ಕೋವಿಡ್ ನಿಂದ ಸಾಮಾಜಿಕ ವ್ಯವಸ್ಥೆಯೇ ಬದಲು: ಪಾಟೀಲ್‌


Team Udayavani, May 22, 2020, 11:47 AM IST

22-May-04

ಸಾಂದರ್ಭಿಕ ಚಿತ್ರ

ದಾವಣಗೆರೆ: ಕೋವಿಡ್ ವೈರಾಣು ಜಗತ್ತಿನ ಎಲ್ಲ ವರ್ಗದ ಜನರ ಸಾಮಾಜಿಕ ವ್ಯವಸ್ಥೆಯನ್ನೇ ಬದಲಿಸಿದೆ ಎಂದು ಸಾಹಿತಿ ಡಾ| ಸಿದ್ದನಗೌಡ ಪಾಟೀಲ್‌ ಪ್ರತಿಪಾದಿಸಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸಾಮಾಜಿಕ ಸ್ಥಿತ್ಯಂತರ ಕುರಿತ ವಿಶೇಷ ಆನ್‌ಲೈನ್‌ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆ ಮಂತ್ರದಿಂದ ರೋಗ ವಾಸಿಯಾಗುತ್ತೆ ಎಂಬ ನಂಬಿಕೆಯನ್ನು ಅಳಿಸಿ ವೈಜ್ಞಾನಿಕ ಸಮಾಜವನ್ನು ನಿರ್ಮಿಸಿದೆ ಎಂದರು.

ಕೋವಿಡ್ ವೈರಸ್‌ ಜನರಲ್ಲಿದ್ದ ಮೌಡ್ಯವನ್ನು ದೂರ ಮಾಡಿ ಸಾಮಾಜಿಕ ಬಾಂಧವ್ಯವನ್ನು ಹೆಚ್ಚಿಸಿದೆ. ದೇವರು, ಧರ್ಮ ಎಂಬ ಆಚರಣೆಗಳನ್ನು ಬದಿಗಿಟ್ಟು ಬದುಕಿನ ಸತ್ಯವನ್ನು ತಿಳಿಸಿಕೊಟ್ಟಿದೆ. ದೈಹಿಕ ಅಂತರ, ಮಾರುಕಟ್ಟೆ ಮಹತ್ವ, ಸಾಮಾಜಿಕ ಪ್ರಜ್ಞೆಯನ್ನು ಅರ್ಥೈಸಿ ಜನರ ಹಿತಕ್ಕಾಗಿ ಪ್ರಜಾಪ್ರಭುತ್ವಕ್ಕೆ ಯಾವ ರೀತಿಯ ಮುಂದಾಲೋಚನೆ ಬೇಕು ಎಂಬ ಹೊಸ ರಾಜಕೀಯ ಶಾಸ್ತ್ರವನ್ನು ತಿಳಿಸಿಕೊಟ್ಟಿದೆ. ಆರ್ಥಿಕ ಹಸಿವು, ಸಾಮಾಜಿಕ ಅಸ್ಪೃಶ್ಯತೆಯಿಂದ ಕಂಗೆಟ್ಟು ವಲಸೆ ಹೋಗಿದ್ದ ಕಾರ್ಮಿಕರು ವಾಪಸ್‌ ಬರುವಂತಾಗಿದೆ. ಅಸಂಖ್ಯಾತರು ಉದ್ಯೋಗವಿಲ್ಲದೆ ನಿರಾಶ್ರಿತರಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರ ಅವರೆಲ್ಲರ ರಕ್ಷಣೆಯ ಮಾರ್ಗ ಕಂಡುಕೊಳ್ಳಲು ಮುಂದಾಗಬೇಕಾಗಿದೆ ಎಂದು ಒತ್ತಾಯಿಸಿದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಮಾತನಾಡಿ, ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿ, ನವ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು. ಸರ್ಕಾರದ ಜೊತೆ ನಿಂತು ಆತಂಕ ನಿವಾರಿಸಿ ದೇಶವನ್ನು ಸದೃಢಗೊಳಿಸಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು. ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಶಿವಕುಮಾರ ಕಣಸೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವರಾದ ಪ್ರೊ| ಬಸವರಾಜ ಬಣಕಾರ, ಪ್ರೊ| ಎಚ್‌.ಎಸ್‌. ಅನಿತಾ ಇದ್ದರು.

ಟಾಪ್ ನ್ಯೂಸ್

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.