ನಷ್ಟ ಅನುಭವಿಸಿದ ಪುಷ್ಪ ಬೆಳೆಗಾರರಿಗೆ ಪರಿಹಾರ

ಹೂವು ಬೆಳೆದ 249 ರೈತರಿಗೆ ನಷ್ಟ ಪ್ರತಿ ಹೆಕ್ಟೇರ್‌ಗೆ ಸರ್ಕಾರದಿಂದ 25 ಸಾವಿರ ರೂ. ಪರಿಹಾರ ಘೋಷಣೆ

Team Udayavani, May 14, 2020, 5:03 PM IST

14-May-23

ವಿಜಯಪುರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಡಿಸಿ ವೈ.ಎಸ್‌. ಪಾಟೀಲ ತೋಟಗಾರಿಕೆ ಅಧಿಕಾರಿಗಳ ಸಭೆ ನಡೆಸಿದರು.

ವಿಜಯಪುರ: ಕೋವಿಡ್‌-19 ಲಾಕ್‌ಡೌನ್‌ನಿಂದಾಗಿ ಜಿಲ್ಲೆಯಲ್ಲಿ ಅಲ್ಪಾವಧಿಯ ವಿವಿಧ ಪುಷ್ಟ ಬೆಳೆ ಬೆಳೆದು ನಷ್ಟ ಅನುಭವಿಸಿದ ಪುಷ್ಟ ಬೆಳೆಗಾರರಿಗೆ ರಾಜ್ಯ ಸರ್ಕಾರದ ನಿಯಮದಂತೆ ಹೆಕ್ಟೇರ್‌ಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಆದರೆ ನಷ್ಟ ಅನುಭವಿಸಿದ ಅರ್ಹ ಪುಷ್ಪ ಬೆಳೆಗಾರರನ್ನು ಗುರುತಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೂವಿನ ಬೆಳೆಗಾರರು ಮಾರುಕಟ್ಟೆ ಸಿಗದೇ ನಷ್ಟ ಅನುಭವಿಸಿದ್ದಾರೆ. ಚಂಡು ಹೂ, ಸೇವಂತಿಗೆ, ಆಸ್ಟರ್‌, ಕನಕಾಂಬರ, ಗುಲಾಬಿ, ಮಲ್ಲಿಗೆ, ಕಾಕಡ, ಬರ್ಡ್‌ ಆಫ್‌ ಪ್ಯಾರಡೈಸ್‌ ಸೇರಿದಂತೆ ವಿವಿಧ ಹೂ ಬೆಳೆಗಾರರು ತೀವ್ರ ನಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಷ್ಟ ಅನುಭವಿಸಿದ ಪುಷ್ಟ ಬೆಳಗಾರರಿಗೆ ಪ್ರತಿ ಹೆಕ್ಟೇರ್‌ಗೆ 25 ಸಾವಿರ ರೂ.ಗಳಂತೆ ಪರಿಹಾರ ಘೋಷಿಸಿದೆ. ಹೀಗಾಗಿ ಪುಷ್ಟ ಕೃಷಿ ಮಾಡಿ ನಷ್ಟ ಅನುಭವಿಸಿದ ಅರ್ಹ ಫಲಾನುಭವಿಗಳಿಗೆ ಪರಿಹಾರ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಕೇಂದ್ರ-ರಾಜ್ಯ ಸರ್ಕಾರಗಳು ಲಾಕ್‌ಡೌನ್‌ ಘೋಷಿಸುವ ಮುನ್ನ ಮಾ.13ರಿಂದ ಜಿಲ್ಲಾದ್ಯಂತ ಲಾಕ್‌ಡೌನ್‌ ಕೊರೋನಾ ಭಯದ ಹಿನ್ನೆಲೆಯಲ್ಲಿ ಪರಿಣಾಮಕಾರಿ ಜಾರಿಗೊಳಿಸಲಾಗಿತ್ತು. ಕಾರಣ ಮಾ.13 ರಿಂದ ಮೇ 8 ಅಥವಾ 17ರ ಅವಧಿಯನ್ನು ಪರಿಗಣಿಸಿ ನಷ್ಟ ಅನುಭವಿಸಿದ ರೈತರ ಪಟ್ಟಿ ಸಿದ್ಧಪಡಿಸಿ, ಅರ್ಹರಿಗೆ ಪರಿಹಾರ ದೊರಕುವಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ಹೂ ಬೆಳೆದು ನಷ್ಟ ಅನುಭವಿಸಿದ ರೈತರ ಸಮಸ್ಯೆ ಕುಂದುಕೊರತೆ ಅರ್ಜಿ ವಿಲೇವಾರಿ, ಸೂಕ್ತ ಜಾಗೃತಿ, ಅಧಿಕೃತ ಬೆಳೆ ಸಮೀಕ್ಷೆ ಆಧಾರದ ಮೇಲೆ ಪಟ್ಟಿ ತಯಾರಿಸಬೇಕು. ರೈತರ ಜಮೀನು ಮತ್ತು ಅವರ ದಾಖಲೆಗಳ ಸಮಗ್ರ ಪರಿಶೀಲನೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು. ಜಿಪಂ ಸಿಇಒ ಗೋವಿಂದರೆಡ್ಡಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ ಇನಾಮದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪುಷ್ಪ ಬೆಳೆಗಾರರ ಜಮೀನಿನಲ್ಲಿರುವ ವಿವಿಧ ಬೆಳೆ ಹಾನಿಯಾಗಿ ನಷ್ಟದ ಕುರಿತು ನೈಜ ಸಮೀಕ್ಷೆ ನಡೆಸಬೇಕು. ಲಭ್ಯ ಪ್ರಾಥಮಿಕ ವರದಿ ಪ್ರಕಾರ ಜಿಲ್ಲೆಯಲ್ಲಿ ಸುಮಾರು 249 ಹೂವು ಬೆಳೆಗಾರರು ತೀವ್ರ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ಪುಷ್ಟ ಬೆಳೆಗಾರ ರೈತರ ಪಟ್ಟಿ ತಯಾರಿಸಿ, ಆಯಾ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಪಂ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ಪ್ರಕಟಿತ ಈ ಪಟ್ಟಿಯಿಂದ ನಷ್ಟಕ್ಕೀಡಾದ ಪುಷ್ಟ ಬೆಳಗಾರರ ಹೆಸರು ಸಮೀಕ್ಷೆ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದಲ್ಲಿ ರೈತರು ಆಯಾ ತಾಲೂಕು ತೋಟಗಾರಿಕೆ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ಬಳಿಕ ಅಧಿಕಾರಿಗಳು ಕೂಡ ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು.
ವೈ.ಎಸ್‌. ಪಾಟೀಲ,
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.