ಬಿಡಿಎ ಕಾಯ್ದೆ ತಿದ್ದುಪಡಿಗಾಗಿ ಸುಗ್ರೀವಾಜ್ಞೆ


Team Udayavani, May 15, 2020, 5:37 AM IST

bda-kayde

ಬೆಂಗಳೂರು: ಬಿಡಿಎ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಮನೆ ನಿರ್ಮಾಣ ಸಕ್ರಮಗೊಳಿಸುವ ಸಲುವಾಗಿ ಬಿಡಿಎ ಕಾಯ್ದೆ ತಿದ್ದುಪಡಿ ಹಾಗೂ ಬಿಲ್ಡರ್‌ಗಳ ನೆರವಿಗಾಗಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ  ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ಬಿಡಿಎ ವ್ಯಾಪ್ತಿಯ ಅಕ್ರಮ ಸಕ್ರಮಕ್ಕೆ ಸರ್ಕಾರ ತೀರ್ಮಾನಿಸಿದ್ದು, ಅದಕ್ಕಾಗಿ ಕಾಯ್ದೆಗೆ  ತಿದ್ದು ಪಡಿ ಅವಶ್ಯಕವಾಗಿತ್ತು.

ಅದೇ ರೀತಿ ಬಿಲ್ಡರ್‌ಗಳು ಪೂರ್ಣ ಪ್ರಮಾಣದಲ್ಲಿ ಮುಗಿಸದ ಲೇಔಟ್‌  ಗಳಲ್ಲಿನ ನಿವೇಶನ ಮಾರಾಟ ಮಾಡಲು ಸಾಧ್ಯವಾಗದೇ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿರುವುದಾಗಿ ಮನವಿ ಸಲ್ಲಿಸಿ ದ್ದರಿಂದ  ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಬಿಡಿಎ ಭೂ ಸ್ವಾಧೀನ ಪಡಿಸಿಕೊಂಡ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ (12ವರ್ಷಗಳ ಹಿಂದೆ ನಿರ್ಮಿಸಿರುವ ಷರತ್ತು) ವಾಸದ ಮನೆ  ಸಕ್ರಮಗೊಳಿಸಲು ಅವಕಾಶ ಸಿಗಲಿದೆ.  0x30, 30×40, 40×60 ಹಾಗೂ 50×80 ಅಳತೆಯ ನಿವೇಶಗಳಲ್ಲಿ ಕಟ್ಟಿರುವ  ಮನೆಗಳಿಗಷ್ಟೇ ಇದು ಅನ್ವಯ.

ಖಾಲಿ ನಿವೇಶನಕ್ಕೆ ಅನ್ವಯವಾಗದು ಎಂದು ಕಾನೂನು ಮತ್ತು ಸಂಸದೀಯ  ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ, 20×30 ಅಳತೆಯ ನಿವೇಶನಕ್ಕೆ ಮಾರ್ಗಸೂಚಿ ದರದ ಶೇ.10, 30×40 ನಿವೇಶನಕ್ಕೆ ಮಾರ್ಗಸೂಚಿ ದರದ ಶೇ.20, 40×60 ಹಾಗೂ 50×80 ಅಳತೆಯ ನಿವೇಶನಕ್ಕೆ ಮಾರ್ಗಸೂಚಿ  ದರದ ಶೇ.40 ರಷ್ಟು ಶುಲ್ಕ ಪಡೆದು ಸಕ್ರಮಗೊಳಿಸಲಾಗುವುದು. ನಗರದಲ್ಲಿ ಒಟ್ಟು 75 ಸಾವಿರ ನಿವೇಶನ  ಗಳಲ್ಲಿ ಅಕ್ರಮ ಮನೆ ನಿರ್ಮಾಣವಾಗಿದೆ ಎಂಬ ಅಂದಾಜು ಇದ್ದು ಸಕ್ರಮಗೊಳಿಸುವು  ದರಿಂದ ಸುಮಾರು 25 ಸಾವಿರ ಕೋಟಿ. ವರೆಗೆ ಸಂಗ್ರಹದ ಗುರಿ ಹೊಂದಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಇರುವ ಪ್ರಕರಣವನ್ನೂ ಇತ್ಯರ್ಥಗೊಳಿಸ  ಬೇಕಾಗಿದೆ ಎಂದು ಹೇಳಿದರು.

ಲೇಔಟ್‌ಗಳಲ್ಲಿ ಅನುಮತಿ: ಖಾಸಗಿ ಲೇ ಔಟ್‌ನಲ್ಲಿ ಶೇ. 40ರಷ್ಟು ಭಾಗದಲ್ಲಿ ಮನೆ ಅಥವಾ ನಿವೇಶನ ಸಕಲ ಮೂಲಸೌಕರ್ಯ  ದೊಂದಿಗೆ ಪೂರ್ಣಗೊಳಿಸಿದ್ದರೆ ಅಲ್ಲಿ ಮಾತ್ರ ಮಾರಾಟಕ್ಕೆ ಆನುಮತಿ, ಎರಡನೇ ಹಂತದಲ್ಲಿ ಶೇ.30  ಹಾಗೂ ಮೂರನೇ ಹಂತದಲ್ಲಿ ಉಳಿದ ಕಡೆ ಮಾರಾಟಕ್ಕೆ ಅನುಮತಿ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಆದರೆ, ಒಟ್ಟಾರೆ ಲೇ ಔಟ್‌ನ ವ್ಯಾಪ್ತಿಗೆ ಇದು ಅನ್ವಯ ಆಗದು. ಕೇವಲ ಅಭಿವೃದಿಟಛಿ ಸೌಕರ್ಯಗಳೊಂದಿಗೆ  ಪೂರ್ಣಗೊಳಿಸಿದ ಭಾಗಕ್ಕೆ ಮಾತ್ರ ಎಂದು ಹೇಳಿದರು.

ಬಿಡಿಎ ಕಾಯ್ದೆ 38 ಸಿ ಈಗಾಗಲೇ ಇದ್ದು, ತಿದ್ದುಪಡಿಯಲ್ಲಿ 38-ಡಿ ಮಾಡಲಾಗಿದೆ. ಇದರಿಂದಾಗಿ ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಅವಕಾಶ ಕಲ್ಪಿಸಿದಂತಾಗಿದೆ.
-ಜೆ.ಸಿ. ಮಾದುಸ್ವಾಮಿ, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.