![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, May 22, 2020, 2:11 AM IST
ಶಿಮ್ಲಾ: ಲಾಕ್ಡೌನ್ ಹಿನ್ನಲೆಯಲ್ಲಿ 56 ದಿನಗಳ ಕಾಲ ಪಶ್ಚಿಮ ಬಂಗಾಲದಲ್ಲಿ ಸಿಲುಕಿದ್ದ ಮದುವೆಯ ದಿಬ್ಬಣ ಹಿಮಾಚಲ ಪ್ರದೇಶಕ್ಕೆ ಮರಳಿದೆ.
ಮಾರ್ಚ್ 21ರಂದು 17 ಮಂದಿಯ ಮದುವೆ ದಿಬ್ಬಣ ಗುರ್ಮುಖಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮೂಲಕ ಕೊಲ್ಕತ್ತಾಗೆ ಮಾ. 22ರಂದು ಬಂದಿದ್ದರು. 22 ರಂದು ಜನತಾ ಕರ್ಫ್ಯೂ ಘೋಷಣೆಯಾಯಿತು.
ಹೀಗಾಗಿ ನಾವು ಲಾಕ್ ಡೌನ್ ನಲ್ಲಿ ಸಿಲುಕಿಕೊಂಡೆವು ಎಂದು ಮದುಮಗ ಸುನೀಲ್ ಕುಮಾರ್ ಹೇಳಿದ್ದಾರೆ.
ಮಾ.25ರಂದು ಪಶ್ಚಿಮ ಬಂಗಾಲದ ಪುರುಲಿಯಾ ಜಿಲ್ಲೆಯ ಕಾಶಿಪುರ ಗ್ರಾಮದಲ್ಲಿ ಸಂಜೋಗಿತಾರ ವಿವಾಹ ಸುನೀಲ್ ಕುಮಾರ್ ವಿವಾಹವನ್ನು ನಿಗದಿಪಡಿಸಲಾಗಿತ್ತು.
ವಧುವಿನೊಂದಿಗೆ ಮಾ.26 ರಂದು ಹಿಮಾಚಲ ಪ್ರದೇಶಕ್ಕೆ ವಾಪಸಾಗಲು ರೈಲಿಗೆ ಟಿಕೆಟ್ ಕಾಯ್ದಿರಿಸಲಾಗಿತ್ತು. ಇದೇ ಸಂದರ್ಭದಲ್ಲಿ ರೈಲು ಸಂಚಾರ ರದ್ದಾಗಿದ್ದ ಕಾರಣ ಧರ್ಮಶಾಲಾದಲ್ಲಿ ಇರಬೇಕಾಗಿತ್ತು.
ಸುನೀಲ್ ಕುಮಾರ್ ಅವರ ಮಾವ ಕಾಶಿಪುರ ಧರ್ಮಶಾಲಾದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಿದರು.
ನಾವು ಪಶ್ಚಿಮ ಬಂಗಾಲದ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿದ್ದೇವೆ ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಂತರ, ನಾವು ಹಿಮಾಚಲ ಪ್ರದೇಶದ ಸಚಿವ ವೀರೇಂದ್ರ ಕನ್ವರ್ ಅವರನ್ನು ಸಂಪರ್ಕಿಸಿದೆವು. ಅವರು ನಮಗೆ ಪಡಿತರ ಸಿಗುವಂತೆ ಮಾಡಿದ್ದರು.
ಮೇ 14ರಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಗೆ ಹೊರಡುವ ಮೂಲಕ 50 ದಿನಗಳ ವಾಸ್ತವ್ಯ ಮುಕ್ತಾಯವಾಯಿತು. 1,850 ಕಿಮೀ ಪ್ರಯಾಣವನ್ನು 55 ಗಂಟೆಗಳಲ್ಲಿ ಕ್ರಮಿಸಲಾಯಿತು. ಇದೀಗ ಅವರನ್ನೆಲ್ಲ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.