ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ


Team Udayavani, May 15, 2020, 6:44 AM IST

yake tiddu

ದೇವನಹಳ್ಳಿ: ಎಪಿಎಂಸಿ ಕಾಯ್ದೆಯನ್ನು ಹೊಸದಾಗಿ ತಿದ್ದುಪಡಿಗೊಳಿಸಲು ಹೊರಟಿರುವ ಸರ್ಕಾರದ ಕ್ರಮ ವಿರೋಧಿಸಿ ಜಿಲ್ಲಾ ಕರ್ನಾಟಕ ರೈತ ಸಂಘದಿಂದ ಜಿಲ್ಲಾಡಳಿತ ಭವನದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕರ್ನಾಟಕ ರಾಜ್ಯ  ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್‌ ಮಾತನಾಡಿ, ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಬಂಡವಾಳ ಶಾಯಿಗಳು ಹಾಗೂ ಬಹು ರಾಷ್ಟ್ರೀಯ ಕಂಪನಿಗಳಿಗೆ ಮಣೆ ಹಾಕಲು ರಾಜ್ಯ ಸರ್ಕಾರ  ಮುಂದಾಗಿದೆ.

ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 1926ರಲ್ಲಿ ಬ್ರಿಟಿಷರು ರಾಯಲ್‌ ಕಮ್ಯೂಷನ್‌ ಅಗ್ರಿಕಲ್ಚರ್‌ ಎಂಬ ಆಯೋಗ ರಚಿಸಿ, ಹಲವು ಸಲಹೆ ಪಡೆದು ಕೃಷಿ ಮಾರುಕಟ್ಟೆಗೆ  ಬೇಕಾಗುವ ಕಾನೂನು ಜಾರಿಗೆ ತರಲಾಗಿತ್ತು. 1955ರಿಂದ ವಿವಿಧ ಬದಲಾವಣೆ ತಂದು, ರೈತರ ಕೃಷಿ ಮಾರುಕಟ್ಟೆಯಾಗಿ 11 ಜನ ಸದಸ್ಯರ ಸಮಿತಿ ಹಾಗೂ ಒಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಳ್ಳುವ ನೀತಿ ಜಾರಿಗೆ ಬಂದಿತು.

ಈಗ  ದೇಶದಲ್ಲಿ ಸುಸಜ್ಜಿತ ಮಾರುಕಟ್ಟೆಗಳಿವೆ. ಎಲ್ಲಾ ಬೆಳೆಗಳಿಗೂ ಮಾರಕಟ್ಟೆ ಕಲ್ಪಿಸಲಾಗಿದೆ. ಶತಮಾನಗಳ ಹಳೆಯ ಮಾರುಕಟ್ಟೆ ಸುಧಾರಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಒದಗಿಸಿ ಕೃಷಿಕನಿಗೆ ಸರ್ಕಾರ ಸ್ಪರ್ಧಾತ್ಮಕವಾದ  ಬೆಲೆ ಕೊಡಿಸಲು ಕಾರ್ಯಕ್ರಮ ಜಾರಿಗೆ ತರಬೇಕಾಗಿತ್ತು. ಆದರೆ ಈಗ ಅಂತಾರಾಷ್ಟ್ರೀಯ ವ್ಯಾಪಾರಿಗಳು ದೇಶದ ಕಾಪೋರೇಟ್‌ ಕಂಪನಿಗಳಿಗೆ ಅನುಕೂಲವಾಗುವಂತೆ ಕೃಷಿ ಮಾರುಕಟ್ಟೆಯನ್ನಾಗಿ ಒದಗಿಸಲು ಮಡುತ್ತಿರುವ  ತಿದ್ದುಪಡಿಯೇ ಈ ಹೊಸ ನೀತಿಯಾಗಿದೆ.

ಈ ಹೊಸ ಎಪಿಎಂಸಿ ತಿದ್ದಪಡಿಯನ್ನು ತಮ್ಮ ರಾಜ್ಯ ಸರಕಾರದ ಸಚಿವ ಸಂಪುಟ ತೀರ್ಮಾನ ಮಾಡಿ, ಅದನ್ನು ತಕ್ಷಣವೇ ರಾಜ್ಯಪಾಲರಿಗೆ ಕಳುಹಿಸಬೇಕು ಎಂದು ತಾಕೀತು ಮಾಡಿತ್ತು. ಅದರಂತೆ  ರಾಜ್ಯಸರಕಾರ ತಿದ್ದುಪಡಿಗಳಿಗೆ ತೀರ್ಮಾನಿಸಿ, ರಾಜ್ಯಪಾಲರ ಮುಂದೆ ಹಾಜರುಪಡಿಸಲಾಗಿದೆ. ಕೂಡಲೇ ರಾಜ್ಯ ಪಾಲರು ಸುಗ್ರಿವಾಜ್ಞೆ ಜಾರಿಗೆಯಾಗದಂತೆ ಸಹಿ ಹಾಕಬಾರದು.

ರೈತರಿಗೆ ಶಾಪವಾಗಿರುವ ಈ ಮರಣ ಶಾಸನವನ್ನು ಮುಖ್ಯಮಂತ್ರಿಗಳು ಕಡತ  ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌. ಕೆ.ನಾಯಕ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್‌, ತಾಲೂಕು ರೈತ ಸಂಘದ ಕಾರ್ಯದರ್ಶಿ  ಬಿದಲೂರು ರಮೇಶ್‌, ವಿಜಯಪುರ ಹೋಬಳಿ ಅಧ್ಯಕ್ಷ ನಾರಾಯಣಸ್ವಾಮಿ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಹನುಮೇಗೌಡ, ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.