ಇಂದಿನಿಂದ ವಿಶೇಷ ರೈಲು ಸಂಚಾರ: ಅಂಗಡಿ
Team Udayavani, May 12, 2020, 4:59 AM IST
ಬೆಳಗಾವಿ: ದೇಶದಲ್ಲಿ ನಾಳೆ ಮೇ 12 ರಿಂದ ವಿಶೇಷ ರೈಲು ಸಂಚಾರ ಆರಂಭವಾಗಲಿದ್ದು ದೇಶದ ವಿವಿಧ ಕಡೆಗಳಿಗೆ 15 ರೈಲುಗಳು ಸಂಚಾರ ಆರಂಭಿಸಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲಾಕ್ ಡೌನ್ ಬಳಿಕ ವಲಸೆ ಹೋಗಿರುವ ಜನರ ಹಿತದೃಷ್ಟಿಯಿಂದ ರೈಲ್ವೆ ಸೇವೆ ಆರಂಭಿಸಲಾಗುತ್ತಿದೆ. ಆನ್ ಲೈನ್ ಮೂಲಕವೇ ಐಆರ್ಸಿಟಿಸಿಯಲ್ಲಿ ಬುಕಿಂಗ್ ಮಾಡಬೇಕು ಎಂದರು. ಕೋವಿಡ್ ನಿಯಂತ್ರಣ ಹಾಗೂ ಸುರಕ್ಷತಾ ಕ್ರಮ ಅನುಸರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಜಧಾನಿ ದೆಹಲಿಯಿಂದ 15 ರಾಜ್ಯಗಳಿಗೆ ರೈಲು ಸಂಚಾರ ನಡೆಸಲಿವೆ. ಪ್ರಯಾಣ ಬೆಳೆಸಿದವರು ತಪಾಸಣೆಗೆ ಒಳಗಾಗಬೇಕು. ಈ ರೈಲುಗಳಲ್ಲಿ ಸಾಮಾನ್ಯ ಬೋಗಿ ಇರುವುದಿಲ್ಲ ಎಂದರು.
ಸ್ಥಳೀಯ ರೈಲು ಸಂಚಾರವನ್ನು ಆಯಾ ರಾಜ್ಯ ಸರಕಾರಗಳು ನಿರ್ಧಾರ ಮಾಡುತ್ತವೆ. ಇದಲ್ಲದೆ ಮೃಟ್ರೋ ರೈಲು ಸಂಚಾರ ಸಹ ಆಯಾ ರಾಜ್ಯ ಸರಕಾರಗಳ ವ್ಯಾಪ್ತಿಗೆ ಬರುತ್ತಿದ್ದು ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಸರಕಾರಗಳು ಮೆಟ್ರೋ ರೈಲು ಸಂಚಾರ ಆರಂಭ ಮಾಡುತ್ತವೆ ಎಂದರು. ಲಾಕ್ಡೌನ್ ಸಡಿಲಿಕೆಯಿಂದ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ. ಹಸಿರು ವಲಯಗಳಲ್ಲೂ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. ಇನ್ನೊಂದು ಕಡೆ ಈಗ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಮತ್ತೆ ಕೆಂಪು ವಲಯಕ್ಕೆ ಬದಲಾಗುವದ ಅತಂಕವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.