ಅವಿಶ್ವಾಸಕ್ಕೆ ವಿಶೇಷ ಸಭೆ ಕರೆಯುವಂತೆ ಮನವಿ


Team Udayavani, May 19, 2020, 4:06 PM IST

ಅವಿಶ್ವಾಸಕ್ಕೆ ವಿಶೇಷ ಸಭೆ ಕರೆಯುವಂತೆ ಮನವಿ

ಕೊಪ್ಪಳ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಶ್ವನಾಥರಡ್ಡಿ ವಿರುದ್ದ ಅವಿಶ್ವಾಸ ಮಂಡನೆಗೆ ಕಾಂಗ್ರೆಸ್‌ ನಾನಾ ರಣತಂತ್ರ ರೂಪಿಸುತ್ತಿದ್ದು, ಕೈ ಸದಸ್ಯರಿಗೆ, ಕಮಲದವರೇ ಜೈ ಎಂದಿದ್ದಾರೆ. ಇನ್ನು ಅವಿಶ್ವಾಸಕ್ಕೆ ವಿಶೇಷ ಸಭೆ ಕರೆಯುವಂತೆ ಕಾಂಗ್ರೆಸ್‌ನ ಜಿಪಂ ಸದಸ್ಯರು ಅಧ್ಯಕ್ಷ ವಿಶ್ವನಾಥರಡ್ಡಿ ಅವರಿಗೆ ಮನವಿ ಸಲ್ಲಿಸಲು ಮುಂದಾದ ತಕ್ಷಣ ಅಧ್ಯಕ್ಷರು ಮನವಿ ಸ್ವೀಕರಿಸಲು ನಿರಾಕರಣೆ ಮಾಡಿದ ಪ್ರಸಂಗವೂ ನಡೆದಿದೆ.

ಇಲ್ಲಿನ ಜಿಪಂ ವಿಶೇಷ ಕೊಠಡಿಯಲ್ಲಿ ಕಾಂಗ್ರೆಸ್‌ನ ರಾಜಶೇಖರ ಹಿಟ್ನಾಳ ನೇತೃತ್ವದ ಸದಸ್ಯರ ತಂಡ ಅಧ್ಯಕ್ಷ ವಿಶ್ವನಾಥರಡ್ಡಿ ಅವರಿಗೆ ಅವಿಶ್ವಾಸಕ್ಕೆ ವಿಶೇಷ ಸಭೆ ಕರೆಯುವಂತೆ ಮನವಿ ಮಾಡಿತು. ಆದರೆ ವಿಶ್ವನಾಥರಡ್ಡಿ ಅವರು ತಮ್ಮ ವಿರುದ್ದ ಅವಿಶ್ವಾಸಕ್ಕೆ ಸಲ್ಲಿಸುವ ಮನವಿ ಸ್ವೀಕಾರಕ್ಕೆ ನಿರಾಕರಣೆ ಮಾಡಿ ಕೊಠಡಿಯಿಂದ ಹೊರನಡೆದರು. ಇದರಿಂದ ಕೈ ಸದಸ್ಯರು ಅವರ ಆಪ್ತ ಸಹಾಯಕರಿಗೆ ಮನವಿ ಸಲ್ಲಿಸಿ ಸ್ವೀಕೃತಿ ಪ್ರತಿ ಪಡೆದರು. ಇನ್ನು ಜಿಪಂ ಸಿಇಒ ರಘುನಂದನ್‌ ಮೂರ್ತಿ ಅವರಿಗೆ ಕೈ ಸದಸ್ಯರೇ ಮತ್ತೂಂದು ಮನವಿ ಸಲ್ಲಿಸಿ ಅಧ್ಯಕ್ಷರ ವಿರುದ್ದ ಅವಿಶ್ವಾಸಕ್ಕೆ ವಿಶೇಷ ಸಭೆ ಕರೆಯುವಂತೆ ಒತ್ತಾಯಿಸಿದರು.

ಮನವಿಗೆ ಬಿಜೆಪಿ ಸದಸ್ಯರ ಸಹಿ: ಕಾಂಗ್ರೆಸ್‌ ಸದಸ್ಯರು ಹೇಗಾದರೂ ಮಾಡಿ ಅಧ್ಯಕ್ಷ ವಿಶ್ವನಾಥರಡ್ಡಿ ಅವರನ್ನು ಗಾದಿಯಿಂದ ಕೆಳಗೆ ಇಳಿಸಬೇಕೆಂದು ಪ್ರಯತ್ನ ನಡೆಸಿದ್ದಾರೆ. ಆದರೆ, ಅಧ್ಯಕ್ಷ ವಿಶ್ವನಾಥರಡ್ಡಿ ಅವರು ಕಮಲದ ಬೆನ್ನು ಬಿದ್ದು ತಮ್ಮ ಗಾದಿ ಉಳಿವಿಗೆ ನಾನಾ ಕಸರತ್ತು ನಡೆಸಿದ್ದಾರೆ. ಪ್ರಸ್ತುತ ಕಾಂಗ್ರೆಸ್‌ನ 17 ಸದಸ್ಯರಿದ್ದು ಅಧ್ಯಕ್ಷರನ್ನು ಹೊರತುಪಡಿಸಿ 16 ಸದಸ್ಯರು ಉಳಿಯಲಿದ್ದಾರೆ. ಬಿಜೆಪಿ 11 ಸದಸ್ಯರಿದ್ದು, ಓರ್ವ ಪಕ್ಷೇತರ ಸದಸ್ಯನಿದ್ದಾನೆ. ಒಂದೆಡೆ ಅಧ್ಯಕ್ಷ ಕಮಲದ ಬೆನ್ನು ಬಿದ್ದಿದ್ದರೆ, ವಿಚಿತ್ರವೆಂಬಂತೆ ಕಮಲದ ನಾಲ್ಕು ಸದಸ್ಯರೇ ಅಧ್ಯಕ್ಷರ ವಿರುದ್ಧದ ಅವಿಶ್ವಾಸದ ಅರ್ಜಿಗೆ ಸಹಿ ಮಾಡಿದ್ದು ಹಲವು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.