![Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ](https://www.udayavani.com/wp-content/uploads/2024/12/gold-fake-415x232.jpg)
ವಿಶಾಖಪಟ್ಟಣ ಅನಿಲ ದುರಂತದ ಫ್ಯಾಕ್ಟರಿ ಮೂಲ ದಕ್ಷಿಣ ಕೊರಿಯಾ; ಹಲವು ಪ್ರಾಣಿ, ಪಕ್ಷಿ ಸಾವು
ದಕ್ಷಿಣ ಕೊರಿಯಾದ ಎಲ್ ಜಿ ಕೆಮಿಕಲ್ ಭಾರತದಲ್ಲಿ ಮಾರುಕಟ್ಟೆಗಾಗಿ ಹುಡುಕಾಟ ನಡೆಸುತ್ತಿತ್ತು.
Team Udayavani, May 7, 2020, 2:44 PM IST
![ವಿಶಾಖಪಟ್ಟಣ ಅನಿಲ ದುರಂತದ ಫ್ಯಾಕ್ಟರಿ ಮೂಲ ದಕ್ಷಿಣ ಕೊರಿಯಾ; ಹಲವು ಪ್ರಾಣಿ, ಪಕ್ಷಿ ಸಾವು](https://www.udayavani.com/wp-content/uploads/2020/05/Gas-Leak-2-620x381.jpg)
Representative Image
ನವದೆಹಲಿ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಿಯಾ ಕೆಮಿಕಲ್ ಪ್ಲ್ಯಾಂಟ್ ನಲ್ಲಿ ಸಂಭವಿಸಿದ ಅನಿಲ ಸೋರಿಕೆ ದುರಂತದಲ್ಲಿ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಇದು ದಕ್ಷಿಣ ಕೊರಿಯಾದ ಎಲ್ ಜಿ ಗ್ರೂಪ್ ನ ಕಂಪನಿಯಾಗಿದ್ದು, ಇದರ ಕೇಂದ್ರ ಕಚೇರಿ ಮುಂಬೈನಲ್ಲಿ ಇದ್ದಿರುವುದಾಗಿ ವರದಿ ತಿಳಿಸಿದೆ.
1961ರಲ್ಲಿ ಹಿಂದೂಸ್ತಾನ್ ಪಾಲಿಮರ್ಸ್ ಕಂಪನಿ ಪಾಲಿಸ್ಟ್ರಿಯೆನ್ ತಯಾರಿಸುತ್ತಿತ್ತು. ಈ ಕಂಪನಿ 1978ರಲ್ಲಿ ಮೆಕ್ ಡೊವೆಲ್ ಮತ್ತು ಯುಬಿ ಗ್ರೂಪ್ ಜತೆ ವಿಲೀನವಾಗಿತ್ತು. ನಂತರ ದಕ್ಷಿಣ ಕೊರಿಯಾದ ಎಲ್ ಜಿ ಕೆಮಿಕಲ್ ಭಾರತದಲ್ಲಿ ಮಾರುಕಟ್ಟೆಗಾಗಿ ಹುಡುಕಾಟ ನಡೆಸುತ್ತಿತ್ತು. ಆಗ ಯುಬಿ ಗ್ರೂಪ್ ಒಡೆತನದಲ್ಲಿದ್ದ ಹಿಂದೂಸ್ತಾನ್ ಪಾಲಿಮರ್ಸ್ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡು 1997ರಲ್ಲಿ ಎಲ್ ಜಿ ಪಾಲಿಮರ್ಸ್ ಇಂಡಿಯಾ ಎಂದು ಹೆಸರನ್ನು ಬದಲಾಯಿಸಿತ್ತು.
ಎಲ್ ಜಿ ಪಾಲಿಮರ್ಸ್ ಪಾಲಿಸ್ಟ್ರೀಯನ್ ಉತ್ಪಾದಿಸುವ ಪ್ರಮುಖ ಕಂಪನಿಯಾಗಿದೆ. ಇದೀಗ ವಿಶಾಖಪಟ್ಟಣಂನ ಆರ್ ಆರ್ ವೆಂಕಟಾಪುರಂನಲ್ಲಿರುವ ಎಲ್ ಜಿ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅನಿಲ ದುರಂತದಿಂದಾಗಿ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸುತ್ತಮುತ್ತಲಿನ ಐದು ಗ್ರಾಮಗಳ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.
ಅನಿಲ ಸೋರಿಕೆಯಿಂದಾಗಿ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 5ಸಾವಿರ ಜನರ ಅಸ್ವಸ್ಥರಾಗಿದ್ದಾರೆ. ಪ್ಲ್ಯಾಂಟ್ ಇದ್ದ ಸುಮಾರು ಮೂರು ಕಿಲೋ ಮೀಟರ್ ದೂರದವರೆಗೆ ಅನಿಲ ಹರಡಿದ್ದು ಜನರ ಮೇಲೆ ಪರಿಣಾಮ ಬೀರಿದೆ ಎಂದು ವರದಿ ತಿಳಿಸಿದೆ. ಹಲವು ಪ್ರಾಣಿ, ಪಕ್ಷಿಗಳು ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
![Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ](https://www.udayavani.com/wp-content/uploads/2024/12/gold-fake-415x232.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
![Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ](https://www.udayavani.com/wp-content/uploads/2024/12/gold-fake-150x84.jpg)
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
![ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ](https://www.udayavani.com/wp-content/uploads/2024/12/sidd-150x98.jpg)
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
![“ಟೋಲ್ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ](https://www.udayavani.com/wp-content/uploads/2024/12/manjunath-bhandari-150x94.jpg)
“ಟೋಲ್ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
![MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು](https://www.udayavani.com/wp-content/uploads/2024/12/kk-150x99.jpg)
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-150x86.jpg)
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.