ಪಾಕ್‌: ಕೋವಿಡ್‌-19 ಜತೆಗೆ ಇತರ ಸಾಂಕ್ರಾಮಿಕ ರೋಗ ಹೆಚ್ಚಳ ಸಂಭವ

ಪಾಕ್‌ ಪಾಲಿಗೆ ಕಂಟಕವಾದ ಜಿಪಿಇಐ ಘೋಷಣೆ

Team Udayavani, May 11, 2020, 4:59 PM IST

ಪಾಕ್‌ ಪಾಲಿಗೆ ಕಂಟಕವಾದ ಜಿಪಿಇಐ ಘೋಷಣೆ

ಇಸ್ಲಾಮಾಬಾದ್‌: ವಿಶ್ವದೆಲ್ಲೆಡೆ ಕೋವಿಡ್‌-19 ಮರಣ ತಾಂಡವ ಬಿಡುವಿಲ್ಲದೆ ಮುಂದುವರೆಯುತ್ತಿದೆ. ಈ ಬಿಕ್ಕಟ್ಟಿನಿಂದ ಹೊರಬರಲು ಎಲ್ಲ ರಾಷ್ಟ್ರಗಳು ಶಕ್ತಿಮೀರಿ ಹೋರಾಟ ನಡೆಸುತ್ತಿವೆ. ಆದರೆ ಈ ನಡುವೆಯೇ ಪೊಲೀಯೊ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆಯೋಜಿಸುವ ಸಾಮೂಹಿಕ ಪೋಲಿಯೊ ಲಸಿಕೆ ಅಭಿಯಾನವನ್ನು ರದ್ದು ಮಾಡುವುದಾಗಿ ಅಂತಾರಾಷ್ಟ್ರೀಯ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ. ಈ ನಿರ್ಧಾರದ ಪರಿಣಾಮವಾಗಿ ಈಗಾಗಲೇ ಕೋವಿಡ್‌-19 ಕೆನ್ನಾಲಿಗೆಗೆ ಬಲಿಯಾಗಿರುವ ಪಾಕಿಸ್ಥಾನದ ಆರೋಗ್ಯ ವ್ಯವಸ್ಥೆ ಮತ್ತಷ್ಟು ಹದಗೆಡಲಿದ್ದು, ಪೋಲಿಯೊ ಮತ್ತು ಇತರ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಳವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಜಿನೀವಾದಲ್ಲಿರುವ ಜಾಗತಿಕ ಪೋಲಿಯೊ ನಿರ್ಮೂಲನಾ ಸಂಸ್ಥೆ (ಜಿಪಿಇಐ) ಕೋವಿಡ್‌-19 ಹರಡುವುದನ್ನು ತಡೆಯುವ ಸಲುವಾಗಿ ವಿಶ್ವಾದ್ಯಂತ ಪೋಲಿಯೊ ವ್ಯಾಕ್ಸಿನೇಷನ್‌ ಅಭಿಯಾನವನ್ನು ಸ್ಥಗಿತಗೊಳಿಸಲು ಶಿಫಾರಸು ಮಾಡಿದ್ದು, ಈ ನಿರ್ಧಾರ ಕುರಿತು ಇದುವರೆಗೂ ಯಾವುದೇ ವಿರೋಧ ವ್ಯಕ್ತವಾಗಿಲ್ಲ.

ಜಿಪಿಇಐ ಎಲ್ಲ ದೇಶಗಳಲ್ಲಿ ಸಾಮೂಹಿಕ ಲಸಿಕೆ ಅಭಿಯಾನದಂತಹ ಕಾರ್ಯಕ್ರಮಗಳನ್ನು 2020ರ ಮಧ್ಯಾಂತರದ ವರೆಗೆ ಮುಂದೂಡಬೇಕೆಂದು ಕರೆ ನೀಡಿದೆ. ಇದೀಗ ವಿಶ್ವಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಘೆಬ್ರೆಯೆಸಸ್‌, ಯುಎಸ್‌ ಸೆಂಟರ್‌ ಫಾರ್‌ಡಿಸೀಸ್‌ ಕಂಟ್ರೋಲ್‌ ಆ್ಯಂಡ್‌ ಪ್ರಿವೆನ್‌ಷನ್‌ (ಸಿಡಿಸಿ) ಮತ್ತು ಜಾಗತಿಕ ಆರೋಗ್ಯ ಕೇಂದ್ರಗಳ ಸಹಭಾಗಿತ್ವದಲ್ಲಿ ಜಿಪಿಇಐ ಮನವಿಗೆ ಅನುಮತಿ ನೀಡಿದ್ದಾರೆ.

ಜಿಪಿಇಐ ರಾಷ್ಟ್ರೀಯ ಸರಕಾರಗಳ ನೇತೃತ್ವದಲ್ಲಿ ಸರಕಾರಿ -ಖಾಸಗಿ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತಿದೆ.ವಿಶ್ವ ಆರೋಗ್ಯ ಸಂಸ್ಥೆ (WHO), ರೋಟರಿ ಇಂಟರ್‌ನ್ಯಾಷನಲ್‌, ಸಿಡಿಸಿ, ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್‌), ಬಿಲ್‌ ಮತ್ತು ಮೆಲಿಂಡಾ ಗೇಟ್ಸ್‌ ಫೌಂಡೇಶನ್‌ ಮತ್ತು ಲಸಿಕೆ ಕೇಂದ್ರಗಳೊಂದಿಗೆ ಒಪ್ಪಂದ ಮಾಡಿಕೊಂಡು ಕಾರ್ಯಾಚರಿಸುತ್ತಿದೆ.

