ಆತ್ಮವಿಶ್ವಾಸ, ಪರಿಶ್ರಮದಿಂದ ಆತ್ಮನಿರ್ಭರ ಭಾರತ

ಆರೆಸ್ಸೆಸ್‌ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

Team Udayavani, May 18, 2020, 6:00 AM IST

ಆತ್ಮವಿಶ್ವಾಸ, ಪರಿಶ್ರಮದಿಂದ ಆತ್ಮನಿರ್ಭರ ಭಾರತ

ಬೆಂಗಳೂರು: ಆರ್ಥಿಕತೆ ಸಹಿತ ಅನ್ನ, ಅರಿವು, ವಸ್ತ್ರ ಮತ್ತು ವಸತಿಯಲ್ಲಿ ಪೂರ್ಣ ಸ್ವಾವ ಲಂಬನೆ ಪಡೆಯಲು ಜನ ಮನವು ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ಬೆಳೆದಾಗ “ಆತ್ಮ ನಿರ್ಭರ ಭಾರತ’ ನಿರ್ಮಾಣ ಸಾಧ್ಯ…

-ಇದು ಆರೆಸ್ಸೆಸ್‌ ಸಹ ಸರಕಾರ್ಯ ವಾಹ ದತ್ತಾತ್ರೇಯ ಹೊಸಬಾಳೆಯವರ ಅಭಿಪ್ರಾಯ. ಸಮರ್ಥ ಭಾರತ ಸಂಘ ಟನೆ ಹಮ್ಮಿಕೊಂಡಿರುವ ಫೇಸ್‌ಬುಕ್‌ ಲೈವ್‌ ಉಪನ್ಯಾಸ ಸರಣಿಯಲ್ಲಿ ರವಿವಾರ ಅವರು ಆತ್ಮ ನಿರ್ಭರ ಭಾರತ – ಸಮರ್ಥ ಭಾರತ ಕುರಿಕು ಮಾತನಾಡಿದ್ದಾರೆ.

ನಮಗೆ ನಾವು ಭಾರವಾಗದೆ ಸ್ವಾವಲಂಬಿ ಗಳಾಗುವ ಪರಿಕಲ್ಪನೆಯು ಇಡೀ ಸಮಾಜಕ್ಕೆ ಬರಬೇಕು. ರಾಷ್ಟ್ರವು ಸ್ವಾವಲಂಬನೆ ಸಾಧಿಸ ಬೇಕಾದರೆ ಮತ್ತು ಸ್ವಯಂಪೂರ್ಣವಾಗ ಬೇಕಾದರೆ ನಾವೆಲ್ಲರೂ ಸ್ವಾವಲಂಬಿಗಳಾಗಬೇಕು. ಅದು ಸದಾ ಸುಖ ನೀಡುತ್ತದೆ. ನಮ್ಮ ಆವಶ್ಯಕತೆಗಳನ್ನು ನಾವೇ ತುಂಬಿಕೊಳ್ಳಬೇಕು. ದೇಶವೇ ಆತ್ಮವಾದಾಗ ಇನ್ನೊಂದು ದೇಶದ ಮೇಲೆ ಅವಲಂಬನೆ ತಪ್ಪುತ್ತದೆ. ಎಲ್ಲರಲ್ಲೂ ಸ್ವಾಭಿಮಾನ, ಸಂಘಟನೆ, ಸಶಕ್ತತೆ ತುಂಬಿಕೊಂಡಾಗ ರಾಷ್ಟ್ರವನ್ನು ಆತ್ಮ ನಿರ್ಭರ ಮಾಡಬಹುದು ಎಂದಿದ್ದಾರೆ ದತ್ತಾತ್ರೇಯ ಹೊಸಬಾಳೆ.

ಅನ್ನ, ಅರಿವು, ವಸ್ತ್ರ ಮತ್ತು ವಸತಿಯಲ್ಲಿ ಸ್ವಾವಲಂಬನೆ ಸಾಧಿಸಲು ನಮ್ಮಲ್ಲಿ ಸಂಪನ್ಮೂಲದ ಕೊರತೆಯಿಲ್ಲ. ಕೃಷಿ ಮತ್ತು ಔಷಧ, ಹಾಲು, ಹಣ್ಣು, ತರಕಾರಿಯಲ್ಲೂ ಸ್ವಾವಲಂಬನೆ ಸಾಧಿಸಬೇಕು. ದೇಶ ಪ್ರತಿ ಮಗು, ಪ್ರತಿ ಮನೆಗೂ ಹಾಲುಸಿಗುವಂತೆ ಮಾಡಲು ದೇಸಿ ಗೋವಿನ ತಳಿಗಳನ್ನು ಕಾಪಾಡಿ,ವೃದ್ಧಿಸುವ ಅಭಿಯಾನ ನಡೆ ಯಬೇಕು ಎಂದು ಹೇಳಿದರು.

