ಹೂಡಿಕೆ ಆಹ್ವಾನಕ್ಕೆ ಟಾಸ್ಕ್ ಪೋರ್ಸ್ ರಚನೆ

ದೊಡ್ಡ ಕೈಗಾರಿಕೆಗಳಿಗೆ ಆರ್ಥಿಕ ನೆರವು; ಕೇಂದ್ರದಿಂದ ಪ್ಯಾಕೇಜ್‌ ನೀಡಲು ಚಿಂತನೆ: ಶೆಟ್ಟ ರ್‌

Team Udayavani, May 9, 2020, 2:40 PM IST

ಹೂಡಿಕೆ ಆಹ್ವಾನಕ್ಕೆ ಟಾಸ್ಕ್ ಪೋರ್ಸ್ ರಚನೆ

ಮೈಸೂರು ಜಿಪಂ ಸಭಾಂಗಣದಲ್ಲಿ ಕೈಗಾರಿಕೋದ್ಯಮಿಗಳ ಸಭೆ ನಡೆಯಿತು.

ಮೈಸೂರು: ಈಗಾಗಲೇ ಎಲ್ಲೆಡೆ ಕೈಗಾರಿಕೆಗಳು ಪ್ರಾರಂಭವಾಗಿದ್ದು, ಸಣ್ಣ ಕೈಗಾರಿಕೆಗಳಿಗೆ ರಾಜ್ಯ ಸರ್ಕಾರ ವಿದ್ಯುತ್‌ ದರ ಮನ್ನಾ ಮಾಡಿದೆ. ದೊಡ್ಡ ಕೈಗಾರಿಕೆಗಳಿಗೂ ಆರ್ಥಿಕವಾಗಿ ನೆರವು ನೀಡಲಾಗಿದೆ ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿ, ಕೈಗಾರಿಕೋದ್ಯಮಿಗಳಿಗೆ ಸರ್ಕಾರದಿಂದ ಸೌಲಭ್ಯ ಸಿಕ್ಕಿವೆ. ಕೇಂದ್ರದಿಂದ ಸಣ್ಣ ಕೈಗಾರಿಕೆಗಳಿಗೆ ಪ್ಯಾಕೇಜ್‌ ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಕಳೆದ ತಿಂಗಳ ಸಂಬಳ ಮತ್ತಿತರ ಆರ್ಥಿಕ ವಿಚಾರಗಳಿಗೆ ಸಂಬಂಧಪಟ್ಟಂತೆ ಕೇಂದ್ರ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತದೆ. ಮುಂದಿನ  ದಿನಗಳಲ್ಲಿ ಆರ್ಥಿಕ ಕ್ಷೇತ್ರವೂ ಚೇತರಿಕೆ ಕಾಣಲಿದೆ. ಯಾರೂ ಹೆದರುವ ಅವಶ್ಯವಿಲ್ಲ ಎಂದರು.

ವಿದೇಶಿ ಹೂಡಿಕೆಗೆ ಆಹ್ವಾನ: ರಾಜ್ಯದಲ್ಲಿ ಟಾಸ್ಕ್ ಪೋರ್ಸ್  ರಚನೆ ಮಾಡಿದ್ದು, ಬೇರೆ ದೇಶದಿಂದ ಬರುವ ಕೈಗಾರಿಕೋದ್ಯಮಿಗಳನ್ನು ಸ್ವಾಗತಿಸಬೇಕೆಂದು ಸಿಎಂಗೆ ಕೇಳಿಕೊಂಡಿದ್ದೇನೆ. ಇದರಿಂದ ಕರ್ನಾಟದಲ್ಲಿ ಬಂಡವಾಳ ಹೂಡಿಕೆ ಹೆಚ್ಚುವ ನಿರೀಕ್ಷೆ ಇದೆ. ಚೀನಾ ಕಂಪನಿಗಳನ್ನೂ ಸ್ವಾಗತಿಸಲಾಗುತ್ತದೆ. ಹೀಗೆ ಬೇರೆ ಬೇರೆ ದೇಶದಿಂದ ಕಂಪನಿಗಳು ಬಂದು ಇಲ್ಲಿ ಹೂಡಿಕೆ ಮಾಡಿದಾಗ ನಮ್ಮ ಆರ್ಥಿಕತೆ ಚೇತರಿಸಿಕೊಳ್ಳಲಿದೆ ಎಂದು ಹೇಳಿದರು.

ಮುಂಜಾಗ್ರತೆ ಕ್ರಮ ಅನುಸರಿಸಿ: ಕೋವಿಡ್ ತಡೆಗೆ ಕ್ರಮ ಕೈಗೊಳ್ಳಲು ಕಾರ್ಖಾನೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಕಡ್ಡಾಯ. ಹೆಚ್ಚು ಜನರು ಸೇರದೆ ಶೇ.50ರಷ್ಟು ಕಾರ್ಮಿಕರು ಪಾಳಿ ಪ್ರಕಾರ ಕೆಲಸ ಮಾಡಬೇಕು. ಕೆಲಸ ಮಾಡುವಾಗ ಸಾರ್ವಜನಿಕ ಅಂತರ ಇರಬೇಕು. ರಾಸಾಯನಿಕ ಕಾರ್ಖಾನೆಗಳಲ್ಲಿ ಗಮನ ತೆಗೆದುಕೊಂಡು ಸುರಕ್ಷಿತವಾಗಿರುವಂತೆ ಸೂಚಿಸಲಾಗಿದೆ ಎಂದರು.

ಈಗ ಮೈಸೂರಿನಲ್ಲಿ 7 ಮಂದಿ ಮಾತ್ರ ಸೋಂಕಿತರಿದ್ದಾರೆ. ಅವರನ್ನು ಗುಣಪಡಿಸಿ ಮೈಸೂರನ್ನು ಕೊರೊನಾ ಮುಕ್ತ ಮಾಡುವುದು ನಮ್ಮ ಮೊದಲ ಆದ್ಯತೆ. ಅದರ ನಂತರ ಜ್ಯುಬಿಲಿಯಂಟ್‌ ಕಾರ್ಖಾನೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಸಚಿವ ಎಸ್‌ .ಟಿ.ಸೋಮಶೇಖರ್‌, ಸಂಸದ ಪ್ರತಾಪ್‌ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್‌ .ಎ. ರಾಮದಾಸ್‌, ಸಾ.ರಾ.ಮಹೇಶ್‌, ಎಲ್‌ .ನಾಗೇಂದ್ರ, ಬಿ.ಹರ್ಷವರ್ಧನ್‌, ನಿರಂಜನ್‌ ಕುಮಾರ್‌, ವಿಧಾನಪರಿಷತ್‌ ಸದಸ್ಯರಾದ ಸಂದೇಶ್‌ ನಾಗರಾಜ್‌, ಧರ್ಮಸೇನಾ, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಡೀಸಿ ಅಭಿರಾಂ ಜಿ.ಶಂಕರ್‌, ನಗರಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಮೈಸೂರು ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಾಸು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.