ಕಲಬುರಗಿಯಲ್ಲಿ ಮತ್ತೊಬ್ಬ ಬಾಲಕನಿಗೆ ಕೋವಿಡ್-19 ಸೋಂಕು
Team Udayavani, May 12, 2020, 1:23 PM IST
ಕಲಬುರಗಿ: ಜಿಲ್ಲೆಯಲ್ಲಿ ಮಂಗಳವಾರ ಮತ್ತೊಬ್ಬರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಮೃತ ಬಟ್ಟೆ ವ್ಯಾಪಾರಿ ಸೋಂಕಿನ ‘ಚೈನ್’ ಗೆ ಒಳಪಟ್ಟ 14 ವರ್ಷದ ಬಾಲಕನಿಗೆ ಮಹಾಮಾರಿ ರೋಗ ದೃಢಪಟ್ಟಿದೆ.
ದೆಹಲಿಯ ಮಸೀದಿಯಿಂದ ಮರಳಿದವರ ಸಂಪರ್ಕಕ್ಕೆ ಬಂದಿದ್ದ ನಗರದ ಮೋಮಿನ್ ಪುರ ನಿವಾಸಿ, 55 ವರ್ಷದ ಬಟ್ಟೆ ವ್ಯಾಪಾರಿ (ಪಿ-205) ಕೋವಿಡ್-19 ಸೋಂಕಿನಿಂದ ಏ.13ರಂದು ಮೃತಪಟ್ಟಿದ್ದರು. ಈತನ ಸಂಪರ್ಕಕ್ಕೆ ಬಂದ 19 ವರ್ಷದ ಯುವಕ (ಪಿ-393) ನಿಗೆ ಸೋಂಕು ಹರಡಿತ್ತು.
ಯುವಕನಿಂದ 26 ವರ್ಷದ ಮಹಿಳೆ (ಪಿ-425) ಸೋಂಕು ವ್ಯಾಪಿಸಿತ್ತು. ಈ ಮಹಿಳೆಯಿಂದ 40 ವರ್ಷದ ಮತ್ತೋರ್ವ ಮಹಿಳೆ (ಪಿ-529) ಗೆ ಮಹಾಮಾರಿ ಪಸರಿಸಿತ್ತು. ಈಗ ಈ ಮಹಿಳೆಯಿಂದ 14 ವರ್ಷದ ಬಾಲಕ (ಪಿ-866) ನಿಗೆ ಕೋವಿಡ್-19 ವಕ್ಕರಿಸಿದೆ.
ಈ ಮೂಲಕ ಜಿಲ್ಲೆಯ ಒಟ್ಟು ಕೋವಿಡ್ -19 ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಇದರಲ್ಲಿ 44 ಜನ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 6 ಜನರು ಮೃತಪಟ್ಟಿದ್ದು, ಉಳಿದಂತೆ 23 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಇಂದು 42 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದಿರಿಂದ ರಾಜ್ಯದಲ್ಲಿ ಒಟ್ಟು 904 ಪ್ರಕರಣಗಳು ದೃಢವಾಗಿದೆ. ಇದುವರೆಗೆ ಸೋಂಕಿನ ಕಾರಣದಿಂದ 31 ಜನರು ಸಾವನ್ನಪ್ಪಿದ್ದು, 426 ಜನರು ಗುಣಮುಖರಾಗಿದ್ದಾರೆ. ಓರ್ವ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.