ಸ್ವಾವಲಂಬನೆ
ಯಾವುದೇ ರಾಷ್ಟ್ರವು ಇನ್ನೊಂದು ರಾಷ್ಟ್ರದ ಆಕ್ರಮಣಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ರಕ್ಷಣೆ ಮತ್ತು ಭದ್ರತೆಯಲ್ಲಿ ಸ್ವಾವಲಂಬನೆ ಸಾಧಿಸಬೇಕು ಇಂಧನ, ಆಹಾರ ಭದ್ರತೆ ಮತ್ತು ವಿಜ್ಞಾನ,ಅನ್ವಯಿಕ ವಿಜ್ಞಾನ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಅತೀ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವ್ಯವಸ್ಥೆ, ಸಂಸ್ಥೆಗಳು ಬದಲಾಗಬೇಕು
ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಅನೇಕ ವ್ಯವಸ್ಥೆ ಮತ್ತು ಸಂಸ್ಥೆಗಳು ಬ್ರಿಟಿಷ್‌ ವಸಾಹತಿನಂತಿವೆ. ಇದರಿಂದ ಮುಕ್ತಿ ಹೊಂದಬೇಕು. ಶಿಕ್ಷಣ, ನ್ಯಾಯಾಂಗ, ಆಡಳಿತ ವ್ಯವಸ್ಥೆ ಮತ್ತು ಚುನಾವಣ ಪದ್ಧತಿಯಲ್ಲಿ ಬದಲಾವಣೆ ತರಬೇಕು. ಇವೆಲ್ಲವೂ ಭಾರತೀಯ ಜನಮನಕ್ಕೆ ಹೊಂದಿಕೊಳ್ಳುವಂತೆ ಮಾಡಬೇಕು ಎಂದಿದ್ದಾರೆ ಹೊಸಬಾಳೆ.

ಸಂಶೋಧನೆ ಅಗತ್ಯ
ಪುರಾತನ ಗ್ರಂಥಗಳನ್ನು ಪುನರ್‌ ಅಭಿವ್ಯಕ್ತಿಗೊಳಿಸುವ ಸಂಶೋಧನೆಗಳು ನಡೆಯಬೇಕು. ನಮ್ಮಲ್ಲಿರುವ ಜ್ಞಾನ ರಾಶಿಯನ್ನು ರಕ್ಷಿಸಿ ಮುಂದಿನ ಜನಾಂಗಕ್ಕೆ ನೀಡಬೇಕು ಎಂದು ಹೇಳಿದ್ದಾರೆ.

ಏಕತೆ ಅಗತ್ಯ
ಐಎಎಸ್‌-ಐಪಿಎಸ್‌ ನಡುವಿನ ಗುದ್ದಾಟ, ವೈದ್ಯ ಪದ್ಧತಿಯ ನಡುವಿನ ಗುದ್ದಾಟ ನಿಲ್ಲಬೇಕು. ವಿವೇಕಾನಂದರು ಹೇಳಿದಂತೆ ಒಳ್ಳೆಯ ಸಂಗತಿ ಎಲ್ಲಿಂದ ಬಂದರೂ ಸ್ವೀಕರಿಸುವಂತಿರಬೇಕು. ಎಲ್ಲೂ ಒಡಕು ಇರಬಾರದು; ಏಕತೆ ಅಗತ್ಯ ಎಂದು ಹೇಳಿದ್ದಾರೆ.

ಭಾರತವೇ ಮಾದರಿ
ಸಂಕಷ್ಟ ಸಂದರ್ಭಗಳಲ್ಲಿ ಜಪಾನ್‌, ಇಸ್ರೇಲ್‌ ನಿದರ್ಶನಗಳನ್ನು ನೀಡುವ ವಾಡಿಕೆಯಿದೆ. ಆದರೆ ಈಗ ಭಾರತವನ್ನೇ ಉದಾಹರಣೆ ನೀಡಬಹುದು. ಕೊರೊನಾ ನಿರ್ವಹಣೆಯಲ್ಲಿ ದೇಶವು ಸಂಘಟಿತ ವಾಗಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ. ಜನ ಮತ್ತು ಸರಕಾರ ಒಂದಾಗಿ ಈ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದ್ದೇವೆ. ಇನ್ನು ಮುಂದೆಯೂ ಇಡೀ ಸಮಾಜಹೀಗೆ ಎದ್ದುನಿಲ್ಲಬೇಕು ಎಂದಿದ್ದಾರೆ ಹೊಸಬಾಳೆ.

1947ರಲ್ಲಿ ದೇಶ ವಿಭಜನೆಯಾದ ಅನಂತರ ಅದೆಷ್ಟೋ ಬಾರಿ ಭಾರತವು ಏಕತೆ, ಒಗ್ಗಟ್ಟುಗಳಿಗೆ ಆಘಾತವಾಗುವ ಸಂದರ್ಭ ಎದುರಿಸಿದೆ. ದೇಶದ ಜನರ ಆಂತರಿಕ ಒಗ್ಗಟ್ಟು, ನಮ್ಮ ಪೂರ್ವಜರ ಋಣ, ಸಮರ್ಥ ನಾಯಕತ್ವದಿಂದ ಭಾರತ ಇಂದಿಗೂ ಏಕವಾಗಿ ಉಳಿದಿದೆ. ಇದು ಮುಂದೆಯೂ ಗಟ್ಟಿಯಾಗಿ ಇರಲಿದೆ.
-ದತ್ತಾತ್ರೇಯ ಹೊಸಬಾಳೆ,
ಆರೆಸ್ಸೆಸ್‌ ಸಹ ಸರಕಾರ್ಯವಾಹ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.