
ಬೆಳಗಾವಿಗೆ ರಾಜಸ್ಥಾನದ ಅಜ್ಮೀರ್ ನಂಜು: ಒಂದೇ ದಿನ 22 ಪಾಸಿಟಿವ್ ಪ್ರಕರಣ
Team Udayavani, May 10, 2020, 12:46 PM IST

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯನ್ನು ಶಾಂತವಾಗಿ ಇರಲು ಬಿಡದ ಮಹಾಮಾರಿ ಕೋವಿಡ್-19 ರವಿವಾರ ಮತ್ತೆ ಅಬ್ಬರಿಸಿದ್ದು, ಒಂದೇ ದಿನದಲ್ಲಿ 22 ಜನರಿಗೆ ಪಾಸಿಟಿವ್ ಸೋಂಕು ತಗುಲುವ ಮೂಲಕ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.
ಶನಿವಾರ ಒಂದು ದಿನ ಶಾಂತವಾಗಿದ್ದ ಕೋವಿಡ್-19 ಮಹಾಮಾರಿ ರವಿವಾರ ಮತ್ತೆ ಅಪ್ಪಳಿಸಿದೆ. ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್ ಗೆ ಹೋಗಿ ಬಂದಿದ್ದ ವ್ಯಕ್ತಿಗಳಿಂದ ಜಿಲ್ಲೆಯಲ್ಲಿ ಮಹಾಮಾರಿ ಪಸರಿಸುತ್ತಿರುವ ಬೆನ್ನಲ್ಲೇ ಈಗ ರಾಜಸ್ಥಾನದ ಅಜ್ಮೇರದಿಂದ ಬಂದ ವ್ಯಕ್ತಿಗಳಿಗೆ ಸೋಂಕು ತಗುಲಿದ್ದು, ಇನ್ನಷ್ಟು ಆತಂಕಕಾರಿ ವಿಷಯವಾಗಿದೆ
ಈ ಒಂದೂವರೆ ತಿಂಗಳ ಅವಧಿಯಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಪಾಸಿಟಿವ್ ಸೋಂಕು ತಗುಲಿದ್ದು ಇದೇ ಮೊದಲನೇಯದ್ದಾಗಿದೆ. 22 ಜನರಿಗೆ ಸೋಂಕು ತಗುಲಿದ್ದು, ಈವರೆಗೆ ಒಟ್ಟು 107ಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 22 ಜನರ ಪೈಕಿ 13 ಮಂದಿ ಮಹಿಳೆಯರಿಗೆ ಸೋಂಕು ತಗುಲಿದೆ. ಬೆಳಗಾವಿಯ ಮೂರು ವರ್ಷದ ಕಂದಮ್ಮನಿಗೂ ತಗುಲಿದೆ.
ರಾಜಸ್ಥಾನದ ಅಜ್ಮೇರದಿಂದ ಪ್ರವಾಸ ಮಾಡುತ್ತ ಬಂದ ಈ ಸೋಂಕಿತರ ಸಂಪರ್ಕಕ್ಕೆ ಬಂದವರ ಶೋಧ ನಡೆಸಲು ಆರೋಗ್ಯ ಇಲಾಖೆ ಜಾಲ ಬೀಸಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.