ಭತ್ತ ಖರೀದಿಸಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ


Team Udayavani, May 21, 2020, 5:49 AM IST

ಭತ್ತ ಖರೀದಿಸಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ

ದಾವಣಗೆರೆ: ರೈತರ ಸಂಕಷ್ಟಕ್ಕೆ ರೈಸ್‌ಮಿಲ್‌ ಮಾಲೀಕರು ಸ್ಪಂದಿಸಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ರೈಸ್‌ಮಿಲ್‌ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈಸ್‌ಮಿಲ್‌ ಮಾಲೀಕರೊಂದಿಗೆ ಜಿಲ್ಲಾಡಳಿತ ಇರಲಿದೆ. ಯಾವುದೇ ರೀತಿಯ ನಷ್ಟ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ನಿಮ್ಮ ಬಗ್ಗೆ ಮುತುವರ್ಜಿ ವಹಿಸಲಿದ್ದು ರೈತರಿಗೆ ನೆರವಾಗಲು ಇದೊಂದು ಒಳ್ಳೆಯ ಅವಕಾಶ ಎಂದರು.

ಜಿಲ್ಲೆಯಲ್ಲಿ ರೈತರು ಸಾಕಷ್ಟು ಪ್ರಮಾಣದಲ್ಲಿ ಭತ್ತ ಬೆಳೆದಿದ್ದಾರೆ. ನಾಲ್ಕೆçದು ರೈಸ್‌ ಮಿಲ್‌ ಮಾಲಿಕರು ರೈತರಿಂದ ಭತ್ತ ಖರೀದಿಗೆ ಮುಂದಾಗಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯು ರೈತರ ಪರವಾಗಿದ್ದು, ಇದರಡಿ ಯಾವುದೇ ರೀತಿ ನಷ್ಟ ಮಾಡಿಕೊಂಡು ಭತ್ತ ಖರೀದಿಸುವ ಅವಶ್ಯಕತೆಯಿಲ್ಲ. ಬದಲಾಗಿ ರೈತರು ಬೆಳೆದಿರುವ ಉತ್ತಮ ಗುಣಮಟ್ಟದ ಭತ್ತವನ್ನೇ ಖರೀದಿಸಿ. ಸಂಕಷ್ಟದ ಸಂದರ್ಭದಲ್ಲಿ ರೈಸ್‌ ಮಿಲ್ಲರ್ಗಳಲ್ಲೇ ಯಾರಾದರೂ ಭತ್ತ ಖರೀದಿಗೆ ಮುಂದಾದರೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೆಸ್ವಾಮಿ ಮಾತನಾಡಿ, ವಿವಿಧ ತಾಲೂಕುಗಳಲ್ಲಿ ಭತ್ತ ಮಾರಾಟಕ್ಕೆ 17 ರೈತರು ನೋಂದಾಯಿಸಿಕೊಂಡಿದ್ದರು. ಲಾಕ್‌ಡೌನ್‌ ಕಾರಣ ಒಂದು ತಿಂಗಳು ಭತ್ತ ಖರೀದಿ ಆಗಿರಲಿಲ್ಲ. ಆದರೆ ಇದೀಗ ಸರ್ಕಾರ ಭತ್ತ ಖರೀದಿಗೆ ಅನುಮತಿ ನೀಡಿದ್ದು, ರೈತರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಹೊನ್ನಾಳಿಯ ನೀಲಕಂಠೇಶ್ವರ ಹಾಗೂ ಮಂಜುನಾಥ್‌ ರೈಸ್‌ ಮಿಲ್‌ ಮತ್ತು ಕುಂಬಳಗೋಡಿನ ಆಂಜನೇಯ ರೈಸ್‌ಮಿಲ್‌ ನವರು ಭತ್ತ ಖರೀದಿಗಾಗಿ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಭತ್ತ ತುಂಬಾ ಬೆಳೆಯಲಾಗಿದ್ದು, ಬೆಲೆ ಕೂಡ ಕಡಿಮೆಯಾಗಿದೆ. ಭತ್ತ ಖರೀದಿಗೆ ಈ ಭಾಗದ ರೈತರ ಅನುಕೂಲಕ್ಕೆ ಜಿಲ್ಲೆಯಲ್ಲಿ ಕನಿಷ್ಠ 5 ಜನ ರೈಸ್‌ಮಿಲ್‌ ನವರು ಮುಂದಾಗಬೇಕಿದೆ ಎಂದು ಹೇಳಿದರು.

ರೈಸ್‌ ಮಿಲ್‌ ಮಾಲೀಕರ ಸಂಘದ ಅಧ್ಯಕ್ಷ ಕೋಗುಂಡೆ ಬಕ್ಕೇಶಪ್ಪ ಮಾತನಾಡಿ, ಸೋನಾ ಮಸೂರಿ, ಆರ್‌ಎನ್‌ಆರ್‌ ಭತ್ತದ ತಳಿಗಳ ಬೆಲೆ ಜಾಸ್ತಿ ಇರುತ್ತದೆ. ಮಳೆಯಿಂದಾಗಿ ಭತ್ತ ಹಸಿ ಇರಲಿದೆ. ಈ ರೀತಿಯ ಸಂದರ್ಭ ನಮಗೂ ಹೊಸದಾಗಿದೆ. ನಾವೆಲ್ಲರೂ ಚರ್ಚಿಸಿ, ನಿಮಗೆ ಸಹಕಾರ ನೀಡಲಿದ್ದೇವೆ ಎಂದು ತಿಳಿಸಿದರು.

ರೈತ ಕುಂದವಾಡ ಹನುಮಂತಪ್ಪ ಮಾತನಾಡಿ, ಮಳೆಗಾಲದಲ್ಲಿ ಭತ್ತ ಒಣಗಿಸಲು ರೈತರಿಗೆ ತುಂಬಾ ಕಷ್ಟವಾಗುತ್ತದೆ. ಭತ್ತಕ್ಕೆ 1,500 ರೂ. ಬೆಲೆ ನಿಗದಿ ಮಾಡಿ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಸಭೆಯಲ್ಲಿ ಎಪಿಎಂಸಿ ಕಾರ್ಯದರ್ಶಿ ಪ್ರಭು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್‌ ಇತರರು ಇದ್ದರು.

ಟಾಪ್ ನ್ಯೂಸ್

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

M. P. Renukacharya:ಪ್ಯಾಲೆಸ್ತೇನ್‌ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ

M. P. Renukacharya:ಪ್ಯಾಲೆಸ್ತೇನ್‌ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.