ಈ ಕುರಿತು ಜಿಪಿಇಐ ಮುಖ್ಯಸ್ಥ ಮೈಕೆಲ್‌ ಜಾಫ್ರಾನ್‌ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, “ನಾವು ಎರಡು ಭಯಾನಕ ಸನ್ನಿವೇಶಗಳ ನಡುವೆ ಸಿಕ್ಕಿಬಿದ್ದಿದ್ದೇವೆ’. ಆದರೆ ಇದರ ಹೊರತಾಗಿ ನಮಗೆ ಬೇರೆ ಯಾವುದೇ ದಾರಿ ಇಲ್ಲ. ಅಭಿಯಾನದಿಂದಾಗಿ ಕೋವಿಡ್‌-19 ಪ್ರಕರಣಗಳು ಮತ್ತಷ್ಟು ಹೆಚ್ಚಾಯಿತು ಎಂಬುದನ್ನು ಕೇಳಲು ನಾವು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಪಾಕ್‌ಗೆ ಕಂಟಕ
ಆದರೆ ಈ ಘೋಷಣೆ ಜಾರಿಯಿಂದ ಪಾಕ್‌ನ ಆರೋಗ್ಯ ವ್ಯವಸ್ಥೆ ಮತ್ತಷ್ಟು ದುರ್ಬಲವಾಗಲಿದ್ದು, ಪೋಲಿಯೊ, ದಡಾರ ಸೋಂಕು ಕಾಯಿಲೆಗಳು ಮೊದಲೇ ಹದೆಗೆಟ್ಟಿರುವ ದೇಶದ ಆರೋಗ್ಯ ವ್ಯವಸ್ಥೆಗೆ ಕಂಟಕವಾಗಲಿದೆ ಎಂದು ಪಾಕಿಸ್ಥಾನ ವೈದ್ಯಕೀಯ ಸಂಘದ ಪ್ರಧಾನ ಕಾರ್ಯದರ್ಶಿ ಖೈಸರ್‌ ಸಜ್ಜದ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕೋವಿಡ್‌-19ನಿಂದಾಗಿ ಸಾಮರ್ಥ್ಯಕ್ಕಿಂತ ಹೆಚ್ಚಾಗಿಯೇ ದೇಶದ ಆರೋಗ್ಯ ಕ್ಷೇತ್ರದ ಮೇಲೆ ಹೊರೆಯಾಗಿದ್ದು, ಅಗತ್ಯ ಚಿಕಿತ್ಸಾ ಉಪಕರಣಗಳಿಲ್ಲದೆ ಪರದಾಡುತ್ತಿದ್ದೇವೆ. ಪರಿಸ್ಥಿತಿ ಹೀಗಿರುವಾಗ ಪೋಲಿಯೊ ಮತ್ತಿತ್ತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಮೂಹಿಕ ಲಸಿಕೆ ಅಭಿಯಾನಗಳು ಅತ್ಯಗತ್ಯ ಎಂದು ಸಜ್ಜದ್‌ ಹೇಳಿದ್ದಾರೆ.

ಜಿಡಿಪಿಯ ಶೇ.1ಕ್ಕಿಂತಲೂ ಕಡಿಮೆ ಮೊತ್ತವನ್ನು ಆರೋಗ್ಯ ಕ್ಷೇತ್ರದ ವೆಚ್ಚಕ್ಕೆ ಮೀಸಲಿಡುವ ಪಾಕ್‌ ಈ ನಿರ್ಧಾರ ಕೇಳಿ ಆತಂಕಗೊಂಡಿದ್ದು, ಮುಂಬರುವ ದಿನಗಳಲ್ಲಿ ಕೋವಿಡ್‌-19, ಪೋಲಿಯೊ ಮತ್ತು ದಡಾರದಂತಹ ಸಾಂಕ್ರಾಮಿಕ ರೋಗಗಳು ಸೃಷ್ಟಿಸುವ ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಧಿಕ ಮಟ್ಟದಲ್ಲಿಯೇ ಆರ್ಥಿಕ ನೆರವು ಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದೆ.

ಎಪ್ರಿಲ್‌ ತಿಂಗಳಲ್ಲಿ 4 ಕೋಟಿ ಮಕ್ಕಳು ಪೋಲಿಯೊ ಲಸಿಕೆಯಿಂದ ವಂಚಿತರಾಗಿದ್ದು, ಈಗಾಗಲೇ ದೇಶದಲ್ಲಿ ಪೋಲಿಯೊ ಸಂಬಂಧಿಸಿದ 47 ಪ್ರಕರಣಗಳು ದಾಖಲಾಗಿವೆ.

ಪಾಕ್‌ನಲ್ಲಿ ಕೋವಿಡ್‌-19 ರಣಕೇಕೆ ಹೆಚ್ಚಾಗುತ್ತಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 30 ಸಾವಿರದ ಗಡಿ ದಾಟಿದೆ. ಒಟ್ಟಾರೆ ಮರಣ ಸಂಖ್ಯೆ 659ಕ್ಕೆ ತಲುಪಿದೆ ಎಂದು ಪಾಕ್‌ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.