿಲ್‌ನಲ್ಲಿ ಬಿಲ್‌ ಪಾವತಿಸಿದವರಿಗೆ ಮೇ ತಿಂಗಳ ಬಿಲ್‌ ನೀಡುವಾಗ ಎಪ್ರಿಲ್‌ನ ಮೊತ್ತವನ್ನು ಕಡಿತಗೊಳಿಸಿ ನೀಡಲಾಗಿದೆ ಎನ್ನುತ್ತಾರೆ ಮೆಸ್ಕಾಂ ಅಧಿಕಾರಿಗಳು. ಆದರೆ ಎಪ್ರಿಲ್‌ನಲ್ಲಿ ಬಿಲ್‌ ಪಾವತಿಸಿದವರಿಗೂ ಮೇಯಲ್ಲಿ ದುಪ್ಪಟ್ಟು ಬಿಲ್‌ ಬಂದಿದೆ. ಈ ಬಗ್ಗೆ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿ, “ನಮ್ಮ ವಿದ್ಯುತ್‌ ಬಳಕೆ ಪ್ರತಿ ತಿಂಗಳಿನಂತೆಯೇ ಇತ್ತು. ಪ್ರತಿ ತಿಂಗಳು 1,800-2,000 ರೂ. ಬಿಲ್‌ ಬರುವ ನಮಗೆ ಈ ಬಾರಿ 7,000 ರೂ. ಬಂದಿದೆ.ಕಳೆದ ತಿಂಗಳು ಬಿಲ್‌ ಪಾವತಿಸಿದ್ದರೂ ಇಷ್ಟು ಬಿಲ್‌ ವಿಧಿಸಿರುವುದು ಯಾಕೆ ಎಂದು ತಿಳಿಯುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೊಂದಲ ಬೇಡ
ಲಾಕ್‌ಡೌನ್‌ ಕಾರಣ ಎಪ್ರಿಲ್‌ನಲ್ಲಿ ಮೆಸ್ಕಾಂ ಗ್ರಾಹಕರಿಗೆ ಸರಾಸರಿ ವಿದ್ಯುತ್‌ ಬಿಲ್ಲನ್ನು ನೀಡಲಾಗಿರುತ್ತದೆ. ಮೇಯಲ್ಲಿ ಮಾಪಕ ಓದುಗರು ಮನೆಮನೆಗೆ ತೆರಳಿ ಆ್ಯಕುcವಲ್‌ ರೀಡಿಂಗ್‌ ದಾಖಲಿಸಿ, ಎಪ್ರಿಲ್‌ ಮತ್ತು ಮೇ ಎರಡೂ ತಿಂಗಳಿಗೆ ಸೇರಿಸಿ ಒಂದೇ ಬಿಲ್‌ ಪ್ರತಿ ನೀಡುತ್ತಾರೆ. ಹಾಗೆ ಬಿಲ್‌ ನೀಡುವಾಗ ಪ್ರತಿ ತಿಂಗಳಿಗೆ ಅನ್ವಯವಾಗುವ ರೇಟ್‌ ಸ್ಲ್ಯಾಬ್ ಗಳನ್ನು ಗಣನೆಗೆ ತೆಗೆದುಕೊಂಡು ಎರಡೂ ತಿಂಗಳಿಗೆ ಅನ್ವಯಿಸಿ ಬಿಲ್ಲಿಂಗ್‌ ಮಾಡಲಾಗುತ್ತದೆ. ಗ್ರಾಹಕರಲ್ಲಿ ಯಾವುದೇ ಗೊಂದಲ ಬೇಡ.
– ಕೃಷ್ಣರಾಜ್‌, ಮೆಸ್ಕಾಂ ಅಧಿಕಾರಿ

ಟಾಪ್ ನ್ಯೂಸ್

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.