ನಿನ್ನೆ ಒಂದೇ ದಿನ 36 ಸೋಂಕು ಪ್ರಕರಣ ದೃಢ


Team Udayavani, May 17, 2020, 7:53 AM IST

ninne-onde

ಬೆಂಗಳೂರು: ಕೋವಿಡ್‌ 19 ಕರಾಳಛಾಯೆ ದಿನೇದಿನೆ ಹೆಚ್ಚುತ್ತಿದ್ದು, ಶನಿವಾರ ಒಂದೇ ದಿನ ರಾಜ್ಯದಲ್ಲಿ 36 ಪ್ರಕರಣ ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ  14, ಕಲಬುರಗಿಯಲ್ಲಿ 8, ಹಾಸನದಲ್ಲಿ 4, ಶಿವಮೊಗ್ಗದಲ್ಲಿ 3, ಮಂಡ್ಯ, ಉಡುಪಿ, ಧಾರವಾಡ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಬಳ್ಳಾರಿಯಲ್ಲಿ ತಲಾ ಒಂದು ಪ್ರಕರಣ ಹೊಸದಾಗಿ ವರದಿಯಾಗಿದೆ.

ಇದರೊಂದಿಗೆ 48  ಗಂಟೆಗಳಲ್ಲಿ 105 ಮಂದಿಗೆ ಸೋಂಕು ತಗುಲಿದ್ದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ವರದಿಯಾದ ಎಲ್ಲ ಪ್ರಕರಣಗಳು ಶಿವಾಜಿನಗರದ ಹೋಟೆಲ್‌ ಹೌಸ್‌ ಕಿಪಿಂಗ್‌ ಸಿಬ್ಬಂದಿಯ (ರೋಗಿ 653) ದ್ವಿತೀಯ ಸಂಪರ್ಕದಿಂದ ಹರಡಿದೆ. ಈ ವ್ಯಕ್ತಿಯಿಂದ ಎರಡು ದಿನಗಳಲ್ಲಿ 25 ಮಂದಿ ಸೋಂಕಿತರಾಗಿದ್ದಾರೆ. ಈ ಬಗ್ಗೆ ಬಿಬಿಎಂಪಿ ಕೂಡ ಹೆಚ್ಚಿನ ನಿಗಾವಹಿಸಲು ಆರಂಭಿಸಿದೆ. ಕಲಬುರಗಿಯಲ್ಲಿ 10 ವರ್ಷದ ಬಾಲಕಿ ಸೇರಿ 7ಮಂದಿಗೆ ಇಬ್ಬರು ರೋಗಿಗಳಿಂದ ಸೋಂಕು ಹರಡಿದೆ.  ಮುಂಬೈಗೆ ಪ್ರಯಾಣ ಮಾಡಿ ವಾಪಸ್ಸಾಗಿದ್ದ ಅಲ್ಲಿನ 34 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

ವಿಜಯಪುರದಲ್ಲಿ 594ನೇ ರೋಗಿಯ ಸಂಪರ್ಕದಿಂದ 4 ವರ್ಷದ ಹೆಣ್ಣು ಮಗುವಿಗೆ ಸೋಂಕು ತಗುಲಿದೆ. ಇನ್ನು ಕೆಲವು ದಿನಗಳ ಹಿಂದೆ  ಹಸಿರು ವಲಯದಲ್ಲಿದ್ದ ಹಾಸನದಲ್ಲಿ ಈಗ 20 ಪ್ರಕರಣ ದೃಢಪಟ್ಟಿದೆ. ಒಂದೇ ದಿನ ನಾಲ್ಕು ಪ್ರಕರಣ ಬೆಳಕಿಗೆ ಬಂದಿದೆ. ಎಲ್ಲವೂ ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿದೆ. ಹಾಗೆಯೇ ಶನಿವಾರ ಶಿವಮೊಗ್ಗ ದಲ್ಲಿ ದೃಢಪಟ್ಟಿದ್ದ ಮೂರು ಪ್ರಕರಣಕ್ಕೂ ಮುಂಬೈ ಪ್ರಯಾಣದ ಹಿಸ್ಟರಿಯಿದೆ. ಒಟ್ಟಾರೆಯಾಗಿ 36 ಪ್ರಕರಣಗಳಲ್ಲಿ 10ಕ್ಕೆ ಮಹಾರಾಷ್ಟ್ರದ ನಂಟಿದ್ದರೆ, ತಲಾ ಒಂದೊಂದು ದುಬೈ, ಅಹಮದಬಾದ್‌ ಪ್ರಯಾಣ ಹಿನ್ನೆಲೆಯಿದೆ ಎಂದು ಆರೋಗ್ಯ ಇಲಾಖೆ  ತಿಳಿಸಿದೆ.

