ಕರ್ನಾಟಕದ ವಲಸೆ ಕಾರ್ಮಿಕರ ಪಾಲಿಗೆ ‘ರಿಯಲ್ ಹೀರೋ’ ಆಗಿ ಮೂಡಿಬಂದ ನಟ ಸೋನೂ ಸೂದ್


Team Udayavani, May 11, 2020, 6:07 PM IST

ಕರ್ನಾಟಕದ ವಲಸೆ ಕಾರ್ಮಿಕರ ಪಾಲಿಗೆ ‘ರಿಯಲ್ ಹೀರೋ’ ಆಗಿ ಮೂಡಿಬಂದ ನಟ ಸೋನೂ ಸೂದ್

ಮುಂಬಯಿ: ಅರುಂಧತಿ ಚಿತ್ರದ ಮೂಲಕ ದಕ್ಷಿಣ ಭಾರತ ಚಿತ್ರರಂಗದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ನಟ ಸೋನೂ ಸೂದ್ ಅವರು ಕೋವಿಡ್ ಸಂಬಂಧಿತ ಈ ಲಾಕ್ ಡೌನ್ ಅವಧಿಯಲ್ಲಿ ಮಾನವೀಯ ಕಾರ್ಯದ ಮೂಲಕ ತಾವು ‘ರಿಯಲ್ ಹೀರೋ’ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಮಹಾರಾಷ್ಟ್ರದ ಥಾಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಕರ್ನಾಟಕದ ವಲಸೆ ಕಾರ್ಮಿಕರಿಗೆ ತಾವೇ ಖುದ್ದಾಗಿ ಬಸ್ ವ್ಯವಸ್ಥೆಯನ್ನು ಮಾಡಿಕೊಟ್ಟು ಅವರನ್ನು ಅವರ ಮನೆಗಳಿಗೆ ಕಳುಹಿಸಿಕೊಡುವ ಕಾರ್ಯವನ್ನು ಮಾಡಿದ್ದಾರೆ. ಸೋನೂ ಸೂದ್ ಅವರ ಈ ಮಾನವೀಯ ಕಳಕಳಿಗೆ ಇದೀಗ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

ಲಾಕ್ ಡೌನ್ ಅವಧಿಯಲ್ಲಿ ಅಂತರ ರಾಜ್ಯ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದ ಕಾರಣ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಕುಟುಂಬ ಸಹಿತವಾಗಿ ಕಾಲ್ನಡಿಗೆಯಲ್ಲೇ ತಮ್ಮ ತಮ್ಮ ಊರುಗಳಿಗೆ ಪ್ರಯಾಣಿಸುತ್ತಿರುವುದನ್ನು ಕಂಡು ನಟ ಸೋನೂ ಸೂದ್ ಅವರು ಕಳವಳಗೊಂಡಿದ್ದಾರೆ. ಈ ಘಟನೆಯೇ ಸೋನೂ ಅವರಿಗೆ ಈ ಮಾನವೀಯ ಕಾರ್ಯ ಕೈಗೊಳ್ಳಲು ಪ್ರೇರಣೆಯಾಯಿತಂತೆ.

ಇಂದು ಥಾಣೆಯಿಂದ ಹೊರಟ 10 ಬಸ್ಸುಗಳಲ್ಲಿ 350 ವಲಸೆ ಕಾರ್ಮಿಕರು ಗುಲ್ಬರ್ಗಾಕ್ಕೆ ಪ್ರಯಾಣ ಬೆಳೆಸಿದರು. ಈ ಸಂಧರ್ಭದಲ್ಲಿ ಸ್ವತಃ ಸೋನೂ ಸೂದ್ ಅವರೇ ಬಸ್ಸು ನಿಲ್ದಾಣಕ್ಕೆ ಬಂದು ಕರ್ನಾಟಕದ ವಲಸೆ ಕಾರ್ಮಿಕರಿಗೆ ಬೈ ಬೈ ಹೇಳಿದರು.

ಥಾಣೆಯಿಂದ ವಲಸೆ ಕಾರ್ಮಿಕರನ್ನು ಕರ್ನಾಟಕಕ್ಕೆ ಕಳುಹಿಸಿಕೊಡುವ ನಿಟ್ಟಿನಲ್ಲಿ ನಟ ಸೋನೂ ಸೂದ್ ಅವರು ಮಹಾರಾಷ್ಟ್ರ ಹಾಗೂ ಕರ್ನಾಟಕ ಸರಕಾರಗಳಿಂದ ನಿರ್ಧಿಷ್ಟ ಒಪ್ಪಿಗೆಯನ್ನು ಪಡೆದುಕೊಂಡಿದ್ದರು.

‘ಕೋವಿಡ್ ಮಹಾಮಾರಿಗೆ ಜಗತ್ತೇ ತತ್ತರಿಸುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಪ್ರತೀಯೊಬ್ಬರೂ ತಮ್ಮ ತಮ್ಮ ಕುಟುಂಬ ಸದಸ್ಯರ ಜೊತೆಯಲ್ಲಿ ಇರಲು ಬಯಸುತ್ತಾರೆ ಎಂಬುದು ನನ್ನ ಬಲವಾದ ನಂಬಿಕೆಯಾಗಿದೆ. ಹಾಗಾಗಿ ಕರ್ನಾಟಕದ ಈ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ನಿಟ್ಟಿನಲ್ಲಿ ಎರಡೂ ರಾಜ್ಯ ಸರಕಾರಗಳ ಒಪ್ಪಿಗೆಯನ್ನು ಪಡೆದುಕೊಂಡು ಈ ಬಸ್ಸುಗಳ ವ್ಯವಸ್ಥೆಯನ್ನು ಮಾಡಿದ್ದೇನೆ’ ಎಂದು ನಟ ಸೋನೂ ಸೂದ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಈ ಹಿಂದೆಯೂ ಸೋನೂ ಸೂದ್ ಅವರು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ಕಳುಹಿಸಿಕೊಡುವಂತೆ ಸರಕಾರಗಳನ್ನು ಒತ್ತಾಯಿಸಿದ್ದರು. ಇದರ ಹೊರತಾಗಿಯೂ ನಟ ಸೂದ್ ಅವರು ಪಂಜಾಬ್ ನ ವಿವಿಧ ಆಸ್ಪತ್ರೆಗಳ ವೈದ್ಯರಿಗೆ 1500 ವೈಯಕ್ತಿಕ ಸುರಕ್ಷಾ ಕಿಟ್ ಗಳನ್ನು ವಿತರಿಸಿದ್ದರು.

ಮತ್ತು ರಂಝಾನ್ ತಿಂಗಳಿನಲ್ಲಿ ಮುಂಬಯಿ ನಗರದಲ್ಲಿರುವ ವಲಸಿಗರಿಗೆ ಪ್ರತೀದಿನ 25 ಸಾವಿರ ಆಹಾ ಪೊಟ್ಟಣಗಳನ್ನು ವಿತರಿಸುವ ಮೂಲಕವೂ ಈ ನಟ ಲಾಕ್ ಡೌನ್ ಅವಧಿಯಲ್ಲಿ ತನ್ನ ಮಾನವೀಯ ಕಾರ್ಯವನ್ನು ಮಾಡಿದ್ದು ಈ ಹಿಂದೆ ವರದಿಯಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.