CET ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 75 ಹೊಸ ಪರೀಕ್ಷಾ ಕೇಂದ್ರಗಳು
ಪರೀಕ್ಷಾ ಕೆಂದ್ರಗಳನ್ನು ಬದಲಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮೇ 22ರವರೆಗೆ ಅವಕಾಶ
Team Udayavani, May 19, 2020, 8:30 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಈಗಾಗಲೇ ಪ್ರಕಟಿಸಿರುವ ಪರಿಷ್ಕೃತ ವೇಳಾಪಟ್ಟಿಯಂತೆ 2020ನೇ ಸಾಲಿನ ಸಿಇಟಿ ಪರೀಕ್ಷೆಗಳು ಜುಲೈ 30 ಹಾಗೂ 31ರಂದು ನಡೆಯಲಿವೆ.
ಕೋವಿಡ್ 19 ಪರಿಸ್ಥಿತಿಯನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ಸಮೀಪ ಇರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆಗೆ ಹಾಜರಾಗಲು ಈಗಾಗಲೇ ಅವಕಾಶ ನೀಡಲಾಗಿದೆ.
ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 75 ಸ್ಥಳಗಳನ್ನು ಹೊಸ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಹೊಸದಾಗಿ ಸೇರ್ಪಡೆಗೊಂಡಿರುವ 75 ಪರೀಕ್ಷಾ ಕೇಂದ್ರಗಳ ಮಾಹಿತಿ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿದೆ.
ಈ ಹೊಸ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿದ ಬಳಿಕ ವಿದ್ಯಾರ್ಥಿಗಳು ಅಗತ್ಯವೆಂದು ಕಂಡುಬಂದಲ್ಲಿ ತಾವು ಈ ಮೊದಲು ನಮೂದಿಸಿದ್ದ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಮತ್ತು ಅಭ್ಯರ್ಥಿಗಳು ಆದ್ಯತೆಯ ಮೇರೆಗೆ (ಪ್ರಯಾರಿಟಿ) ತಾವು ಹಾಜರಾಗಬಯಸುವ ಪರೀಕ್ಷಾ ಕೇಂದ್ರಗಳಿಗೆ ಮೂರು ಆಯ್ಕೆಗಳನ್ನು ಅಲ್ಲೇ ನೀಡಬಹುದಾಗಿರುತ್ತದೆ.
ಅಭ್ಯರ್ಥಿಯು ನೀಡುವ ಆದ್ಯತೆ ಮತ್ತು ಪರೀಕ್ಷಾ ಕೇಂದ್ರದ ಲಭ್ಯತೆಯ ಆಧಾರದಲ್ಲಿ ಪರೀಕ್ಷಾ ಕೇಂದ್ರಗಳನ್ನು ಸಿಇಟಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಸಿಇಟಿ-2020 ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಹಾಗೂ ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಮೇ 20ರ ಸಾಯಂಕಾಲ 6.00ರಿಂದ ಮೇ 22ರ ಸಾಯಂಕಾಲ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ಈಗಾಗಲೇ ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಿಕೊಳ್ಳುವ ಅವಕಾಶವನ್ನೂ ಸಹ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.