ಕ್ರಿಮಿನಲ್‌ ಮೊಕದ್ದಮೆ: ಬೆಂಗಳೂರಿನ ಪಾದರಾಯನಪುರದ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ತುಮಕೂರಿನ 45 ವರ್ಷದ ವ್ಯಕ್ತಿಯಲ್ಲಿ ಮೇ 9ರಂದು ಸೋಂಕು ದೃಢಪಟ್ಟಿತ್ತು. ನಿಯಮದ ವಿರುದ್ಧವಾಗಿ ಕಂಟೈನ್ಮೆಂಟ್‌  ವಲಯದಿಂದ ಅವರು ತುಮಕೂರಿನ ಶಿರಾಗೆ ಹೋಗಿದ್ದರು. ಹಾಗಾಗಿ ಕಾನೂನಿನ ಅಡಿಯಲ್ಲಿ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು. ಕಂಟೈನ್ಮೆಂಟ್‌ ವಲಯದಿಂದ ಯಾರು ಕೂಡ ಹೊರಗೆ ಹೋಗುವಂತಿಲ್ಲ. ಹೀಗಿದ್ದರೂ ಕೋವಿಡ್‌ 19 ದೃಢಪಟ್ಟಿ ವ್ಯಕ್ತಿ ಹೊರಗೆ ಹೋಗಿರುವುದು ಕಾನೂನಿಗೆ ವಿರುದ್ಧವಾಗಿದೆ.

ಹೀಗಾಗಿ ಕ್ರಿಮಿನಲ್‌ ಪ್ರಕರಣ ದಾಖಲಿಸಲಿದ್ದೇವೆ. ಪಾದರಾಯನಪುರದಿಂದ ಬಿಬಿಎಂಪಿ ಹಾಗೂ ಪೊಲೀಸರು  ಹೈರಾಣಾಗಿದ್ದಾರೆ. ಕಂಟೈ ನ್ಮೆಂಟ್‌ ವಲಯದಿಂದ ಹೊರಗೆ ಹೋಗುವುದನ್ನು ತಡೆ ಯಲು ಎಲ್ಲ ರೀತಿಯ ಕ್ರಮ ಆಗುತ್ತಿದೆ. ಅಲ್ಲಿರು ವವರ ರಕ್ಷಣೆಗಾಗಿ ಕಂಟೈಮ್ಮೆಂಟ್‌ ವಲಯ ಮಾಡಿ ದ್ದರೂ, ಅಲ್ಲಿಯವರು ಸಹಕರಿಸುತ್ತಿಲ್ಲ. ಕಾಂಪೌಂಡ್‌ ಹಾರುತ್ತಿವುದು ಬೆಳಕಿಗೆ ಬಂದಿದೆ ಎಂದು ಸಚಿವ ಸುರೇಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

559 ಕ್ರಿಯಾಶೀಲ ಪ್ರಕರಣ: ರಾಜ್ಯದಲ್ಲಿ ಶನಿವಾರ 36 ಪ್ರಕರಣ ಕಾಣಿಸಿಕೊಂಡಿದ್ದರಿಂದ ಈಗ 1092 ಸೋಂಕಿತ ಪ್ರಕರಣ ದೃಢಪಟ್ಟಿದ್ದು, ಅದರಲ್ಲಿ 559 ಕ್ರಿಯಾಶೀಲವಾಗಿರುವ ಪ್ರಕರಣವಾಗಿದೆ. 496 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆ ಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ  ಕೋವಿಡ್‌ 19 ಮಹಾಮಾರಿಗೆ 36 ಮಂದಿ ಬಲಿಯಾಗಿದ್ದಾರೆ. ಹಾಗೆಯೇ 13 ಮಂದಿ ನಿಗದಿತ ಆಸ್ಪತ್ರೆಗಳ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ  ದಿನ ಬೆಂಗಳೂ ರಿನಲ್ಲಿ 14 ಮಂದಿ ಗುಣಮುಖರಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.